Raichur; ಮಸೀದಿಗೆ ಮಧ್ಯದ ಬಾಟಲಿ ಎಸೆತ: 7 ಯುವಕರ ಬಂಧನ
Team Udayavani, Jul 31, 2024, 9:09 AM IST
ಸಿರವಾರ(ರಾಯಚೂರು) : ಪಟ್ಟಣದ ಬಸ್ ನಿಲ್ದಾಣ ಹಿಂದಿರುವ ಮುಸ್ಲಿಂ ಪ್ರಾರ್ಥನಾ ಮಂದಿರದಲ್ಲಿ ಮದ್ಯದ ಬಾಟಲಿ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 7 ಮಂದಿ ಯುವಕರನ್ನು ಬಂಧಿಸಿದ್ದಾರೆ.
ಕೆಲ ಯುವಕರು ಮದ್ಯ ಕುಡಿದು ಬಿಯರ್ ಬಾಟಲಿಯನ್ನು ಮಸೀದಿ ಒಳಗಡೆ ಎಸೆದಿದ್ದರು. ವಿಷಯ ತಿಳಿದ ಮುಸ್ಲಿಂ ಸಮುದಾಯದವರು ಆರೋಪಿಗಳನ್ನಿನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ತಡರಾತ್ರಿ ಮುಖ್ಯರಸ್ತೆ ತಡೆದು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ರಾತ್ರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ, ಎಎಸ್ಪಿ ಶಿವಕುಮಾರ, ಡಿವೈಎಸ್ಪಿ ಬಿಎಸ್ ತಳವಾರ, ಸಿಪಿಐ ಶಶಿಕಾಂತ, ಪಿಎಸ್ಐ ಗುರುಚಂದ್ರ ಯಾದವ್ ಭೇಟಿ ನೀಡಿ ಪ್ರತಿಭಟನಾನಿರತರೊಂದಿಗೆ ಮಾತನಾಡಿ ಆರೋಪಿಗಳ ಬಂಧನ ಮಾಡುವ ಭರವಸೆ ನೀಡಿದರು. ಬಳಿಕ ಪ್ರಕರಣಕ್ಕೆ ಸಂಬಂಧಿಸಿ 7 ಯುವಕರನ್ನು ಬಂಧಿಸಲಾಗಿದೆ. ಈ ಕುರಿತು ಸಿರವಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.