Gadag: ಬಿಡಾಡಿ ಗೂಳಿ ಗುದ್ದಿ ವೃದ್ಧ ಸ್ಥಳದಲ್ಲೇ ಸಾವು
Team Udayavani, Jul 31, 2024, 10:07 AM IST
ಗದಗ: ಬಿಡಾಡಿ ದನಗಳ ಹಾವಳಿಗೆ ವೃದ್ಧ ಬಲಿಯಾಗಿರುವ ಘಟನೆ ಬುಧವಾರ ಬೆಳಗ್ಗೆ ಬೆಟಗೇರಿ ಪಟ್ಟಣದಲ್ಲಿ ನಡೆದಿದೆ.ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದ ಶಂಕರಪ್ಪ ಹೊಳಿ (70) ವರ್ಷದ ವೃದ್ಧ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಟಗೇರಿಯ ಸರಕಾರಿ ಪ್ರಾಥಮಿಕ ಶಾಲೆ ನಂಬರ್ 7ರ ಹತ್ತಿದ ಬಿಡಾಡಿ ಗೂಳಿ ಇತರೆ ದನಗಳೊಂದಿಗೆ ಗುದ್ದಾಡುತ್ತಿರುವಾಗ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧನಿಗೆ ರಭಸವಾಗಿ ಗುದ್ದಿದೆ. ಪರಿಣಾಮ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಗದಗ-ಬೆಟಗೇರಿ ಅವಳಿ ನಗರದಲ್ಲಿ ಬಿಡಾಡಿ ದನಗಳ ಹಾವಳಿ ಶಿರ್ಷಿಕೆಯಡಿ ಉದಯವಾಣಿ ಕಳೆದ ಜು. 19ರಂದು ವಿಸ್ತೃತವಾದ ವರದಿ ಪ್ರಕಟಿಸುತ್ತು. ಇಷ್ಟಾದರೂ ಎಚ್ಚೆತ್ತುಕೊಳ್ಳದ ನಗರಸಭೆ ನಿರ್ಲಕ್ಷ್ಯದಿಂದ ವೃದ್ಧನೊಬ್ಬ ಸಾವಿಗೀಡಾಗುವಂತಾಗಿದೆ.
ಈ ಕುರಿತು ಬೆಟಗೇರಿ ಪಿಎಸ್ಐ ಲಕ್ಷ್ಮಣ ಆರಿ ಮಾತನಾಡಿ, ಈಗಾಗಲೇ ನಗರಸಭೆಗೆ ಬಿಡಾಡಿ ದನಗಳ ಹಾವಳಿ ತಪ್ಪಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಈಗಾಗಲೇ ಪತ್ರ ಬರೆಯಲಾಗಿತ್ತು. ಈಗ ಮತ್ತೆ ನಗರಸಭೆಗೆ ಬಿಡಾಡಿ ದನಗಳ ಸ್ಥಳಾಂತರ ಮಾಡುವಂತೆ ಸೂಚಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.