Actor Darshan: ಮನೆಯೂಟ ಕೋರಿ ದರ್ಶನ್ ಕೋರ್ಟ್ ಗೆ ಬರೆದ ಪತ್ರ ವೈರಲ್
Team Udayavani, Jul 31, 2024, 10:58 AM IST
ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಮನೆ ಊಟ ಕೋರಿ 24ನೇ ಎಸಿಎಂಎಂ ಕೋರ್ಟ್ನ ನ್ಯಾಯಾಧೀಶರು, ಕಾರಾಗೃಹ ಡಿಜಿಪಿ, ಜೈಲಿನ ವೈದ್ಯಾಧಿಕಾರಿಗಳು, ಅಧೀಕ್ಷಕರಿಗೆ ಪತ್ರ ಬರೆದಿದ್ದು, ಪತ್ರ ವೈರಲ್ ಆಗಿದೆ.
ಜೈಲಿನಲ್ಲಿ ನಾನು ವಿಚಾರಣಾಧಿನ ಕೈದಿ ಆಗಿದ್ದೇನೆ. ಮೂರು ತಿಂಗಳ ಹಿಂದೆ ನನಗೆ ಮೂಳೆ ಸಂಬಂಧಿಸಿದ ಆಪರೇಷನ್ ಆಗಿದೆ. ಹೀಗಾಗಿ ನಾನು ನಿತ್ಯ ಕೆಲಸದ ನಿಮಿತ್ತ ಕಸರತ್ತು ನಡೆಸುತ್ತಿದ್ದು, ನನ್ನ ದೇಹಕ್ಕೆ ಪ್ರೋಟೀನ ಡಯಟ್ ಅವಶ್ಯಕತೆ ಇದೆ. ಜೈಲಿಗೆ ಬಂದ ದಿನದಿಂದ ನಾನು ಜೈಲಿನಲ್ಲಿ ನೀಡುತ್ತಿರುವ ಆಹಾರವನ್ನು ಸೇವಿಸುತ್ತಿದ್ದೇನೆ. ಅದರಿಂದ ನನ್ನ ಆರೋಗ್ಯ ಮತ್ತು ದೇಹದ ಮೇಲೆ ವ್ಯತಿರಿಕ್ತ ಪರಿಣಾಮ ಬಿರುತ್ತಿದೆ. ನನ್ನ ದೈಹಿಕ ಆರೋಗ್ಯ ಕಾಪಾಡಿ ಕೊಳ್ಳಲು ಜೈಲಿನಲ್ಲಿ ದೊರೆಯುವ ಆಹಾರದ ಜತೆಗೆ ಹೆಚ್ಚಿನ ಪ್ರೋಟೀನ್ ಆಹಾರ ನೀಡಬೇಕು. ಆದರೆ ಜೈಲಿನಲ್ಲಿ ನನಗೆ ಬೇಕಾದ ಆಹಾರದ ಕೊರತೆ ಇದ್ದು, ಸುಮಾರು 10 ಕೆ.ಜಿ. ತೂಕ ಕಡಿಮೆ ಆಗಿದ್ದೇನೆ. ಅದರಿಂದ ನನಗೆ ಮನೆ ಊಟದ ವ್ಯವಸ್ಥೆ ಮಾಡಕೊಡುವಂತೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.