Mangaluru; ವಿದ್ಯಾರ್ಥಿನಿಗೆ ಎದೆನೋವು: ಪ್ರಯಾಣಿಕರಿದ್ದ ಬಸ್ ನೇರ ಆಸ್ಪತ್ರೆಗೆ!
ಸಮಯಪ್ರಜ್ಞೆ ಮೆರೆದ ಬಸ್ ಸಿಬಂದಿಗಳಿಗೆ ವ್ಯಾಪಕ ಪ್ರಶಂಸೆ
Team Udayavani, Jul 31, 2024, 12:49 PM IST
ಮಂಗಳೂರು: ನಗರದ ಸಿಟಿ ಬಸ್ ನಲ್ಲಿ ಮಂಗಳವಾರ ಪ್ರಯಾಣಿಸುತ್ತಿದ್ದ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಏಕಾಏಕಿ ತೀವ್ರ ಎದೆ ನೋವಾಗಿ ಹೃದಯಾಘಾತದ ಮುನ್ಸೂಚನೆ ಸಿಗುತ್ತಿದ್ದಂತೆ ಎಚ್ಚೆತ್ತುಕೊಂಡ ಬಸ್ಸಿನ ಚಾಲಕ ಮತ್ತು ನಿರ್ವಾಹಕ ಬಸ್ಸನ್ನು ನೇರವಾಗಿ ಆಸ್ಪತ್ರೆಗೆ ಕೊಂಡೊಯ್ದು ಅವರಿಗೆ ನೆರವಾಗುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.
13ಎಫ್ ರೂಟ್ ನಂಬರ್ ಕೃಷ್ಣ ಪ್ರಸಾದ್ ಬಸ್ ಕುಳೂರು ಮಾರ್ಗವಾಗಿ ಚಲಿಸುತಿತ್ತು. ಅದರಲ್ಲಿ ಪ್ರಯಾಣಿಸುತಿದ್ದ ಪ್ರಯಾಣಿಕರೊಬ್ಬರಲ್ಲಿ ಎದೆನೋವು ಕಾಣಿಸಿಕೊಂಡಿತ್ತು. ಬಸ್ ಚಾಲಕ, ನಿರ್ವಾಹಕರಾದ ಗಜೇಂದ್ರ ಕುಂದರ್, ಮಹೇಶ್ ಪೂಜಾರಿ ಮತ್ತು ಸುರೇಶ್ ಅವರು ಕೂಡಲೇ ಎಚ್ಚೆತ್ತು ಎಲ್ಲಾ ಪ್ರಯಾಣಿಕರ ಸಮೇತ ಆಂಬುಲೆನ್ಸ್ ಮಾದರಿಯಲ್ಲಿ ಕಂಕನಾಡಿ ಆಸ್ಪತ್ರೆಗೆ ಕೊಂಡೊಯ್ದರು. ತತ್ ಕ್ಷಣ ವಿದ್ಯಾರ್ಥಿನಿಯನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಯಿತು.
ಚಾಲಕ, ನಿರ್ವಾಹಕರ ಮಾನವೀಯ ಕಾಳಜಿಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudubidire: 77 ಕೋ.ರೂ. ವೆಚ್ಚದ ಅಮೃತ್ 2.0 ನೀರಿನ ಯೋಜನೆಗೆ ಚಾಲನೆ
Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ
Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ
Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು
Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.