Kiradiಯ ರಸ್ತೆ ಸಂಪೂರ್ಣ ರಾಡಿ

ಆಟೋ ಸಿಗಲ್ಲ, ಶಾಲಾ ಬಸ್‌, ಗ್ಯಾಸ್‌ ಸಿಲಿಂಡರ್‌ ಮನೆ ತನಕ ಬರೋಲ್ಲ

Team Udayavani, Jul 31, 2024, 2:27 PM IST

kiradi

ಕೋಟ: ಬಾಡಿಗೆ ಇದೆ ನಮ್ಮೂರಿಗೆ ಬನ್ನಿ ಅಂದ್ರೆ ಆಟೋದವರು ನಿಮ್ಮ ರಸ್ತೆಗೆ ಬರೋಕಾಗಲ್ಲ ಸಾರಿ ಅಂತಾರೆ. ಗ್ಯಾಸ್‌ ಸಿಲಿಂಡರ್‌ ಹೊತ್ತು ಬರುವ ವಾಹನ ಕಿಲೋ ಮೀಟರ್‌ಗಟ್ಟಲೆ ಹಿಂದೆ ನಿಂತು ಗ್ಯಾಸ್‌ ತಗೊಂಡು ಹೋಗಿ ಅಂತಾರೆ. ಅಂಚೆ ಅಣ್ಣ ತರುವ ಕಾಗದಗಳು,ಪಿಂಚಣಿ ಹಣ ಮನೆ ವರೆಗೆ ಬರೋಲ್ಲ. ಯಾವಾಗಲೂ ಮನೆ ತನಕ ಬರುತ್ತಿದ್ದ ಶಾಲಾ ಬಸ್‌ ಈಗ ಸಂಚಾರವನ್ನು ನಿಲ್ಲಿಸಿದೆ. ಪುಟ್ಟ ಮಕ್ಕಳು ಶಾಲೆಗೆ ಕರೆದುಕೊಂಡು ಹೋಗಬೇಕಾದರೆ ರಾಡಿ ಎದ್ದ ರಸ್ತೆಯಲ್ಲಿ ಸರ್ಕಸ್‌ ಮಾಡಿಕೊಂಡು ಹೆತ್ತವರು ಮಕ್ಕಳೊಂದಿಗೆ ತೆರಳಬೇಕು. ಅನಾರೋಗ್ಯ ಪೀಡಿತರು ಆಸ್ಪತ್ರೆ ತಲುಪಬೇಕಿದ್ರೆ ಹರಸಾಹಸಪಡಬೇಕು ಇದು ಆವರ್ಸೆ ಗ್ರಾ.ಪಂ. ವ್ಯಾಪ್ತಿಯ ಕಿರಾಡಿ-ನಂಚಾರು ಸಂಪರ್ಕ ರಸ್ತೆಯ ನಿತ್ಯದ ಗೋಳು.

ಇತ್ತೀಚೆಗೆ ಸುರಿದ ಭಾರೀ ಮಳೆಗೆ ರಸ್ತೆ ಕೆಸರುಗದ್ದೆಯಂತಾಗಿದ್ದು ಜನ ಸಂಚಾರ, ವಾಹನ ಓಡಾಟಕ್ಕೆ ತೊಂದರೆಯಾಗಿದೆ. ಕಿರಾಡಿಯಿಂದನಂಚಾರು ಶ್ರೀಲಕ್ಷ್ಮೀ ವೆಂಕಟರಮಣ ದೇವಾಲಯ ಹಾಗೂ ಕಾಮಧೇನು ಗೋಶಾಲೆಯನ್ನು ಸಂಪರ್ಕಿಸುವ ಈ ರಸ್ತೆ ಎರಡೂ ಗ್ರಾಮಗಳ ಸಂಪರ್ಕ ಕೊಂಡಿ ಹಾಗೂ ಎರಡು ಊರಿನ ಹತ್ತಿರದ ಮಾರ್ಗ ಕೂಡ ಹೌದು. ಪ್ರತಿ ನಿತ್ಯ 50ಕ್ಕೂ ಹೆಚ್ಚು ಮನೆಗಳ ನೂರಾರು ಮಂದಿ ಈ ರಸ್ತೆಯಲ್ಲಿ ಸಂಚರಿಸುತ್ತಾರೆ. ದೈನಂದಿನ ಕೆಲಸಗಳಿಗೆ, ಅಗತ್ಯ ವಸ್ತುಗಳ ಖರೀದಿಗೆ ಈ ರಸ್ತೆಯನ್ನೇ ಅವಲಂಬಿಸಿದ್ದಾರೆ.

ಚರಂಡಿ ಸಮಸ್ಯೆ
ಐದಾರು ಕಿ.ಮೀ. ವಿಸ್ತೀರ್ಣದ ಈ ರಸ್ತೆಯಲ್ಲಿ ಸುಮಾರು 3 ಕಿ.ಮೀ.ನಷ್ಟು ಜಾಗ ಕಾಂಕ್ರೀಟೀಕರಣಕ್ಕೆ ಬಾಕಿ ಇದೆ ಹಾಗೂ ಕೆಲವು ಕಡೆಗಳಲ್ಲಿ ಚರಂಡಿ ವ್ಯವಸ್ಥೆ ಇಲ್ಲ. ಹೀಗಾಗಿ ಮಣ್ಣಿನ ರಸ್ತೆ ಇರುವ ಕಡೆಗಳಲ್ಲಿ ಮಳೆಗಾಲದಲ್ಲಿ ಸಮಸ್ಯೆ ಹೆಚ್ಚಿದೆ ನೀರು ರಸ್ತೆಯ ಮೇಲೆ ಹರಿದು ರಸ್ತೆ ಕೊಚ್ಚಿ ಹೋಗುತ್ತಿದೆ. ಆಡಳಿತ ವ್ಯವಸ್ಥೆ ಆದಷ್ಟು ಬೇಗ ರಸ್ತೆ ದುರಸ್ತಿಗೆ ಕ್ರಮ ಕೈಗೊಂಡು ನಮ್ಮ ಸಮಸ್ಯೆಯನ್ನು ದೂರ ಮಾಡಬೇಕು ಎನ್ನುವುದು ಇಲ್ಲಿನ ನಿವಾಸಿಗಳ ಬೇಡಿಕೆಯಾಗಿದೆ.

ಹೆಚ್ಚಿನ ಅನುದಾನ ಅಗತ್ಯ
ಸಮಸ್ಯೆಯ ಬಗ್ಗೆ ಸ್ಥಳೀಯರು ಮನವಿ ಮಾಡಿದ್ದಾರೆ. ಆದರೆ ರಸ್ತೆಯ ಸಮಗ್ರ ದುರಸ್ತಿಗೆ 50ಲಕ್ಷ ರೂ ಅನುದಾನಬೇಕಾಗಬಹುದು. ಹೀಗಾಗಿ ಗ್ರಾ.ಪಂ.ನಿಂದ ಕಾಮಗಾರಿ ಅಸಾಧ್ಯ. ಈ ಬಗ್ಗೆ ಗ್ರಾಮೀಣ ಅಭಿವೃದ್ಧಿ ಇಲಾಖೆಗೆ ಈಗಾಗಲೇ ಮನವಿ ಸಲ್ಲಿಸಲಾಗಿದೆ. ಅತೀ ಹೆಚ್ಚು ಸಮಸ್ಯೆ ಇರುವ ಕಿರಾಡಿ ಭಾಗದಲ್ಲಿ 300ಮೀಟರ್‌ನಷ್ಟು ಸ್ಥಳವನ್ನು 2-3ಲಕ್ಷ ವೆಚ್ಚದಲ್ಲಿ ದುರಸ್ತಿಗೊಳಿಸುವುದಾದರೆ ಉದ್ಯೋಗ ಖಾತ್ರಿ ಯೋಜನೆಯಡಿ ಸಹಕಾರ ನೀಡುವುದಾಗಿ ತಿಳಿಸಲಾಗಿದೆ.

– ಸೀತಾರಾಮ್‌ ಆಚಾರ್ಯ, ಪಿ.ಡಿ.ಒ. ಆವರ್ಸೆ ಗ್ರಾ.ಪಂ.

ಶೀಘ್ರ ಸಮಸ್ಯೆ ಬಗೆಹರಿಸಿ
ನಮ್ಮೂರಿನ ರಸ್ತೆ ಸಮಸ್ಯೆಯಿಂದ ಮಕ್ಕಳಿಂದ ಹಿಡಿದು ಹಿರಿಯರ ತನಕ ತೊಂದರೆ ಅನುಭವಿಸುತ್ತಿದ್ದಾರೆ. ಸಮಸ್ಯೆಯನ್ನು ಆದಷ್ಟು ಶೀಘ್ರ ಪರಿಹರಿಸುವಂತೆ ಆಡಳಿತ ವ್ಯವಸ್ಥೆಯನ್ನು ವಿನಂತಿಸುತ್ತೇವೆ

– ಅನಂತಪದ್ಮನಾಭ ಭಟ್‌, ಕಿರಾಡಿ, ಸ್ಥಳೀಯರು

ಬಾಡಿಗೆ ಜತೆ ಗ್ಯಾರೇಜ್‌ ಚಾರ್ಜ್‌ ಕೊಡ್ತೀರಾ!
ಈ ಭಾಗದ ಜನರು ನಿತ್ಯ ಸಂಚಾರಕ್ಕೆ ಬಹುತೇಕ ಆಟೋ ರಿಕ್ಷಾ ಅವಲಂಬಿಸಿದ್ದಾರೆ. ರಸ್ತೆಯ ಇಂದಿನ ಪರಿಸ್ಥಿತಿಯಲ್ಲಿ ರಿಕ್ಷಾ ಬಂದರೆ ಮಣ್ಣಿನಲ್ಲಿ ಹೂತು ಮೇಲೇಳುವುದಕ್ಕೆ ಕಷ್ಟ ಹಾಗೂ ಒಮ್ಮೆ ಈ ಮಾರ್ಗವಾಗಿ ಬಂದರೆ ಗ್ಯಾರೇಜ್‌ ದಾರಿ ಹಿಡಿಯಲೇಬೇಕು ಎನ್ನುವ ದುಃಸ್ಥಿತಿ ಇದೆ. ಹೀಗಾಗಿ ಆಟೋದವರ ಬಳಿ ನಮ್ಮೂರಿಗೆ ಬರ್ತೀರಾ ಅಂತ ಕೇಳಿದ್ರೆ ಬಾಡಿಗೆ ಜತೆ ಗ್ಯಾರೇಜ್‌ ಚಾರ್ಜ್‌ ಸೇರಿಸಿ ಕೊಡ್ತೀರಾ ಎಂದು ಕೇಳುತ್ತಾರೆ ಎಂದು ಇಲ್ಲಿನ ನಿವಾಸಿಯೊಬ್ಬರು ಅಳಲು ತೋಡಿಕೊಂಡರು.

– ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.