Kollywood: ನಟ ಸೂರ್ಯನಿಗೆ ಅಟ್ಲಿ ಕುಮಾರ್ ಆ್ಯಕ್ಷನ್ ಕಟ್?
Team Udayavani, Jul 31, 2024, 4:56 PM IST
ಚೆನ್ನೈ: ʼಜವಾನ್ʼ ಬಳಿಕ ಕಾಲಿವುಡ್ ನಿರ್ದೇಶಕ ಅಟ್ಲಿ ಕುಮಾರ್ (Atlee) ಯಾರೊಂದಿಗೆ ಸಿನಿಮಾ ಮಾಡಲಿದ್ದಾರೆ ಎನ್ನುವುದು ಇನ್ನು ಕೂಡ ಕುತೂಹಲದ ವಿಚಾರವಾಗಿಯೇ ಉಳಿದಿದೆ.
‘ಜವಾನ್ʼ ಬಳಿಕ ಅಟ್ಲಿ ಅವರಿಗೆ ಬೇಡಿಕೆ ಹೆಚ್ಚಾಗಿದೆ. ಖ್ಯಾತ ನಟರೊಂದಿಗೆ ಸಿನಿಮಾ ಮಾಡಲಿದ್ದಾರೆ ಎನ್ನುವ ಸುದ್ದಿಗಳು ಹರಿದಾಡಿತ್ತು. ದಳಪತಿ ವಿಜಯ್, (Thalapathy vijay) ಅಲ್ಲು ಅರ್ಜುನ್ (Allu Arjun) ಅವರ ಹೆಸರು ಕೂಡ ಈ ಸಾಲಿನಲ್ಲಿ ಕೇಳಿ ಬಂದಿತ್ತು.
ಇದಲ್ಲದೆ ಸಲ್ಮಾನ್ ಖಾನ್, (Salman Khan) ಕಮಲ್ ಹಾಸನ್ (Kamal Hasan) ಅವರೊಂದಿಗೆ ದೊಡ್ಡಮಟ್ಟದ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ ಈ ಬಗ್ಗೆ ವದಂತಿಗಳಷ್ಟೇ ಹಬ್ಬಿ, ಮತ್ಯಾವ ಅಪ್ಡೇಟ್ಸ್ ಕೂಡ ಬಂದಿಲ್ಲ.
ಸದ್ಯ ಅಟ್ಲಿ ತನ್ನ ಮುಂದಿನ ಪ್ರಾಜೆಕ್ಟ್ ಗಾಗಿ ಸ್ಕ್ರಿಪ್ಟ್ ಬರೆಯುತ್ತಿದ್ದು,ಈ ಪ್ರಾಜೆಕ್ಟ್ ನಲ್ಲಿ ನಟ ಸೂರ್ಯ (Suriya) ಅವರು ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಮಾತು ಕಾಲಿವುಡ್ ವಲಯದಲ್ಲಿ ಹರಿದಾಡಿದೆ.
ಇದೊಂದು ಬಿಗ್ ಬಜೆಟ್ ಸಿನಿಮಾವಾಗಿರಲಿದೆ ಎನ್ನಲಾಗಿದೆ. ಈ ಬಗ್ಗೆ ಕಾಲಿವುಡ್ನಲ್ಲಿ ಸುದ್ದಿ ಹರಿದಾಡಿದ ಬೆನ್ನಲ್ಲೇ ಫ್ಯಾನ್ಸ್ ಸಖತ್ ಎಕ್ಸೈಟ್ ಆಗಿದ್ದಾರೆ.
ಆದರೆ ಅಟ್ಲಿ- ಸೂರ್ಯ ಸಿನಿಮಾದ ಸುದ್ದಿ ಹರಿದಾಡಿದ ಬೆನ್ನಲ್ಲೇ ಆಪ್ತ ಮೂಲವೊಂದು ಈ ಸುದ್ದಿಯನ್ನು ತಳ್ಳಿ ಹಾಕಿರುವುದಾಗಿ ಕಾಲಿವುಡ್ ಸಿನಿ ವೆಬ್ ಸೈಟ್ ಗಳು ವರದಿ ಮಾಡಿದೆ.
ಸನ್ ಪಿಕ್ಚರ್ಸ್(Sun Pictures) ನೊಂದಿಗೆ ಸೂರ್ಯ ಹಾಗೂ ಅಟ್ಲಿ ಪ್ರತ್ಯೇಕವಾಗಿ ಒಪ್ಪಂದ ಮಾಡಿಕೊಂಡಿದ್ದು, ಇವರಿಬ್ಬರನ್ನು ಒಂದುಗೂಡಿಸಿ ಸಿನಿಮಾ ಮಾಡುತ್ತದೆಯೇ ಎನ್ನುವುದನ್ನು ಕಾದುನೋಡಬೇಕಿದೆ.
ಸದ್ಯ ಸೂರ್ಯ ʼಕಂಗುವʼ (Kanguva) ಸಿನಿಮಾದಲ್ಲಿ ಬ್ಯುಸಿಯಿದ್ದಾರೆ. ಈ ಸಿನಿಮಾ ಅಕ್ಟೋಬರ್ 10ರಂದು ರಿಲೀಸ್ ಆಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dhoom 4: ಬಾಲಿವುಡ್ ʼಧೂಮ್-4ʼ ನಲ್ಲಿ ಸೌತ್ ಸ್ಟಾರ್ ಸೂರ್ಯ ವಿಲನ್?
Tollywood: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್- ಅದಿತಿ ರಾವ್; ಇಲ್ಲಿದೆ ಫೋಟೋಸ್
Jani Master: ಲೈಂಗಿಕ ಕಿರುಕುಳ ಆರೋಪ; ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ವಿರುದ್ಧ FIR
Kadambari Jethwani: ನಟಿಯನ್ನು ಅಕ್ರಮವಾಗಿ ಬಂಧಿಸಿದ ಆರೋಪ; 3 ಐಪಿಎಸ್ ಅಧಿಕಾರಿಗಳು ಅಮಾನತು
OTT Release: ಚಿಯಾನ್ ವಿಕ್ರಮ್ ʼತಂಗಲಾನ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Congress Manifesto; ಕಣಿವೆ ರಾಜ್ಯದ ಭೂರಹಿತ ಕೃಷಿಕರಿಗೆ 99 ವರ್ಷ ಭೂಗುತ್ತಿಗೆ
ನಿಂದನೆ ಒಪ್ಪದ ಶಾಸಕ ಮುನಿರತ್ನ; 2ನೇ ಧ್ವನಿ ಪರೀಕ್ಷೆ
Afghanistan; ಪೋಲಿಯೋ ಲಸಿಕೆಗೆ ತಾಲಿಬಾನ್ ತಡೆ: ವಿಶ್ವಸಂಸ್ಥೆ ಆರೋಪ
Kolkata; ಟ್ರೈನಿ ವೈದ್ಯೆ ಕೇಸು:1 ಕಿ.ಮೀ. ಬರಲು ಪೊಲೀಸರಿಗೆ 1ತಾಸು!
Priyank Kharge: ಇಂದು ಕಲಬುರಗಿಯಲ್ಲಿ ಸಿಎಂ ಸಿದ್ದು ನೇತೃತ್ವದಲ್ಲಿ ಸಂಪುಟ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.