UPSC ಯಿಂದ ಪೂಜಾ ಖೇಡ್ಕರ್ IAS ಅರ್ಹತೆಯೇ ರದ್ದು: ಭವಿಷ್ಯದ ಪರೀಕ್ಷೆಗಳಿಂದ ನಿರ್ಬಂಧ
Team Udayavani, Jul 31, 2024, 4:04 PM IST
ಹೊಸದಿಲ್ಲಿ: ಅಧಿಕಾರ ದುರ್ಬಳಕೆ ಸೇರಿ ಹಲವು ವಿಚಾರಗಳಿಂದ ಸುದ್ದಿಯಾಗಿರುವ ವಿವಾದಾತ್ಮಕ ಟ್ರೈನಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ತಾತ್ಕಾಲಿಕ ಉಮೇದುವಾರಿಕೆಯನ್ನು ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC ) ಬುಧವಾರ ರದ್ದುಗೊಳಿಸಿದೆ. ಆಯೋಗ ನಡೆಸುವ ಮುಂದಿನ ಎಲ್ಲಾ ಪರೀಕ್ಷೆಗಳಲ್ಲಿ ಹಾಜರಾಗುವುದನ್ನು ಶಾಶ್ವತವಾಗಿ ನಿರ್ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೂಜಾ ಖೇಡ್ಕರ್ ಅವರು ನಾಗರಿಕ ಸೇವಾ ಪರೀಕ್ಷೆಯಲ್ಲಿ ತಮ್ಮ ಉಮೇದುವಾರಿಕೆಯನ್ನು ಭದ್ರಪಡಿಸಿಕೊಳ್ಳಲು ಅಂಗವೈಕಲ್ಯ ಮತ್ತು ಇತರೆ ಹಿಂದುಳಿದ ವರ್ಗಗಳ (non-creamy layer) ಕೋಟಾಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಪೂಜಾ ಖೇಡ್ಕರ್ ಅವರ ಅರ್ಹತೆ ಮತ್ತು ಅವರ ಅರ್ಜಿಯ ಸುತ್ತಲಿನ ಸಂದರ್ಭಗಳ ವಿವರವಾದ ಪರಿಶೀಲನೆಯ ನಂತರ UPSC ಪ್ರಕಟಣೆ ಹೊರಡಿಸಿದೆ.
ಲಭ್ಯವಿರುವ ದಾಖಲೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿ, CSE-2022 ನಿಯಮಗಳ ನಿಬಂಧನೆಗಳಿಗೆ ವಿರುದ್ಧವಾಗಿ ವರ್ತಿಸಿ ತಪ್ಪಿತಸ್ಥರೆಂದು ಕಂಡುಬಂದ ಕಾರಣ ಈ ಕ್ರಮ ಕೈಗೊಂಡಿದೆ ಎಂದು ಯುಪಿಎಸ್ ಸಿ ಹೇಳಿದೆ.
2022 ರಲ್ಲಿ ಆಯ್ಕೆಯಾದ ಪೂಜಾ ಖೇಡ್ಕರ್ ಅವರ ತಾತ್ಕಾಲಿಕ ಅಭ್ಯರ್ಥಿತನವನ್ನು ರದ್ದುಗೊಳಿಸಲಾಗಿದೆ ಮತ್ತು ಮುಂದಿನ ಎಲ್ಲಾ ಪರೀಕ್ಷೆಗಳಿಂದ ಶಾಶ್ವತವಾಗಿ ಡಿಬಾರ್ ಮಾಡಲಾಗಿದೆ UPSC ಯ ಅಧಿಕೃತ ಹೇಳಿಕೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.