Cauvery Water; ಒಂದೇ ದಿನ ತಮಿಳುನಾಡಿಗೆ 2.25 ಲಕ್ಷ ಕ್ಯುಸೆಕ್ ನೀರು: ಡಿಕೆಶಿ
40 ಟಿಎಂಸಿ ಬದಲು ಹರಿಯಿತು 80 ಟಿಎಂಸಿ ಕಾವೇರಿ ನೀರು
Team Udayavani, Jul 31, 2024, 9:10 PM IST
ಬೆಂಗಳೂರು: ಕಬಿನಿ ಹಾಗೂ ಕೆಆರ್ಎಸ್ಗೆ ಒಳಹರಿವು ಹೆಚ್ಚಳವಾಗಿದ್ದು ನದಿಗೆ ಹೆಚ್ಚಿನ ನೀರು ಬಿಡಲಾಗುತ್ತಿದೆ. ಹೀಗಾಗಿ ನದಿಪಾತ್ರದ ಜನರು ಎಚ್ಚರದಿಂದ ಇರುವಂತೆ ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.
ಬುಧವಾರ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಕೇರಳ ಹಾಗೂ ಕರ್ನಾಟಕದಲ್ಲಿ ಉತ್ತಮ ಮಳೆ ಬರುತ್ತಿರುವುದರಿಂದ ತಮಿಳುನಾಡಿಗೆ ಹೆಚ್ಚುವರಿ ನೀರು ಬಿಡುಗಡೆ ಮಾಡುತ್ತಿದ್ದು ಈ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರ ಗಮನ ಸೆಳೆಯಲಾಗಿದೆ. ವಾಸ್ತವಾಂಶ ತಿಳಿಸಿದ್ದೇವೆ ಎಂದರು. ಕಾವೇರಿ ನಿರ್ವಹಣಾ ಸಮಿತಿಯು 40 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಡಲು ಆದೇಶಿಸಿತ್ತು. ಆದರೆ ಇದುವರೆಗೆ 80 ಟಿಎಂಸಿವರೆಗೆ ನೀರು ಬಿಟ್ಟಿದ್ದೇವೆ. ಇತಿಹಾಸದಲ್ಲೇ ಅತಿ ನೀರು ಹರಿಸಿದ್ದು ಮಂಗಳವಾರ ಒಂದೇ ದಿನ ತಮಿಳುನಾಡಿಗೆ 2.25 ಲಕ್ಷ ಕ್ಯುಸೆಕ್ ನೀರು ಹರಿದಿದೆ. ಮತ್ತೆ ಮಳೆ ತಗ್ಗಿರುವ ಹಿನ್ನೆಲೆಯಲ್ಲಿ 1.45 ಲಕ್ಷ ಕ್ಯುಸೆಕ್ ನೀರು ಹರಿಸುತ್ತಿದ್ದೇವೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ರೆಡ್ ಅಲರ್ಟ್ ಘೋಷಿಸಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.