Wayanad ಭೂ ಕುಸಿತ: ರಾಜ್ಯದ 8 ಮಂದಿ ಸಾವು; ಒಂದೇ ಕುಟುಂಬದ 8 ಮಂದಿ ಕಣ್ಮರೆ

ಬುಧವಾರ ನಾಲ್ವರ ಮೃತದೇಹ ಪತ್ತೆ ; ಒಂದೇ ಕುಟುಂಬದ 8 ಮಂದಿ ಕಣ್ಮರೆ

Team Udayavani, Jul 31, 2024, 10:56 PM IST

Wayanad ಭೂ ಕುಸಿತ: ರಾಜ್ಯದ 8 ಮಂದಿ ಸಾವು; ಒಂದೇ ಕುಟುಂಬದ 8 ಮಂದಿ ಕಣ್ಮರೆ

ಮಂಡ್ಯ/ಮೈಸೂರು/ ಚಾಮರಾಜನಗರ: ಕೇರಳದ ವಯನಾಡು ಭೂ ಕುಸಿತದಲ್ಲಿ ಕರ್ನಾಟಕ ಮೂಲದ ನಾಲ್ವರ ಶವ ಬುಧವಾರ ಪತ್ತೆಯಾಗಿದ್ದು, ಈವರೆಗೆ ಸಾವನ್ನಪ್ಪಿದವರ ಸಂಖ್ಯೆ 8ಕ್ಕೇರಿದೆ. ಸಾವಿನ ಸಂಖ್ಯೆ ಏರುತ್ತಲೇ ಇದೆ. ಮೈಸೂರು ಜಿಲ್ಲೆ ತಿ.ನರಸೀಪುರ ಮೂಲದ ಒಂದೇ ಕುಟುಂಬದ 8 ಮಂದಿ ಕಣ್ಮರೆಯಾಗಿದ್ದಾರೆ.

ಮಂಡ್ಯದ ಕೆ.ಆರ್‌.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಝಾನ್ಸಿರಾಣಿ, ಪತಿ ಅನಿಲ್‌ ಕುಮಾರ್‌ ಘಟನೆಯಲ್ಲಿ ಗಾಯಗೊಂಡಿದ್ದು ಇವರ ಮಗ ನಿಹಾಲ್‌ (2), ಅತ್ತೆ ಲೀಲಾವತಿ (55) ಭೂಕುಸಿತ ಸಂದರ್ಭದಲ್ಲಿ ನಾಪತ್ತೆಯಾಗಿದ್ದರು. ಇವರ ಶವ ಬುಧವಾರ ಪತ್ತೆಯಾಗಿದೆ. ಮೈಸೂರು ಜಿಲ್ಲೆ ತಿ. ನರಸೀಪುರದ ಉಕ್ಕಲಗೆರೆ ಗ್ರಾಮದ ಯುವತಿ ಶ್ರೇಯಾ (19) ಸಾವಿಗೀಡಾಗಿದ್ದು ಇನ್ನೂ 8 ಮಂದಿ ಕಣ್ಮರೆಯಾಗಿದ್ದಾರೆ. ವಯನಾಡಿನ ಮೇಪ್ಪಾಡಿಯಲ್ಲಿ ಶ್ರೇಯಾ ಮೃತದೇಹ ಪತ್ತೆಯಾಗಿದೆ. ಸಂಬಂಧಿಕರ ಮನೆಗೆ ತೆರಳಿದ್ದ ವಿರಾಜಪೇಟೆ ತಾಲೂಕು ಸಿದ್ದಾಪುರ ಗುಯ್ಯ ಸರಕಾರಿ ಶಾಲೆ ವಿದ್ಯಾರ್ಥಿ ರೋಹಿತ್‌ (9) ಮೃತದೇಹ ಪತ್ತೆಯಾಗಿದೆ.

ತಿ.ನರಸೀಪುರದ ಉಕ್ಕಲಗೆರೆ ಗ್ರಾಮದ ಗುರುಮಲ್ಲನ್‌, ಸಾವಿತ್ರಿ, ಸವಿತಾ, ಶಿವಣ್ಣನ್‌, ಅಪ್ಪಣ್ಣನ್‌, ಅಶ್ವಿ‌ನಿ, ಜೀತು, ದಿವ್ಯಾ ನಾಪತ್ತೆಯಾಗಿದ್ದಾರೆ. ಇವೆರಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು 50 ವರ್ಷದ ಹಿಂದೆ ಉಕ್ಕಲಗೆರೆಯಿಂದ ಮೇಪ್ಪಾಡಿಗೆ ಹೋಗಿ ನೆಲೆಸಿದ್ದಾರೆ.

ಸದ್ಯ ಈ ಕುಟುಂಬದಲ್ಲಿ ರತ್ನಾ ಎಂಬುವರು ಮಾತ್ರ ಬದುಕುಳಿದಿದ್ದಾರೆ ಎಂದು ಗುಂಡ್ಲು ಪೇಟೆ ತಹಶೀಲ್ದಾರ್‌ ರಮೇಶ್‌ ಬಾಬು ಉದ ಯವಾಣಿಗೆ ತಿಳಿಸಿದ್ದಾರೆ.

ಚಾಮರಾಜನಗರ ಮೂಲದ ಪುಟ್ಟಸಿದ್ದ ಶೆಟ್ಟಿ (62), ರಾಣಿಮದರ್‌(55), ಇರಸವಾಡಿ ಗ್ರಾಮದ ರಾಜೇಂದ್ರ(55), ರತ್ನಮ್ಮ (45) ದಂಪತಿ ಶವ ಮಂಗಳವಾರ ಪತ್ತೆಯಾಗಿತ್ತು.

ಮೃತ ಕನ್ನಡಿಗರು
ಚಾಮರಾಜನಗರ ಮೂಲದ ಪುಟ್ಟಸಿದ್ದ ಶೆಟ್ಟಿ (62), ರಾಣಿ (55), ಇರಸವಾಡಿ ರಾಜೇಂದ್ರ (55), ರತ್ನಮ್ಮ (45), ಕೆ.ಆರ್‌.ಪೇಟೆ ತಾಲೂಕಿನ ಕತ್ತರಘಟ್ಟದ ಝಾನ್ಸಿರಾಣಿ ಮಗ ನಿಹಾಲ್‌ (2), ಅತ್ತೆ ಲೀಲಾವತಿ (55), ತಿ.ನರಸೀಪುರದ ಉಕ್ಕಲಗೆರೆ ಶ್ರೇಯಾ (19) ಮತ್ತು ವಿರಾಜಪೇಟೆ ತಾಲೂಕು ಗುಯ್ಯ ಶಾಲೆ ವಿದ್ಯಾರ್ಥಿ ರೋಹಿತ್‌ (9)

ವಿದ್ಯಾರ್ಥಿ ಸಾವು
ಮೇಪಾಡಿಯ ಸಂಬಂಧಿಕರ ಮನೆಗೆ ತೆರಳಿದ್ದ ವಿದ್ಯಾರ್ಥಿ ರೋಹಿತ್‌ ಮೃತದೇಹ ಬುಧವಾರ ಪತ್ತೆಯಾಗಿದೆ. ಗುಯ್ಯ ಶಾಲೆ ಬಳಿ ಬಾಡಿಗೆ ಮನೆಯಲ್ಲಿರುವ ರವಿ ಮತ್ತು ಕವಿತಾ ದಂಪತಿ ಕೂಲಿ ಕಾರ್ಮಿಕರಾಗಿದ್ದು ತಾಯಿ ಕವಿತಾಳೊಂದಿಗೆ ಮೇಪಾಡಿ ಹೋಗಿದ್ದ ರೋಹಿತ್‌ ಸಂಬಂಧಿಕರ ಮನೆಯಲ್ಲಿದ್ದ. ಸೋಮವಾರ ರಾತ್ರಿ ನಡೆದ ವಯನಾಡು ದುರಂತದಲ್ಲಿ ಬಾಲಕ ಕೂಡ ಮಣ್ಣಿನಡಿ ಕೊಚ್ಚಿಹೋಗಿದ್ದು ಬುಧವಾರ ರಕ್ಷಣ ಕಾರ್ಯಾಚರಣೆ ಮಾಡುತ್ತಿರುವ ತಂಡಕ್ಕೆ ಬಾಲಕನ ಮೃತದೇಹ ದೊರೆತಿದೆ.

ಮೃತ ಕನ್ನಡಿಗರಿಗೆ ತಲಾ 5 ಲಕ್ಷ ರೂ.
ಬೆಂಗಳೂರು: ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ.ಗಳ ಪರಿಹಾರವನ್ನು ಕರ್ನಾಟಕ ಸರಕಾರ ಘೋಷಿಸಿದೆ. ಈ ಮಾಹಿತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ದುರಂತದಲ್ಲಿ ಮೃತಪಟ್ಟವರ ಸಾವಿನ ಸಂಖ್ಯೆ ಹೆಚ್ಚುತ್ತಲೇ ಇದೆ. ಇದೊಂದು ಅತ್ಯಂತ ಘೋರ ದುರಂತ, ಇಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ. ಸಂತ್ರಸ್ತರ ಪ್ರಾಣ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಿದ್ದು, ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ರಾಜ್ಯ ಸರಕಾರ ಶಕ್ತಿಮೀರಿ ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಹೂತು ಹೋಗಿತ್ತು ಅಜ್ಜಿ ಮೃತದೇಹ
ಮಂಡ್ಯ: ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಅಜ್ಜಿ ಹಾಗೂ ಮೊಮ್ಮಗನ ಮೃತದೇಹಗಳು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಕೆ.ಆರ್‌.ಪೇಟೆ ತಾಲೂಕಿನ ಕತ್ತರಘಟ್ಟ ಮೂಲದ ಅಜ್ಜಿ ಲೀಲಾವತಿ (55) ಹಾಗೂ ಮೊಮ್ಮಗ ನಿಹಾಲ್‌(2.5) ಭೂಕುಸಿತದಲ್ಲಿ ಕೊಚ್ಚಿ ಹೋಗಿದ್ದರು. ನಾಪತ್ತೆಯಾಗಿದ್ದ ಲೀಲಾವತಿ ಮಗ ಅನಿಲ್‌, ಪತಿ ದೇವರಾಜು, ಸೊಸೆ ಝಾನ್ಸಿರಾಣಿ ಗಾಯಗೊಂಡಿದ್ದರು. ಬುಧವಾರ ಕಾರ್ಯಾಚರಣೆ ವೇಳೆ ಗಿಡಗಂಟಿಗಳ ಮೇಲೆ ನಿಹಾಲ್‌ ಶವ ಪತ್ತೆಯಾದರೆ, ಮಣ್ಣಿನಲ್ಲಿ ಹೂತಿರುವ ಸ್ಥಿತಿಯಲ್ಲಿ ಲೀಲಾವತಿ ಶವ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಆದರೆ ಶವಗಳ ಗುರುತು ಇನ್ನೂ ಪತ್ತೆ ಹಚ್ಚಬೇಕಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ| ಎಚ್‌.ಎಲ್‌.ನಾಗರಾಜು ತಿಳಿಸಿದರು.

ಮಳೆ ಬರುತ್ತಿದೆ…
ನಾಳೆ ಬರುತ್ತೇನೆ ಎಂದವರು ಬರಲಿಲ್ಲ…
ಮಂಡ್ಯ: ತುಂಬಾ ಮಳೆ ಬರುತ್ತಿದೆ. ನಾಳೆ ಬರುತ್ತೇವೆ ಎಂದವರು ಬರಲಿಲ್ಲ. ವಿ ಧಿಯೇ ಮಳೆಯಾಗಿ ಅವರನ್ನು ಕರೆದುಕೊಂಡು ಹೋಯಿತು ಎಂದು ನಾಪತ್ತೆಯಾಗಿ ಮೃತಪಟ್ಟಿದ್ದಾರೆ ಎನ್ನಲಾದ ಲೀಲಾವತಿ ಅವರ ಪುತ್ರಿ ಮಂಜುಳಾ ಕಣ್ಣೀರು ಹಾಕಿದ್ದಾರೆ. ನಾನು ಬರಲ್ಲ ಮಗ, ಸೊಸೆ ಕಳಿಸುತ್ತೇನೆ’ ಎಂದು ಅಮ್ಮ ಹೇಳಿದರು. ಆಗ ನಾನು ಬರಲಿಲ್ಲ ಎಂದರೆ ಅಲ್ಲೇ ಸಾಯಿ’ ಎಂದಿದ್ದೆ. ಆದರೆ ಹೀಗಾಗುತ್ತದೆ ಎಂದು ಗೊತ್ತಿರಲಿಲ್ಲ. ಸೈಕಲ್‌ ತೆಗೆದುಕೊಡು ಎಂದು ಪಾಪು ಕೇಳಿದ್ದ. ಪಾಪುವಿಗಾಗಿ ಬುಕ್ಸ್‌ ಎಲ್ಲ ತೆಗೆದು ಇಟ್ಟಿದ್ದೆ. ದೇವರಿಗೆ ಕರುಣೆ ಅನ್ನೋದೆ ಇಲ್ಲ. ಮಲಗಿರುವಾಗ ಗುಡ್ಡ ಕುಸಿದು, ಮಗು ಕೊಚ್ಚಿ ಹೋಗಿದೆ. ನಮ್ಮಮ್ಮನ ಕೈ ಕಾಣುತ್ತಿದೆ. ಮಗು ಮಕಾಡೆ ಮಲಗಿದೆ. ಹೇಗಾದರೂ ಮಾಡಿ ಮೃತದೇಹ ಕರ್ನಾಟಕಕ್ಕೆ ತನ್ನಿ, ಕಡೆ ಬಾರಿ ಮುಖ ನೋಡಿಕೊಳ್ಳುತ್ತೇವೆ ಎಂದು ಗೋಳಾಡಿದರು.

 

ಟಾಪ್ ನ್ಯೂಸ್

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.