Heavy Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆ

ಮಂಗಳೂರು ನಗರದಲ್ಲಿ ಸಂಜೆ ಬಳಿಕ ಮಳೆ ಬಿರುಸು, ತೋಟಬೆಂಗ್ರೆಯ ಗೋಪಾಲ ಸುವರ್ಣರ ಮನೆಗೆ ಹಾನಿ

Team Udayavani, Aug 1, 2024, 2:59 AM IST

Mangalore

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರವೂ ಮಳೆ ಮುಂದುವರಿದಿದೆ. ಮಂಗಳವಾರಕ್ಕೆ ಹೋಲಿಸಿದರೆ ಮಳೆಯ ಬಿರುಸು ತುಸು ಕಡಿಮೆಯಿತ್ತು. ಆದರೆ ಬುಧವಾರ ಸಂಜೆ ಬಳಿಕ ಮಳೆ ತೀವ್ರತೆ ಪಡೆದುಕೊಂಡಿದೆ.

ಶಾಲೆಗಳಿಗೆ ರಜೆ
ಈ ಹಿನ್ನೆಲೆಯಲ್ಲಿ ಗುರುವಾರ ಅಂಗನವಾಡಿಯಿಂದ ಪಿಯುಸಿ ವರೆಗಿನ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಬಂಟ್ವಾಳ ತಾಲೂಕಿನಾದ್ಯಂತ ಸೃಷ್ಟಿಯಾಗಿದ್ದ ಕೃತಕ ನೆರೆ, ನದಿಯಲ್ಲಿ ನೀರಿನ ಮಟ್ಟವೂ ಇಳಿಕೆ ಕಂಡಿದೆ. ಉಪ್ಪಿನಂಗಡಿಯಲ್ಲೂ ನದಿಯಲ್ಲಿ ನೀರಿನ ಮಟ್ಟ ತುಸು ತಗ್ಗಿದೆ. ಮಂಗಳೂರು ನಗರದಲ್ಲಿ ಸಂಜೆ ಬಳಿಕ ಮಳೆ ಬಿರುಸು ಪಡೆದಿದೆ. ತೋಟಬೆಂಗ್ರೆಯ
ಗೋಪಾಲ ಸುವರ್ಣರ ಮನೆ ಸಂಪೂರ್ಣ ಹಾನಿಗೀಡಾಗಿದೆ. ಆ.1ರ ಬೆಳಗ್ಗೆ 8.30ರ ವರೆಗೆ ರೆಡ್‌ ಅಲರ್ಟ್‌ ಬಳಿಕ ಜು.2ರ ವರೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಹೊಳೆಯಲ್ಲಿ ಶವ ಪತ್ತೆ:
ಜುಲೈ 29ರಂದು ನಾಪತ್ತೆಯಾಗಿದ್ದ ವಿಟ್ಲದ ರಾಮಚಂದ್ರ ಭಟ್‌ (74) ಅವರ ಮೃತದೇಹವು ಬೆರಿಪದವು ಹೊಳೆಯಲ್ಲಿ ಜು. 31ರಂದು ಪತ್ತೆಯಾಗಿದೆ.

ಎಡಕುಮೇರಿಯಲ್ಲಿ ಮುಂದುವರಿದ ಕಾಮಗಾರಿ:
ಬೆಂಗಳೂರು ರೈಲು ಮಾರ್ಗದ ಮೇಲೆ ಮಣ್ಣು ಕುಸಿದಿರುವ ಎಡಕುಮೇರಿಯಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ.

ಆ.1ಕ್ಕೆ ದೋಣಿಗಳು ಕಡಲಿಗೆ ಇಳಿಯುವುದು ಅನುಮಾನ
ಮಂಗಳೂರು: ಮೀನುಗಾರಿಕೆಗೆ ಸರಕಾರ ವಿಧಿಸಿದ್ದ 61 ದಿನಗಳ ನಿಷೇಧ ಜು. 31ಕ್ಕೆ ಮುಕ್ತಾಯಗೊಂಡರೂ ಹವಾಮಾನ ವೈಪರಿತ್ಯ ಹಿನ್ನೆಲೆಯಲ್ಲಿ ಆ.1ರಿಂದ ದೋಣಿಗಳು ಸಮುದ್ರಕ್ಕಿಳಿಯುವುದು ಅನುಮಾನವಾಗಿದೆ.

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಆ.1ರಂದು ಬೆಳಗ್ಗಿನ ವರೆಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ರಭಸವಾಗಿ ಗಾಳಿ ಕೂಡ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅಲೆಗಳ ಅಬ್ಬರ ಹೆಚ್ಚಿರುವ ಕಾರಣ ಬೋಟ್‌ಗಳು ಸಮುದ್ರಕ್ಕೆ ಇಳಿಯುವುದು ಅನುಮಾನ.

ಆದರೂ ಮೀನುಗಾರಿಕೆಗೆ ಸರ್ವ ಸಿದ್ಧತೆ ನಡೆಸಿಕೊಳ್ಳಲಾಗಿದೆ. ಮೀನುಗಾರಿಕೆಗೆ ಬೋಟು, ಎಂಜಿನ್‌ಗಳನ್ನು ದುರಸ್ತಿಗೊಳಿಸಿ ಬಲೆಗಳನ್ನು ಸಿದ್ಧಗೊಳಿಸಿದ್ದಾರೆೆ. ಐಸ್‌ಪ್ಲಾಂಟ್‌ಗಳು ಕಾರ್ಯಾರಂಭಿಸಿದೆ. ಆಳಸಮುದ್ರಕ್ಕೆ ತೆರಳುವ ಬೋಟುಗಳಲ್ಲಿ 15 ದಿನಗಳಿಗೆ ಬೇಕಾಗುವ ಆಹಾರ ಸಾಮಗ್ರಿಗಳನ್ನು ಕೊಂಡೊಯ್ಯಲಾಗುತ್ತದೆ. ದೋಣಿಗಳ ಕಾರ್ಮಿಕರಲ್ಲಿ ಹೆಚ್ಚಿನವರು ಹೊರ ರಾಜ್ಯಗಳಿಗೆ ಸೇರಿದ್ದು, ಮೀನುಗಾರಿಕೆಗೆಂದು ಊರಿನಿಂದ ಮರಳಿದ್ದಾರೆ.

ಬೈಕಂಪಾಡಿ ಕೈಗಾರಿಕಾ ಪ್ರದೇಶಕ್ಕೆ ನೆರೆ ನೀರು
ಬೈಕಂಪಾಡಿ: ಇಲ್ಲಿನ ಕೈಗಾರಿಕಾ ಪ್ರದೇಶದ ಮುಂಗಾರು, ಒಡಿಸಿ ರಸ್ತೆ ಸಹಿತ ವಿವಿಧೆಡೆ ಬುಧವಾರ ಸಂಜೆಯ ವೇಳೆ ದಿಢೀರ್‌ ನೆರೆ ನೀರು ಏರಿಕೆಯಾಗಿ ಕಂಪೆನಿಗಳಿಗೆ ನುಗ್ಗಿದ್ದು, ಅಪಾರ ಹಾನಿ ಸಂಭವಿಸಿದೆ.

ಇಲ್ಲಿನ ಕುಡುಂಬೂರು ಹೊಳೆ ಹಾಗೂ ವಿವಿಧೆಡೆಯ ರಾಜ ಕಾಲುವೆಗಳು ಮಣ್ಣು ತುಂಬಿ ಒತ್ತುವರಿ ಇಲ್ಲವೇ ಕಟ್ಟಡ ಮತ್ತಿತರ ತ್ಯಾಜ್ಯ ತುಂಬಿದ ಪರಿಣಾಮ ಮಳೆ ನೀರು ಸರಾಗ ಹರಿವಿಗೆ ತಡೆಯಾಗಿದೆ. ದ್ವಿಚಕ್ರ ವಾಹನ ಅರ್ಧ ಮುಳುಗುವಷ್ಟು ನೀರು ಏರಿಕೆಯಾಗಿದ್ದರಿಂದ ಕಾರ್ಮಿಕರು, ಜೋಕಟ್ಟೆ ಗ್ರಾಮಸ್ಥರು ಪರ್ಯಾಯ ರಸ್ತೆಯನ್ನು ಅವಲಂಬಿಸಬೇಕಾಯಿತು.

ಟಾಪ್ ನ್ಯೂಸ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.