Netravati ನದಿ ತೀರದ 22 ಕುಟುಂಬಗಳ ಸ್ಥಳಾಂತರ

ಮರ, ಗುಡ್ಡ ಕುಸಿತದಿಂದ ಉಳ್ಳಾಲ ತಾಲೂಕಿನ ಹಲವೆಡೆ ಹಾನಿ ;ಹರೇಕಳ ಡ್ಯಾಂ, ಅಜೀರು ಉಳಿಯ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ

Team Udayavani, Aug 1, 2024, 11:35 AM IST

Screenshot (54)

ಉಳ್ಳಾಲ: ಉಳ್ಳಾಲ ತಾಲೂಕು ವ್ಯಾಪ್ತಿಯ ನೇತ್ರಾವತಿ ನದಿ ತೀರದ ಪಾವೂರು ಗ್ರಾಮವೊಂದರಲ್ಲೇ ಸುಮಾರು 22 ಕುಟುಂಬದ ಸದಸ್ಯರನ್ನು ಮಂಗಳವಾರ ರಾತ್ರಿ ಸ್ಥಳಾಂತರ ಮಾಡಲಾಗಿದೆ. ಬುಧವಾರ ಮಳೆ ಹಾಗೂ ನೆರೆ ಕಡಿಮೆಯಾಗಿದೆ. ಹಾಗಾಗಿ ಕೆಲವು ಮನೆಗಳ ಸದಸ್ಯರು ವಾಪಸ್‌ ಆಗಿದ್ದಾರೆ. ಮಹಿಳೆಯರು ಮಾತ್ರ ವಾಪಸ್‌ ಆಗದೆ ಸುರಕ್ಷಿತ ಪ್ರದೇಶದಲ್ಲಿದ್ದಾರೆ.

ಬುಧವಾರವೂ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಪ್ರಾಕೃತಿಕ ವಿಕೋಪಗಳು ನಡೆದಿದ್ದು, ಮಂಜನಾಡಿ ಮತ್ತು ಬೋಳಿಯಾರ್‌ನಲ್ಲಿ ಎರಡು ಮನೆಗಳಿಗೆ ತೀವ್ರ ಹಾನಿಯಾಗಿದೆ. ತಾಲೂಕಿನಲ್ಲಿ ಮರ, ಗುಡ್ಡ ಕುಸಿತದಂತಹ ಘಟನೆಗಳು ನಡೆದಿದ್ದು, ಜಿಲ್ಲಾಧಿಕಾರಿ ಹರೇಕಳ ಡ್ಯಾಂ ಮತ್ತು ಅಜೀರು ಉಳಿಯ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ.

ಪಾವೂರು ಗ್ರಾಮದಲ್ಲೇ ಹೆಚ್ಚು ನೆರೆ ಹಾವಳಿಯಾಗಿದ್ದು, ಪಾವೂರು ಇನೋಳಿಯಲ್ಲಿ 13 ಮನೆಗಳ ಸದಸ್ಯರನ್ನು ಸ್ಥಳಾಂತರ ಮಾಡಿದ್ದು, ಪಾವೂರು ಅಜೀರು ಉಳಿಯ, ಪಾವೂರು ದೋಟದಲ್ಲಿ ತಲಾ 4 ಮನೆಗಳನ್ನು ಸ್ಥಳಾಂತರ ಮಾಡಲಾಗಿದೆ. ಪಾವೂರು ಪಾದೆಯಲ್ಲಿ ಒಂದು ಮನೆಯಲ್ಲಿದ್ದ ಗರ್ಭಿಣಿಯನ್ನು ಮತ್ತು ಹಿರಿಯ ನಾಗರಿಕರೊಬ್ಬರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿತ್ತು. ಉಳ್ಳಾಲದ ಬಂಡಿಕೊಟ್ಯ, ಉಳಿಯ, ಕಲ್ಲಾಪು ಪ್ರದೇಶಗಳಲ್ಲಿಯೂ ನೆರೆನೀರು ಮತ್ತು ಕೃತಕ ನೆರೆಯಾಗಿದೆ.

ಮನೆಗಳಿಗೆ ಹಾನಿ
ಮಂಜನಾಡಿಯ ಕಲ್ಕಟ್ಟದಲ್ಲಿ ಶಾರದಾ ಅವರ ಮನೆಗೆ ಹಾನಿಯಾಗಿದ್ದು, ಬೋಳಿಯಾರು ಕುಕ್ಕೊಟ್ಟಿನ ಶಾರದಾ ಅವರ ಮನೆಗೆ ಹಾನಿಯಾಗಿದೆ. ಸಜಿಪದಲ್ಲಿ ಇಬ್ರಾಹಿಂ ಅವರ ಮನೆಗೆ ಮರ ಬಿದ್ದು ಹಾನಿಯಾಗಿದ್ದು, ಅಕ್ಷರನಗರದಲ್ಲಿ ಶರಿಫ್‌ ಎಂಬವರ ಮನೆ ಆವರಣಗೋಡೆ ಬಿದ್ದು ಹಾನಿಯಾಗಿದೆ.

ಜಿಲ್ಲಾಧಿಕಾರಿ ಭೇಟಿ
ಬುಧವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌, ಹರೇಕಳ ಡ್ಯಾಂ ಮತ್ತು ಅಜೀರು ಉಳಿಯಕ್ಕೆ ಭೇಟಿ ನೀಡಿ ಕಾರ್ಯಚರಣೆಯ ಮಾಹಿತಿ ಪಡೆದರು. ಈ ಸಂದರ್ಭ ಮಾತನಾಡಿದ ಅವರು, ನೇತ್ರಾವತಿ ನದಿ ತಟದ ಜನರು ಕೆಲವು ದಿನಗಳ ಕಾಲ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಳ್ಳಬೇಕು. ಗುಡ್ಡ ಕುಸಿತದಂತಹ ಪ್ರದೇಶದಲ್ಲಿ ಮತ್ತು ಅಪಾಯಕಾರಿ ಇರುವ ಪ್ರದೇಶದ ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ತಡರಾತ್ರಿವರೆಗೂ ರಕ್ಷಣ ಕಾರ್ಯ
ಪಾವೂರು ಗ್ರಾಮದಲ್ಲಿ ಅಗ್ನಿಶಾಮಕದಳ, ಎನ್‌ ಡಿಆರ್‌ಎಫ್‌ ಸಿಬಂದಿ, ಸಹಾಯಕ ಆಯುಕ್ತ ಹರ್ಷವರ್ಧನ್‌, ತಹಶೀಲ್ದಾರ್‌ ಪುಟ್ಟರಾಜು, ಕಂದಾಯ ನಿರೀಕ್ಷಕ ಪ್ರಮೋದ್‌, ಗ್ರಾಮಾಡಳಿತ ಅಧಿಕಾರಿ ನಯನಾ, ಕಾರ್ಯದರ್ಶಿ ಇಸ್ಮಾಯಿಲ್‌, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಕೃಷ್ಣಮೂರ್ತಿ ಸಹಿತ ಪಂಚಾಯತ್‌ ಮಾಜಿ ಅಧ್ಯಕ್ಷ ಖಾದರ್‌, ಉಪಾಧ್ಯಕ್ಷ ಆನ್ಸಾರ್‌, ಮೋನು, ಮುಬಾರಕ್‌, ವಿವೇಕ್‌ ರೈ, ಪೊಲೀಸ್‌ ಅಧಿಕಾರಿಗಳು ತಡರಾತ್ರಿ 2 ಗಂಟೆಯವರೆಗೆ ರಕ್ಷಣ ಕಾರ್ಯದಲ್ಲಿ ಭಾಗವಹಿಸಿದ್ದರು.

 

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.