EV charging: ಇವಿ ಚಾರ್ಜಿಂಗ್; ಯೂನಿಟ್ಗೆ 7 ಪೈಸೆ ಹೆಚ್ಚಳ
Team Udayavani, Aug 1, 2024, 11:13 AM IST
ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವ್ಯಾಪ್ತಿಯಲ್ಲಿ ವಿದ್ಯುತ್ಚಾಲಿತ ಚಾರ್ಜಿಂಗ್ ಕೇಂದ್ರಗಳ ದರ ಪರಿಷ್ಕರಣೆ ಮಾಡಲಾಗಿದ್ದು, ಹಿಂದಿನ ದರಕ್ಕೆ ಹೋಲಿಸಿದರೆ ಪ್ರತಿ ಯೂನಿಟ್ಗೆ ಸರಾಸರಿ 7 ಪೈಸೆ ಹೆಚ್ಚಳ ಆಗಿದೆ.
ಆಗಸ್ಟ್ 1ರಿಂದ (ಗುರುವಾರ) ಹೊಸ ದರ ಅನ್ವಯ ಆಗಲಿದೆ. 25 ಕಿ.ವ್ಯಾ. ಸಾಮರ್ಥ್ಯದ ಅಂದರೆ ವೇಗದ ಚಾರ್ಜಿಂಗ್ಗೆ ಪ್ರತಿ ಯೂನಿಟ್ಗೆ 7.67 ರೂ. ನಿಗದಿಪಡಿಸಲಾಗಿದೆ. ಅದೇ ರೀತಿ, 15 ಕಿ.ವ್ಯಾ. ಸಾಮರ್ಥ್ಯದ ಚಾರ್ಜಿಂಗ್ ಸ್ಟೇಷನ್ ಸಾಮಾನ್ಯ ಚಾರ್ಜಿಂಗ್ಗೆ (ಡೈರೆಕ್ಟ್ ಕರೆಂಟ್) ಪ್ರತಿ ಯೂನಿಟ್ ಗೆ 7 ರೂ. ಮತ್ತು 3.3 ಕಿ.ವ್ಯಾ. ಸಾಮರ್ಥ್ಯದ ಚಾರ್ಜಿಂಗ್ಗೆ (ಅಲ್ಟರ್ನೆàಟ್ ಕರೆಂಟ್) ಪ್ರತಿ ಯೂನಿಟ್ಗೆ 6.86 ರೂ. ನಿಗದಿಪಡಿಸಲಾಗಿದೆ. ತಲಾ 12 ಪೈಸೆ ರಾಜ್ಯ ಮತ್ತು ಕೇಂದ್ರ ತೆರಿಗೆಯೂ ಸೇರಿದೆ. ಸರ್ಕಾರಿ ಚಾರ್ಜಿಂಗ್ ಸ್ಟೇಷನ್ಗೆ ಹೋಲಿಸಿದರೆ ಖಾಸಗಿಯಲ್ಲಿ 20 ರೂ. ಪ್ರತಿ ಯೂನಿಟ್ಗೆ ಜಾಸ್ತಿಯಾಗಲಿದೆ.
5,059 ಚಾರ್ಜಿಂಗ್ ಸ್ಟೇಷನ್ಗಳು: ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ಸಿ) ಸೂಚನೆ ಮೇರೆಗೆ ಇವಿ ಅನುಷ್ಠಾನಕ್ಕೆ ಸಂಬಂಧಿಸಿದ ನೋಡಲ್ ಏಜೆನ್ಸಿ ಆಗಿರುವ ಬೆಸ್ಕಾಂ ಈ ಆದೇಶ ಹೊರಡಿಸಿದೆ. ರಾಜ್ಯದಲ್ಲಿ 5,059 ವಿದ್ಯುತ್ಚಾಲಿತ ವಾಹನಗಳ ಚಾರ್ಜಿಂಗ್ ಕೇಂದ್ರಗಳಿದ್ದು, ಮುಂಬರುವ ದಿನಗಳಲ್ಲಿ ಇವುಗಳ ಸಂಖ್ಯೆಯನ್ನು 2,380ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಈ ಪೈಕಿ 1,190 ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ನಿರ್ಮಿಸಲು ಉದ್ದೇಶಿಸಲಾಗಿದೆ. ಈ ಮಧ್ಯೆ ಇವಿ ಮಿತ್ರ ಆ್ಯಪ್ ಅನ್ನು ಕೂಡ ಬೆಸ್ಕಾಂ ಪರಿಚಯಿಸಿದ್ದು, ವಿದ್ಯುತ್ಚಾಲಿತ ವಾಹನ ಬಳಕೆದಾರರು ಸುಲಭವಾಗಿ ಚಾರ್ಜಿಂಗ್ ಸೌಲಭ್ಯ ಪಡೆಯಬಹುದಾಗಿದೆ.
ಆ್ಯಪ್ ಓಪನ್ ಮಾಡಿದ ತಕ್ಷಣ ಸಮೀಪದ ಇವಿ ಚಾರ್ಜಿಂಗ್ ಸ್ಟೇಷನ್ ಜಿಪಿಎಸ್ ಮಾಹಿತಿ ದೊರೆಯುತ್ತದೆ. ಅದನ್ನು ಆಧರಿಸಿ ವಾಹನ ಸವಾರರು ಹತ್ತಿರದ ಚಾರ್ಜಿಂಗ್ ಪಾಯಿಂಟ್ಗೆ ಭೇಟಿ ನೀಡಿ, ಕ್ಯುಆರ್ ಕೋಡ್ ಸ್ಕ್ಯಾನ್ ಮಾಡಿ, ಹಣ ಪಾವತಿಸಿ ಚಾರ್ಜ್ ಮಾಡಿಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ
Bengaluru: ಇಬ್ಬರು ಡ್ರಗ್ಸ್ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ
Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್ ಆರೋಪ
Yaduveer Wadiyar: ಉಡುಪಿ ಶ್ರೀಕೃಷ್ಣಮಠಕ್ಕೆ ಸಂಸದ ಯದುವೀರ್ ಭೇಟಿ
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ
MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ
Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.