Sakleshpur: ಶಿರಾಡಿ ಘಾಟ್ ನಲ್ಲಿ ಮತ್ತೆ ಭೂ ಕುಸಿತ; ರಸ್ತೆ ಸಂಚಾರ ಬಂದ್
Team Udayavani, Aug 1, 2024, 12:31 PM IST
ಸಕಲೇಶಪುರ: ನೋಡು ನೋಡುತ್ತಲೇ ಶಿರಾಡಿಘಾಟ್ನಲ್ಲಿ ಗುಡ್ಡ ಕುಸಿತವಾಗಿದೆ. ಕೆಲವೇ ನಿಮಿಷಗಳ ಹಿಂದೆ ತೆರವಾಗಿದ್ದ ರಸ್ತೆ ಮತ್ತೆ ಬಂದ್ ಆಗಿದೆ.
ಶಿರಾಡಿಘಾಟ್ನ ದೊಡ್ಡ ತಪ್ಪಲು ಬಳಿ ಆ.1ರ ಗುರುವಾರ ಮತ್ತೆ ಭೂಕುಸಿತವಾಗಿದ್ದು, ದೊಡ್ಡ ಸದ್ದಿನೊಂದಿಗೆ ಮಣ್ಣು ಕುಸಿದಿದೆ.
ಗುಡ್ಡ ಕುಸಿಯುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಳೆದ ಮೂರು ದಿನಗಳಲ್ಲಿ ಪದೇ ಪದೇ ಭೂಮಿ ಕುಸಿಯುತಿದ್ದು, ಶಿರಾಡಿ ಘಾಟ್ನಲ್ಲಿ ಆತಂಕ ಹೆಚ್ಚಿದೆ. ಶಿರಾಡಿ ಘಾಟ್ ಕಡೆ ಪ್ರಯಾಣಿಸುವವರು ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ.
ಶಿರಾಡಿ ಘಾಟಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಜು.31ರ ಬುಧವಾರ ಸಂಜೆ ವೇಳೆಗೆ ಭೂ ಕುಸಿತವಾಗಿ 2 ಕಂಟೈನರ್ ಹಾಗೂ ಒಂದು ಟ್ಯಾಂಕರ್ ಮಣ್ಣಿನಲ್ಲಿ ಸಿಲುಕಿದ್ದರಿಂದ ಈ ಮಾರ್ಗದಲ್ಲಿ ತಾತ್ಕಾಲಿಕವಾಗಿ ವಾಹನ ಸಂಚಾರ ಸ್ಥಗಿತ ಮಾಡಲಾಗಿತ್ತು.
ಜು.30ರ ಮಂಗಳವಾರ ಸಂಜೆಯಿಂದ ವಾಹನ ಸಂಚಾರ ಸ್ಥಗಿತ ಆಗಿತ್ತು. ಸತತ ಕಾರ್ಯಾಚರಣೆ ಬಳಿಕ ಬುಧವಾರ ಬೆಳಗ್ಗೆ ರಸ್ತೆಗಳಲ್ಲಿ ಸಾಲುಗಟ್ಟಿ ನಿಂತಿದ್ದ ವಾಹನಗಳ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು.
ಬುಧವಾರ ಸಂಜೆ 5.30ರ ವರೆಗೂ ಏಕಮುಖ ಸಂಚಾರ ಪ್ರಕ್ರಿಯೆ ನಡೆಯುತ್ತಿತ್ತು. ಅನಂತರ ಪುನಃ ಗುಡ್ಡ ಕುಸಿತ ಉಂಟಾದ ಹಿನ್ನೆಲೆ 2 ಕಂಟೈನರ್, 1 ಟ್ಯಾಂಕರ್ ಮಣ್ಣಿನಡಿ ಸಿಲುಕಿದೆ. ಇದರಲ್ಲಿದ್ದ ಮೂವರು ಚಾಲಕರನ್ನು ಪೊಲೀಸರು ಹಾಗೂ ರಸ್ತೆ ಕಾಮಗಾರಿ ಸಿಬಂದಿ ರಕ್ಷಿಸಿದ್ದಾರೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.