Smart cityಗೆ ಬಂತು ಟಾರ್ಪಲಿನ್‌ ಬಸ್‌ ನಿಲ್ದಾಣ!

ಮತ್ತೂಂದು ಮಳೆಗಾಲಕ್ಕೂ ಮುಂದುವರಿದ ಸ್ಟೇಟ್‌ಬ್ಯಾಂಕ್‌ ಬಸ್‌ ನಿಲ್ದಾಣ ಅವ್ಯವಸ್ಥೆ

Team Udayavani, Aug 1, 2024, 12:57 PM IST

Screenshot (61)

ಸ್ಟೇಟ್‌ಬ್ಯಾಂಕ್‌: ನಗರ, ಗ್ರಾಮಾಂತರವೆನ್ನದೆ ಜಿಲ್ಲೆ, ಹೊರಜಿಲ್ಲೆಗಳ ಮೂಲೆ ಮೂಲೆಗಳಿಗೆ ಸಂಚರಿಸಲು ನಿಂತಿರುವ ಸಾಲು ಸಾಲು ಬಸ್‌ ಗಳು, ಮಳೆಯಲ್ಲೇ ಕೊಡೆ ಹಿಡಿದು ನಿಂತಿರುವ ಪ್ರಯಾಣಿಕರು, ತಲೆಯ ಮೇಲೆ ಬಟ್ಟೆ ಹಾಕಿಕೊಂಡು ಅತ್ತಿಂದಿತ್ತ ಓಡಾಡಿ ಪ್ರಯಾಣಿಕರನ್ನು ಕರೆಯುವ ನಿರ್ವಾಹಕರು… ಟಾರ್ಪಲಿನ್‌ನಡಿ ನಿಂತು ಅರೆಬರೆ ಒದ್ದೆಯಾಗಿ ಮುದುಡಿಕೊಂಡು ನಿಂತಿರುವ ಬಸ್‌ ಏಜೆಂಟರು, ಪ್ರಯಾಣಿಕರು…!

ಇದು ಸ್ಮಾರ್ಟ್‌ಸಿಟಿ ಮಂಗಳೂರಿಗೆ ಮೊದಲು ಬಂದವರು ಸಾಮಾನ್ಯವಾಗಿ ಇಳಿಯುವ ಕೇಂದ್ರಸ್ಥಳವಾಗಿರುವ ಸ್ಟೇಟ್‌ಬ್ಯಾಂಕ್‌ನ ಖಾಸಗಿ ಬಸ್‌ ನಿಲ್ದಾಣದ ಚಿತ್ರಣ. ಈ ಬಸ್‌ ನಿಲ್ದಾಣದ ಅಭಿವೃದ್ಧಿ ಕಾಮಗಾರಿ ಅರೆಬರೆಯಾಗಿ ನಡೆದಿರುವುದರಿಂದ ಅವ್ಯವಸ್ಥೆ ಉಂಟಾಗಿದೆ.

ಬಸ್‌ಗಳು ನಿಲುಗಡೆಯಾಗಲು, ಪ್ರಯಾಣಿಕರು ತಂಗಲು ಲೇನ್‌ಗಳನ್ನು ನಿರ್ಮಿಸಿ ಪ್ರತ್ಯೇಕವಾಗಿ ಶೆಲ್ಟರ್‌ ನಿರ್ಮಿಸುವ ಯೋಜನೆ ಇಲ್ಲಿ ಕೈಗೆತ್ತಿಕೊಳ್ಳಲಾಗಿತ್ತು. ಸಿಟಿ, ಸರ್ವಿಸ್‌ ಮಾತ್ರವಲ್ಲದೆ ಕೆಲವು ಕೆಎಸ್‌ಆರ್‌ಟಿಸಿ ಬಸ್‌ಗಳ ನಿಲುಗಡೆಗೂ ಇಲ್ಲಿ ಅವಕಾಶವಿದೆ. ಆದರೆ ಶೆಲ್ಟರ್‌ಗಳ ನಿರ್ಮಾಣ ಅರ್ಧಕ್ಕೆ ನಿಂತು ವರ್ಷ ಎರಡು ಕಳೆದಿವೆ. ಸಿಟಿ ಬಸ್‌ಗಳು ನಿಲುಗಡೆಯಾಗುವ ಎರಡು ಲೇನ್‌ಗಳು ಮತ್ತು ಖಾಸಗಿ ಎಕ್ಸ್‌ಪ್ರೆಸ್‌ ಬಸ್‌ಗಳು ನಿಲುಗಡೆಯಾಗುವ ಒಂದು ಲೇನ್‌ನಲ್ಲಿ ಪ್ರಯಾಣಿಕರು ತಂಗಲು ಮೇಲ್ಛಾವಣೆಯೇ ಇಲ್ಲದೆ ಬಿಸಿಲು, ಮಳೆಗೆ ನಿಲ್ಲಬೇಕಾದ ಅನಿವಾರ್ಯ ಸೃಷ್ಟಿಯಾಗಿದೆ. ಇದೀಗ ಮತ್ತೂಂದು ಮಳೆಗಾಲದಲ್ಲಿಯೂ ಪ್ರಯಾಣಿಕರು ಸಂಕಷ್ಟಕ್ಕೊಳಗಾಗಿದ್ದಾರೆ.

ಟಾರ್ಪಲಿನ್‌ನಿಂದ ರಕ್ಷಣೆ!
ಉಡುಪಿ ಕಡೆಗೆ ಹೋಗುವ ಎಕ್ಸ್‌ಪ್ರೆಸ್‌ ಬಸ್‌ಗಳು ನಿಲುಗಡೆಯಾಗುವ ಸ್ಥಳದಲ್ಲಿ ಬಸ್‌ ನಿರ್ವಾಹಕರು, ಏಜೆಂಟರು ಸೇರಿ ಟಾರ್ಪಲಿನ್‌ ಹಾಕಿ ಸಣ್ಣದೊಂದು ಸೂರು ಮಾಡಿಕೊಂಡಿದ್ದಾರೆ. ಜೋರು ಮಳೆ ಬಂದಾಗ ಅದರಡಿಯಲ್ಲಿ ನಿಂತು ಪ್ರಯಾಣಿಕರನ್ನು ಕರೆಯುತ್ತಾರೆ. ಕೆಲವು ಪ್ರಯಾಣಿಕರು ಕೂಡ ಇದೇ ಟಾರ್ಪಲಿನ್‌ನಡಿಯಲ್ಲಿ ನಿಂತುಕೊಳ್ಳುತ್ತಾರೆ. ಕೆಲವು ತುಂಡು ಶೀಟ್‌ಗಳನ್ನು, ಟಾರ್ಪಲಿನ್‌ನ್ನು ಜೋಡಿಸಿ ಇದನ್ನು ಮಾಡಲಾಗಿದೆ. ಯಾವಾಗ ಗಾಳಿಗೆ ಹಾರಿ ಹೋಗುತ್ತದೋ ಹೇಳಲಾಗದ ಸ್ಥಿತಿಯಲ್ಲಿದೆ.

ಕುಳಿತುಕೊಳ್ಳಲು ಆಸನವೂ ಇಲ್ಲ
ಮೂರು ಲೇನ್‌ಗಳಲ್ಲಿ ಮೇಲ್ಛಾವಣಿ ಇಲ್ಲ, ಇನ್ನುಳಿದ ಲೇನ್‌ಗಳಲ್ಲಿ ಮೇಲ್ಛಾವಣಿ ಇದೆ. ಆದರೆ ಅಲ್ಲಿ ಪ್ರಯಾಣಿಕರು ಕುಳಿತುಕೊಳ್ಳಲು ಬೆಂಚ್‌ ವ್ಯವಸ್ಥೆಯೇ ಇಲ್ಲ. ಬಸ್‌ಗಾಗಿ ಕಾಯುವವರು ನಿಂತುಕೊಂಡೇ ಇರಬೇಕು. ಅಶಕ್ತರು, ಹಿರಿಯ ನಾಗರಿಕರು ನೆಲದ ಮೇಲೆಯೇ ಕುಳಿತುಕೊಳ್ಳಬೇಕಾದ ಸ್ಥಿತಿ ಇಲ್ಲಿದೆ. ಕೆಲವು ನಿರ್ವಾಹಕರು ತಮ್ಮ ಬಸ್‌ನ ಒಂದೆರಡು ಹಳೆಯ ಸೀಟ್‌ಗಳನ್ನೇ ಬಸ್‌ ಶೆಲ್ಟರ್‌ನಲ್ಲಿಟ್ಟು ಅದರಲ್ಲಿ ಕುಳಿತುಕೊಳ್ಳುತ್ತಿದ್ದಾರೆ!

ಟಾಪ್ ನ್ಯೂಸ್

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

Sullia: ಅಭಿವೃದ್ಧಿ ಕಾಣದ ಪೆರ್ಮಾಜೆ-ಕೋಟೆಗುಡ್ಡೆ-ಪಂಬೆತ್ತಾಡಿ ರಸ್ತೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

Thumbe: ಅಗೆದಲ್ಲಿ ಕಡೆಗೂ ಡಾಮರು

Thumbe: ಅಗೆದಲ್ಲಿ ಕಡೆಗೂ ಡಾಮರು

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.