Heavy Rain: ಮೂಡುಬಿದಿರೆ ತಾಲೂಕಿನ ವಿವಿಧೆಡೆ ಹಾನಿ; ಓರ್ವ ಮಹಿಳೆ ಸಾವು
Team Udayavani, Aug 1, 2024, 1:23 PM IST
ಮೂಡುಬಿದಿರೆ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತಾಲೂಕಿನ ಹಲವೆಡೆ ಮನೆ, ಕಟ್ಟಡ, ತಡೆಗೋಡೆ, ಅವರಣ ಗೋಡೆ, ಸೇತುವೆ ಕುಸಿತ, ರಸ್ತೆಗಳು ಕೊಚ್ಚಿಹೋದ ಪ್ರಕರಣಗಳು ವರದಿಯಾಗಿವೆ.
ನೆಲ್ಲಿಕಾರು ಗ್ರಾಮದಲ್ಲಿ ಗೋಪಿ ಎಂಬವರ ಮನೆ ಮಳೆಯಿಂದಾಗಿ ಜು.31ರ ಬುಧವಾರ ರಾತ್ರಿ ಸುಮಾರು 10 ಗಂಟೆಗೆ ಕುಸಿದು ಬಿದ್ದಿದೆ.
ಮಕ್ಕಳು, ಮೊಮ್ಮಕ್ಕಳ ಸಹಿತ 5 ಮಂದಿಯೊಂದಿಗೆ ವಾಸವಾಗಿರುವ ಗೋಪಿ (56) ಅವರಿಗೆ ತೀವ್ರ ಏಟು ತಗಲಿದ್ದು, ತಕ್ಷಣ ಹೊಸ್ಮಾರು ಆಸ್ಪತ್ರೆಗೆ ಬಳಿಕ ಕಾರ್ಕಳ ಸರಕಾರಿ ಆಸ್ಪತ್ರೆ ಗೆ ದಾಖಲಿಸಲಾಯಿತಾದರೂ ಪ್ರಯೋಜನವಾಗದೆ ತಡರಾತ್ರಿ ಮೃತಪಟ್ಟರು.
ಮಳೆಯಿಂದಾಗಿ ತಾಲೂಕಿನಲ್ಲಿ ಈ ಮಳೆಗಾಲದಲ್ಲಿ ಜೀವಹಾನಿ ಸಂಭವಿಸಿರುವ ಮೊದಲ ಪ್ರಕರಣ ಇದಾಗಿದೆ.
ಮುರಕಲ್ಲಿನ ಗೋಡೆ ಕುಸಿದು ಗೋಪಿ ಅವರ ಮೇಲೆಯೇ ಬಿತ್ತೆಂದೂ ಮಕ್ಕಳಾದ ಗಣೇಶ, ರಾಜೇಶ, ಸತೀಶ ಹೊರಗೆ ಓಡಿ ಹೋದ ಕಾರಣ ಪ್ರಾಣಾಪಾಯದಿಂದ ಪಾರಾದರೆಂದೂ ಹೇಳಲಾಗಿದೆ. ಮಕ್ಕಳೆಲ್ಲರೂ ಕೂಲಿ ಕಾರ್ಮಿಕರು.
ಸ್ಥಳಕ್ಕೆ ಶಾಸಕ ಉಮಾನಾಥ ಕೋಟ್ಯಾನ್, ತಹಶೀಲ್ದಾರ್ ಪ್ರದೀಪ್ ವಿ. ಕುರ್ಡೇಕರ್, ಆರ್ ಐ. ಮಂಜುನಾಥ್, ನೆಲ್ಲಿಕಾರು ಪಂ. ಅಧ್ಯಕ್ಷ ಉದಯ ಪೂಜಾರಿ, ಪಿಡಿಓ ಪ್ರಶಾಂತ ಶೆಟ್ಟಿ, ಕಾರ್ಯದರ್ಶಿ ದಾಮೋದರ, ಸಿಬಂದಿ ಪ್ರಶಾಂತ್ ಜೈನ್, ಲಕ್ಷ್ಮಣ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
Mangaluru: ಕದ್ರಿ ಪಾರ್ಕ್ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ
Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್ ಅಧಿಕಾರಿ: ಪುಷ್ಪಾ ಅಮರನಾಥ್
Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.