Shimoga; ಬಿಜೆಪಿ ಶಕ್ತಿ ಪ್ರದರ್ಶನಕ್ಕಾಗಿ ಪಾದಯಾತ್ರೆ ಮಾಡುತ್ತಿದೆ: ಶಾಸಕ ಬೇಳೂರು
Team Udayavani, Aug 1, 2024, 2:37 PM IST
ಶಿವಮೊಗ್ಗ: ಲಿಂಗನಮಕ್ಕಿ ಜಲಾಶಯ ಬಹುತೇಕ ಭರ್ತಿಯಾದ ಹಿನ್ನೆಲೆಯಲ್ಲಿ ಮೂರು ಕ್ರಸ್ಟ್ ಗೇಟ್ ಮೂಲಕ ಶರಾವತಿ ನದಿಗೆ ನೀರು ಬಿಡುಗಡೆ ಮಾಡಲಾಗಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಲಿಂಗನಮಕ್ಕಿಯಲ್ಲಿರುವ ಜಲಾಶಯ ಬಹುತೇಕ ಭರ್ತಿ ಹಿನ್ನೆಲೆ ಮೂರು ಗೇಟ್ ಗಳ ಮೂಲಕ ಅಧಿಕಾರಿಗಳು ನದಿಗೆ ನೀರು ಬಿಟ್ಟಿದ್ದಾರೆ. 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.
ಇದೇ ವೇಳೆ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಂದ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.
ಈ ವೇಳೆ ಮಾತನಾಡಿದ ಅವರು,ಕಳೆದ ವರ್ಷ ಬರಗಾಲ ಆವರಿಸಿತ್ತು. ಈ ಬಾರಿ ಸಾಕಷ್ಟು ಮಳೆಯಾಗಿದೆ. ಐದು ವರ್ಷದ ನಂತರ ಶರಾವತಿ ಭರ್ತಿಯಾಗಿದೆ. ಲಿಂಗನಮಕ್ಕಿ ಜಲಾಶಯದಿಂದ 3 ಗೇಟ್ ಗಳ ಮೂಲಕ 10 ಸಾವಿರ ಕ್ಯೂಸೆಕ್ ನೀರು ಬಿಟ್ಟಿದ್ದೇವೆ. ಸಾಗರ ತಾಲೂಕಿನಲ್ಲಿ ಅಷ್ಟೇ ಹಾನಿಯಾಗಿದೆ. ಹೊಲ ಗದ್ದೆ ಜಲಾವೃತವಾಗಿವೆ. ಮನೆಗಳು ಹಾನಿಯಾಗಿವೆ. ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ವಿದ್ಯುತ್ ಸಮಸ್ಯೆ ನೀಗಲಿದೆ ಎಂದರು.
ಸಾಗರ ಕ್ಷೇತ್ರದಲ್ಲಿ 100 ಮನೆಗಳು ಕುಸಿದು ಬಿದ್ದಿವೆ. ಸದ್ಯ 10 ಸಾವಿರ ಪರಿಹಾರ ಕೊಟ್ಟಿದ್ದೇವೆ. ಜೋಗ ಜಲಪಾತ ಅಭಿವೃದ್ಧಿಗೆ 183 ಕೋಟಿ ಬಿಡುಗಡೆ ಆಗಿತ್ತು. ಕಳೆದ ಬಿಜೆಪಿ ಸರಕಾರದ ಅವಧಿಯಲ್ಲಿ ಒಂದೇ ಒಂದು ರೂಪಾಯಿ ಹಣ ಬಿಡುಗಡೆ ಮಾಡಲಿಲ್ಲ. ಸಂಸದ ರಾಘವೇಂದ್ರ ಸುಮ್ಮನೆ ಬೊಗಳೆ ಬಿಟ್ಟರು. ನಮ್ಮ ಸರಕಾರ ಬಂದ ಮೇಲೆ 95 ಕೋಟಿ ಹಣ ಬಿಡುಗಡೆ ಮಾಡಿದೆ ಎಂದರು.
ಬಿಜೆಪಿ ಪಾದಯಾತ್ರೆ ವಿಚಾರವಾಗಿ ಮಾತನಾಡಿದ ಅವರು, ಪಾದಯಾತ್ರೆ ಗೊಂದಲಕ್ಕೆ ಕಾರಣವಾಗಿದೆ. ಪಾದಯಾತ್ರೆ ಮಾಡುವ ಅವಶ್ಯಕತೆ ಇಲ್ಲ. ಯತ್ನಾಳ್ ನಾನೊಂದು ಕಡೆ ಪಾದಯಾತ್ರೆ ಮಾಡುತ್ತೇನೆ ಎನ್ನುತ್ತಾರೆ, ಜಾರಕಿಹೊಳಿ ನಾನೊಂದು ಕಡೆ ಪಾದಯಾತ್ರೆ ಮಾಡ್ತೀನಿ ಅಂತಾರೆ. ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಪ್ರಬಲವಾಗುತ್ತದೆಂಬ ಕಾರಣಕ್ಕೆ ಕುಮಾರಸ್ವಾಮಿ ನಾನು ಬೆಂಬಲ ಕೊಡಲ್ಲ ಎನ್ನುತ್ತಿದ್ದಾರೆ. ಬಿಜೆಪಿ ಶಕ್ತಿ ಪ್ರದರ್ಶನಕ್ಕಾಗಿ ಪಾದಯಾತ್ರೆ ಮಾಡುತ್ತಿದೆ ಅಷ್ಟೇ ಎಂದರು.
ಸಚಿವ ಸಂಪುಟ ಬದಲಾವಣೆ ವಿಚಾರವಾಗಿ ಮಾತನಾಡಿ, ಏನಪ್ಪ, ಅದರ ಬಗ್ಗೆ ನನಗೆ ಗೊತ್ತಿಲ್ಲ. ಎಲ್ಲಾ ಹಾಗೆ ಮಾತನಾಡುತ್ತಿದ್ದಾರೆ. ನಿಮ್ಮ ಮಾಧ್ಯಮಗಳಲ್ಲಿ ಹಾಗೆ ಬರುತ್ತಿದೆ ನೋಡಿದ್ದೇನೆ ಅಷ್ಟೇ ಎಂದರು.
ಶರಾವತಿ ನೀರು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ವಿಚಾರವಾಗಿ ಮಾತನಾಡಿ, ಕುಡಿಯುವ ನೀರಿಗೆ ಕೊಡಲು ಯಾರ ವಿರೋಧವೂ ಇಲ್ಲ. ಶರಾವತಿ ಮುಳುಗಡೆ ಪ್ರದೇಶದವರಿಗೆ 24 ಗಂಟೆ ವಿದ್ಯುತ್ ಕೊಟ್ಟರೆ ನೀರು ತೆಗೆದುಕೊಂಡು ಹೋಗಿ ನಿರಂತರ ವಿದ್ಯುತ್ ಕೊಟ್ಟರೆ ನಮ್ಮ ವಿರೋಧ ಇಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.