Udupi; ಕೈಮಗ್ಗ ಮೇಳಕ್ಕೆ ಪುತ್ತಿಗೆ ಶ್ರೀಪಾದರಿಂದ ಚಾಲನೆ
Team Udayavani, Aug 1, 2024, 4:36 PM IST
ಉಡುಪಿ: ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಪುತ್ತಿಗೆ ಮಠದ ಆಶ್ರಯದಲ್ಲಿ ಪದ್ಮಶಾಲಿ ನೇಕಾರ ಪ್ರತಿಷ್ಠಾನ ವತಿಯಿಂದ ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘದ ಸಹಭಾಗಿತ್ವದಲ್ಲಿ ಕೈಮಗ್ಗ ಸೀರೆಗಳ ಮೌಲ್ಯವರ್ಧನೆ ಮತ್ತು ಉನ್ನತೀಕರಣಕ್ಕಾಗಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಅಂಗವಾಗಿ ಶ್ರೀಕೃಷ್ಣಮಾಸೋತ್ಸವ ಪ್ರಯುಕ್ತ ರಾಜಾಂಗಣದಲ್ಲಿ ಅ. 11ರ ವರೆಗೆ ಹಮ್ಮಿಕೊಂಡಿರುವ ಕೈಮಗ್ಗ ಸೀರೆಗಳ ಉತ್ಸವ – 2024ಕ್ಕೆ ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಚಾಲನೆ ನೀಡಿ ಅನುಗ್ರಹಿಸಿದರು.
ಆಧುನಿಕ ಸೀರೆಗಳು ನೋಡಲು ಚಂದ ಇರಬಹುದು ಆದರೆ ಅಲ್ಪಕಾಲ ಮಾತ್ರ ಬಾಳಿಕೆ ಬರುವಂತದ್ದು, ಕೈಮಗ್ಗದ ಸೀರೆಗಳು ಸಾಂಪ್ರದಾಯಿಕವಾಗಿಯೂ ದೀರ್ಘಕಾಲ ಬಾಳಿಕೆಗೆ ಬರುವಂತದ್ದಾಗಿದೆ. ಸೀರೆಯುವ ಭಾರತೀಯ ಸಾಂಸ್ಕೃತಿ ಮೌಲ್ಯದ ರಕ್ಷಕವಾಗಿದೆ. ದೇವತೆಗಳು ಸೀರೆಯಲ್ಲೇ ಕಾಣಿಸಿಕೊಂಡಿದ್ದಾರೆ. 16,108 ಸಾವಿರ ಸೀರೆ ಮಾರಾಟ ಆಗುವಂತಾಗಲಿ ಎಂದು ಹರಸಿದರು.
ಪೌರಾಯುಕ್ತ ರಾಯಪ್ಪ, ಉಡುಪಿ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಅಧ್ಯಕ್ಷ ಅಮ್ಮುಂಜೆ ಪ್ರಭಾಕರ ನಾಯಕ್, ಡೆಂಟಾ ಕೇರ್ನ ಡಾ| ವಿಜಯೇಂದ್ರ ರಾವ್, ಉಜ್ವಲ್ ಡೆವಲಪರ್ ನ ಅಜಯ್ ಪಿ.ಶೆಟ್ಟಿ, ಪಾಟೀಲ್ ಸ್ಟೋರ್ ನ ಗಣೇಶ್ ಪಾಟೀಲ್, ನಗರಸಭೆ ಸದಸ್ಯರಾದ ರಜನಿ ಹೆಬ್ಬಾರ್, ಟಿ.ಜಿ. ಹೆಗ್ಡೆ, ಉದ್ಯಮಿ ಹರಿಯಪ್ಪ ಕೋಟ್ಯಾನ್, ಶ್ರೀಮಠದ ದಿವಾನರಾದ ನಾಗರಾಜ ಆಚಾರ್ಯ, ರಮೇಶ್ ಭಟ್, ಉಪಾಧ್ಯಕ್ಷರಾದ ಮಂಜುನಾಥ ಮಣಿಪಾಲ, ಸರೋಜಾ ಯಶವಂತ್, ಕಾರ್ಯದರ್ಶಿ ಅವಿನಾಶ್ ಮಾರ್ಪಳ್ಳಿ, ಪದಾಧಿಕಾರಿಗಳಾದ ಅಶೋಕ್ ಶೆಟ್ಟಿಗಾರ್ ಅಲೆವೂರು, ವಿಟ್ಠಲ ಶೆಟ್ಟಿಗಾರ್, ರಾಜಕೇಸರಿ, ಶ್ರೀನಿವಾಸ ಶೆಟ್ಟಿಗಾರ್ ಬೈಲೂರು ಉಪಸ್ಥಿತರಿದ್ದರು.
ಪ್ರತಿಷ್ಠಾನದ ಅಧ್ಯಕ್ಷ ರತ್ನಾಕರ್ ಇಂದ್ರಾಳಿ ಪ್ರಸ್ತಾವನೆಗೈದರು. ಆಯೋಜನ ಸಮಿತಿ ಅಧ್ಯಕ್ಷ ಡಾ| ಚಂದನ್ ಶೆಟ್ಟಿಗಾರ್ ಸ್ವಾಗತಿಸಿ, ಸದಾಶಿವ ಗೋಳಿಜಾರು ನಿರೂಪಿಸಿದರು.
ಕೈಮಗ್ಗ ಸೀರೆ ಪ್ರದರ್ಶನ
ಉದ್ಘಾಟನೆಯ ಅನಂತರ ಪುತ್ತಿಗೆ ಶ್ರೀಪಾದರು ಮಳಿಗೆಗಳಿಗೆ ಭೇಟಿ ನೀಡಿ ಕೈಮಗ್ಗಗಳಿಂದ ಸಿದ್ಧಪಡಿಸಿದ ಸೀರೆಗಳನ್ನು ವೀಕ್ಷಿಸಿದರು. ಉಡುಪಿ, ಮಂಗಳೂರು, ಇಳಿಕಲ್, ದೊಡ್ಡಬಳ್ಳಾಪುರ, ಜಮಖಂಡಿ, ಚನ್ನರಾಯಪಟ್ಟಣ, ಚಾಮರಾಜನಗರ, ಕೊಳ್ಳೇಗಾಲ, ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗದ 30ಕ್ಕೂ ಅಧಿಕ ಕೈಮಗ್ಗ ಸೀರೆಗಳ ಉತ್ಪಾದಕರು ಮತ್ತು ಮಾರಾಟಗಾರರು ಭಾಗವಹಿಸಿದ್ದಾರೆ.
ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆ ಬರುತ್ತಿವೆ. ಕೆಲವು ದೇವಸ್ಥಾನಗಳು ಈಗಾಗಲೇ ವಸ್ತ್ರಸಂಹಿತೆ ಜಾರಿಗೆ ತಂದಿದೆ. ಕೆಲವು ದೇವಸ್ಥಾನಗಳು ವಸ್ತ್ರಸಂಹಿತೆ ಜಾರಿ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸುತ್ತಿವೆ. ಉಡುಪಿ ಶ್ರೀ ಕೃಷ್ಣಮಠದಲ್ಲೂ ವಸ್ತ್ರಸಂಹಿತೆ ಜಾರಿ ಮಾಡಬೇಕು ಎಂಬ ಒತ್ತಡ ಇದೆ. ವಸ್ತ್ರಸಂಹಿತೆ ಜಾರಿ ಮಾಡುವುದರಿಂದ ದೇವಸ್ಥಾನಕ್ಕೆ ಸೀರೆ ಉಟ್ಟು ಬರುವವರ ಸಂಖ್ಯೆ ಹೆಚ್ಚಲಿದೆ. ಇದರಿಂದ ಸೀರೆ ಉದ್ಯಮವೂ ಬೆಳೆಯಲಿದೆ ಎಂದು ಶ್ರೀಪಾದರು ಹೇಳಿದರು.
ಚಿತ್ರಗಳು : ಆಸ್ಟ್ರೋ ಮೋಹನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.