ಹಾವೇರಿ: ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಜಾಕ್ಕೆ ಒತ್ತಾಯ


Team Udayavani, Aug 1, 2024, 6:08 PM IST

ಹಾವೇರಿ: ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಜಾಕ್ಕೆ ಒತ್ತಾಯ

■ ಉದಯವಾಣಿ ಸಮಾಚಾರ
ಹಾವೇರಿ: ಅಹಿಂದ ಹೆಸರಲ್ಲಿ ಆಡಳಿತಕ್ಕೆ ಬಂದ ಕಾಂಗ್ರೆಸ್‌ ಸರ್ಕಾರ ಎಸ್‌ಟಿ ನಿಗಮದಲ್ಲಿ 187 ಕೋಟಿ ರೂ. ಲೂಟಿ ಮಾಡಿದ್ದು, ಕೂಡಲೇ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಜೆಡಿಎಸ್‌ ಕಾರ್ಯಕರ್ತರು ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಜೆಡಿಎಸ್‌ ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ, ಎಸ್‌ಟಿ ಘಟಕದ ಅಧ್ಯಕ್ಷ ಮಂಜುನಾಥ ಕನ್ನಾಯ್ಕನವರ ನೇತೃತ್ವದಲ್ಲಿ
ಬುಧವಾರ ಕಾರ್ಯಕರ್ತರು ಮನವಿ ಸಲ್ಲಿಸಿದರು. ಮಹರ್ಷಿ ವಾಲ್ಮೀಕಿ ನಿಗಮದ 187 ಕೋಟಿ ರೂ. ಹಗರಣವನ್ನು ಸಿಬಿಐಗೆ ಒಪ್ಪಿಸಿ ರಾಜ್ಯ ಕಾಂಗ್ರೆಸ್‌ ಸರ್ಕಾರವನ್ನು ವಜಾ ಮಾಡಬೇಕು. ಸಿಎಂ ಸಿದ್ದರಾಮಯ್ಯ ಅವರು ಹಣಕಾಸು ಖಾತೆ ತಮ್ಮ ಕೈಯಲ್ಲಿ ಇಟ್ಟುಕೊಂಡಿದ್ದಾರೆ. ಎಸ್‌ಟಿ ನಿಗಮಕ್ಕೆ ಹಣ ಮಂಜೂರು ಮಾಡಿದ್ದಾರೆ.

ಸಚಿವ ಸ್ಥಾನದಲ್ಲಿದ್ದ ನಾಗೇಂದ್ರ, ನಿಗಮದ ಅಧ್ಯಕ್ಷ ಬಸವಗೌಡ ದದ್ದಲ್‌ ಇವರಷ್ಟೇ ರಾಜೀನಾಮೆ ನೀಡಿದರೆ ಸಾಲದು, ಹಗರಣದ ರುವಾರಿಗಳಾದ ಸಿಎಂ ಸಿದ್ದರಾಮಯ್ಯ ಅವರು ತಕ್ಷಣವೇ ರಾಜೀನಾಮೆ ನೀಡಬೇಕು. ರಾಜ್ಯಪಾಲರು ಹಗರಣದಲ್ಲಿ ಮುಳಗಿರುವ ಕಾಂಗ್ರೆಸ್‌ ಸರ್ಕಾರ ವಜಾಗೊಳಿಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಬೇಕೆಂದು ಒತ್ತಾಯಿಸಿದರು.

ಎಸ್‌ಟಿ ಘಟಕದ ಜಿಲ್ಲಾಧ್ಯಕ್ಷ ಮಂಜುನಾಥ ಕನ್ನಾಯ್ಕನವರ ಮಾತನಾಡಿ, ಸಿಎಂ ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರ ರಹಿತ ಆಡಳಿತ ಕೊಡುವುದಾಗಿ ಹೇಳಿ ಆಡಳಿತಕ್ಕೆ ಬಂದು ಒಂದು ವರ್ಷ ಕಳೆಯುತ್ತಿದ್ದಂತೆ ಎಸ್‌ಟಿ ನಿಗಮದಲ್ಲಿ 187 ಕೋಟಿ ರೂ., ಹಣ ಲೂಟಿ ಮಾಡಿದೆ. ಇದನ್ನು ರಾಜ್ಯದ ಅಹಿಂದ ಜನತೆ ಎಂದು ಕ್ಷಮಿಸುವುದಿಲ್ಲ.

ಇದಲ್ಲದೇ ಅನೇಕ ಜನಾಂಗದ ನಿಗಮಗಳಲ್ಲೂ ಹಗರಣಗಳಾಗಿದೆ. ಇಂತಹ ಸರ್ಕಾರ ರಾಜ್ಯವನ್ನು ಆಳುವ ನೈತಿಕತೆ ಕಳೆದುಕೊಂಡಿದೆ. ಭ್ರಷ್ಟಾಚಾರ ಮಾಡಿರುವವರೂ ಯಾರೇ ಆಗಿರಲಿ ಅವರಿಗೆ ತಕ್ಷ ಶಿಕ್ಷೆಯಾಗಬೇಕು. ಎಸ್‌ಟಿ ಜನಾಂಗದ ಹಣವನ್ನು ರಿಕವರಿ ಮಾಡಿ ರಾಜ್ಯದ ಎಸ್ಟಿ ಜನಾಂಗ ಕಲ್ಯಾಣ ನಿಧಿಯನ್ನು ಆ ಸಮುದಾಯಕ್ಕೆ ನೀಡಬೇಕು ಎಂದು ಆಗ್ರಹಿಸಿದರು.

ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಸಿದ್ಧಬಸಪ್ಪ ಯಾದವ್‌, ಅಲ್ತಾಪ್‌ ನದಾಫ್‌, ರಾಮನಗೌಡ್ರ ಪಾಟೀಲ, ಸತೀಶ ಮಾಳದಕರ, ಈರಣ್ಣ
ನವಲಗುಂದ, ರಮೇಶ ಮಾಕನೂರ, ಮೋಹಮ್‌ ಬಿನ್ಹಾಳ, ರೀಠಾ ನಾಯ್ಕರ್‌, ಎಂ.ಎಸ್‌. ಹಣಗಿ, ಲಲಿತಾ ಉಜ್ಜನಗೌಡ್ರ, ಭರಮಣ್ಣಕೊಳಚಿ, ಬಿ.ಸಿ. ಗುದ್ದಿಶೆಟ್ಟರ, ಸಿದ್ಧಣ್ಣ ಗುಡಿಮುಂದ್ಲರ್‌, ಅಮೀರಜಾನ್‌ ಬೇಪಾರಿ ಇದ್ದರು.

ಟಾಪ್ ನ್ಯೂಸ್

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bus

Haveri; ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಮಕ್ಕಳಿಗೆ ಉತ್ತಮ ಶಿಕ್ಷಣ-ಸಂಸ್ಕಾರ ‌ಕಲಿಸಿ: ಚೌಡಯ್ಯ ಸ್ವಾಮೀಜಿ

ಮಕ್ಕಳಿಗೆ ಉತ್ತಮ ಶಿಕ್ಷಣ-ಸಂಸ್ಕಾರ ‌ಕಲಿಸಿ: ಚೌಡಯ್ಯ ಸ್ವಾಮೀಜಿ

ಮಕ್ಕಳನ್ನು ಮೊಬೈಲ್‌ನಿಂದ ದೂರವಿಡಬಲ್ಲ ದು ಕ್ರೀಡೆ-ಮಮತಾ ಆರೆಗೊಪ್ಪ

pramod muthalik

Haveri; ಮುಸ್ಲಿಮರನ್ನು ಬಹಿಷ್ಕರಿಸಿ, ಅವರ ಜತೆ ಯಾವುದೇ ವ್ಯವಹಾರ ಮಾಡಬೇಡಿ: ಮುತಾಲಿಕ್‌ ಕಿಡಿ

ಸಾಹಿತ್ಯ ಸಮಾಜ ಮುಖಿಯಾಗಿರಲಿ: ಡಾ| ಎಂ.ಈ. ಶಿವಕುಮಾರ ಹೊನ್ನಾಳಿ

ಸಾಹಿತ್ಯ ಸಮಾಜ ಮುಖಿಯಾಗಿರಲಿ: ಡಾ| ಎಂ.ಈ. ಶಿವಕುಮಾರ ಹೊನ್ನಾಳಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

1-horoscope

Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.