Sagara ನನ್ನ ವಿದೇಶ ಪ್ರವಾಸದ ಬಗ್ಗೆ ಟೀಕೆ ಅನಗತ್ಯ; ಬೇಳೂರು ಆಕ್ರೋಶ
Team Udayavani, Aug 1, 2024, 7:53 PM IST
ಸಾಗರ: ನಾನು ವಿದೇಶ ಪ್ರವಾಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಕೆಲವರು ಟೀಕೆ ಮಾಡಿದ್ದು ನನ್ನ ಗಮನದಲ್ಲಿದೆ. ಹಿಂದೆ ಮಾಜಿ ಶಾಸಕರು ಅನಾರೋಗ್ಯ ನಿಮಿತ್ತ ಆರು ತಿಂಗಳು ಆಸ್ಪತ್ರೆಯಲ್ಲಿದ್ದರು. ಆದರೆ ನಾವು ಅವರನ್ನು ಟೀಕೆ ಮಾಡಿರಲಿಲ್ಲ ಎಂದು ಶಾಸಕ ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕಿನ ಲಿಂಗನಮಕ್ಕಿ ಜಲಾಶಯ ಭರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ನದಿಗೆ ನೀರನ್ನು ಹೊರಕ್ಕೆ ಬಿಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು ಪತ್ರಕರ್ತರ ಜೊತೆ ಮಾತನಾಡಿ, ಪ್ರತಿಯೊಬ್ಬರಿಗೂ ವೈಯಕ್ತಿಕ ಜೀವನವಿರುತ್ತದೆ. ಸಮಯ ಸಂದರ್ಭ ಬರುತ್ತದೆ. ನಾನು ಪತ್ನಿ, ಮಗನ ಜೊತೆ ಮಗಳ ಮನೆಗೆ ಹೋಗಿದ್ದೆನೇ ವಿನಾ ಮಜಾ ಮಾಡಲು ವಿದೇಶ ಪ್ರವಾಸ ಮಾಡಿರಲಿಲ್ಲ. ಪ್ರವಾಸ ತೆರಳಿದೆ ಎಂದ ಮಾತ್ರಕ್ಕೆ ಅಭಿವೃದ್ಧಿ ಕೆಲಸದಲ್ಲಿ, ಸಂಕಷ್ಟ ಸಂದರ್ಭದಲ್ಲಿ ನಾವು ವಿಳಂಬ ಮಾಡುತ್ತಿಲ್ಲ. ಪರಿಹಾರ ಕಲ್ಪಿಸುವಲ್ಲಿ ಯಾವುದೇ ವಿಳಂಬ ಮಾಡಿಲ್ಲ ಎಂದು ಹೇಳಿದರು.
ಕಳೆದ ವರ್ಷ ಅನಾವೃಷ್ಟಿಯಿಂದ ಸಾಕಷ್ಟು ಸಮಸ್ಯೆ ಎದುರಿಸಿದ್ದೇವೆ. ಈ ಬಾರಿ ಲಿಂಗನಮಕ್ಕಿ ಡ್ಯಾಂ ಭರ್ತಿಯಾಗಿದ್ದು ಅತೀವ ಸಂತೋಷ ತಂದಿದೆ. ಮಳೆ ಬರುತ್ತಿರುವುದರಿಂದ ಡ್ಯಾಂಗೆ ಇನ್ನಷ್ಟು ನೀರು ಬರುವ ಸಾಧ್ಯತೆ ಇದೆ. ಒಂದು ಕಡೆ ಲಿಂಗನಮಕ್ಕಿ ಆಣೆಕಟ್ಟು ಭರ್ತಿಯಾಗಿದ್ದು ಸಂತೋಷ ತಂದಿದ್ದರೇ ಇನ್ನೊಂದು ಕಡೆ ಮಳೆಯಿಂದ ಹಾನಿಯಾಗಿರುವುದು ತೀರ ಬೇಸರ ತರಿಸಿದೆ. ನೂರಾರು ಮನೆ, ರಸ್ತೆ, ಚರಂಡಿ, ಶಾಲೆ, ಅಂಗನವಾಡಿ, ಸೇತುವೆಗಳಿಗೆ ಹಾನಿಯಾಗಿದೆ ಎಂದರು.
ಮಳೆಯಿಂದ ಜಲ ಒಡೆಯುತ್ತಿದ್ದು ರಸ್ತೆ ತುಂಬಾ ಹಾನಿಯಾಗಿದೆ. ಈಗಾಗಲೇ ಹಾನಿಯ ಮಾಹಿತಿ ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಶುಕ್ರವಾರ ಅಧಿಕಾರಿಗಳ ಸಭೆ ನಡೆಸಿ ನಷ್ಟದ ಅಂದಾಜನ್ನು ಸರ್ಕಾಕ್ಕೆ ಸಲ್ಲಿಸಿ ಪರಿಹಾರಕ್ಕೆ ಮನವಿ ಮಾಡಲಾಗುತ್ತದೆ. ಅಧಿಕೃತ ಮತ್ತು ಅನಧಿಕೃತ ಮನೆಗಳಿಗೆ ತಾರತಮ್ಯ ಇಲ್ಲದೆ ಪರಿಹಾರ ನೀಡಲು ಗಮನ ಹರಿಸಲಾಗಿದೆ. ನಿರಂತರವಾಗಿ ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡುವ ಜೊತೆಗೆ ಅಗತ್ಯ ನೆರವು ಕಲ್ಪಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಮುಖರಾದ ಕಲಸೆ ಚಂದ್ರಪ್ಪ, ಅನಿತಾ ಕುಮಾರಿ, ಸೋಮಶೇಖರ ಲ್ಯಾವಿಗೆರೆ, ಅಶೋಕ ಬೇಳೂರು, ಗಣಪತಿ ಮಂಡಗಳಲೆ, ಕರ್ನಾಟಕ ವಿದ್ಯುತ್ ನಿಗಮದ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !
Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ
Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.