ODI ಸಮರಕ್ಕೆ ಶ್ರೀಲಂಕಾ ರೆಡಿ: ಏಕದಿನದಲ್ಲೂ ಮೇಲುಗೈ ಭಾರತದ ಗುರಿ

ಪತಿರಣ, ಮಧುಶಂಕ ಹೊರಕ್ಕೆ

Team Udayavani, Aug 2, 2024, 6:45 AM IST

Rohit-SHarma-(2)

ಕೊಲಂಬೊ: ಮೂರು ಪಂದ್ಯಗಳ ಟಿ20 ಸರಣಿ ಕ್ಲೀನ್‌ಸ್ವೀಪ್ ಸಾಧನೆಗೈದ ಭಾರತ ತಂಡವು ಶುಕ್ರವಾರದಿಂದ ಆರಂಭವಾಗುವ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲೂ ಮೇಲುಗೈ ಸಾಧಿಸಲು ಯೋಚಿಸುತ್ತಿದೆ. ಸರಣಿಯ ಮೊದಲ ಪಂದ್ಯ ಇಲ್ಲಿನ ಆರ್‌. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ.

ಸೂರ್ಯಕುಮಾರ್‌ ಯಾದವ್‌ ನೇತೃತ್ವದ ಭಾರತ ತಂಡ ಟಿ20 ಸರಣಿಯಲ್ಲಿ ಅಮೋಘ ನಿರ್ವಹಣೆ ನೀಡಿತಲ್ಲದೇ 3-0 ಅಂತರದಿಂದ ಗೆದ್ದು ಪ್ರಾಬಲ್ಯ ಮೆರೆದಿತ್ತು. ಇದೀಗ ವಿಶ್ವಕಪ್‌ ವಿಜೇತ ತಂಡದ ನಾಯಕರೂ ಆಗಿರುವ ರೋಹಿತ್‌ ಶರ್ಮ ನೇತೃತ್ವದ ಭಾರತೀಯ ತಂಡ ಏಕದಿನ ಸರಣಿಯೂಲ್ಲ ಸಂಪೂರ್ಣ ಹಿಡಿತ ಸಾಧಿಸಲು ಹಾತೊರೆಯುತ್ತಿದೆಯಲ್ಲದೇ ಗೆಲುವಿನ ಅಭಿಯಾನ ಮುಂದುವರಿಸುವ ಗುರಿ ಇಟ್ಟುಕೊಂಡಿದೆ. ಇದು ಹೊಸ ಕೋಚ್‌ ಗೌತಮ್‌ ಗಂಭೀರ್‌ ಅವರ ಮಾರ್ಗದರ್ಶನದಲ್ಲಿ ನಡೆಯಲಿರುವ ಮೊದಲ ಏಕದಿನ ಸರಣಿಯಾಗಿದೆ.

ಖ್ಯಾತ ಆಟಗಾರರಾದ ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮ, ಕೆಎಲ್‌ ರಾಹುಲ್‌ ಮತ್ತು ಶ್ರೇಯಸ್‌ ಅಯ್ಯರ್‌ ಅವರೆಲ್ಲ ಮರಳಿದ್ದರಿಂದ ತಂಡ ಬ್ಯಾಟಿಂಗ್‌ನಲ್ಲಿ ಬಲಿಷ್ಠವಾಗಿದೆ. ತಂಡದ ಬೌಲಿಂಗ್‌ ಪಾಳಯವೂ ಉತ್ತಮ ಸ್ಥಿತಿಯಲ್ಲಿದೆ.ಮೊಹಮ್ಮದ್‌ ಸಿರಾಜ್‌, ವಾಷಿಂಗ್ಟನ್‌ ಸುಂದರ್‌, ಅರ್ಷದೀಪ್‌ ಸಿಂಗ್‌, ರಿಯಾನ್‌ ಪರಾಗ್‌, ಅಕ್ಷರ್‌ ಪಟೇಲ್‌ ಅವರನ್ನು ಒಳಗೊಂಡ ತಂಡ ಬೌಲಿಂಗ್‌ನಲ್ಲಿಯೂ ಬಲಷ್ಠವಾಗಿದೆ.

ಪತಿರಣ, ಮಧುಶಂಕ ಹೊರಕ್ಕೆ
ಇದೇ ವೇಳೆ ಚರಿತ ಅಸಲಂಕ ನೇತೃತ್ವದ ಶ್ರೀಲಂಕಾ ತಂಡ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಗಾಯಗೊಂಡಿರುವ ವೇಗಿಗಳಾದ ಮತೀಷ ಪತಿರಣ ಮತ್ತು ದಿಲ್ಶನ್‌ ಮಧುಶಂಕ ಹೊರಬಿದ್ದಿರುವುದರಿಂದ ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ. ತಂಡದ ಫೀಲ್ಡಿಂಗ್‌ ಅಭ್ಯಾಸದ ವೇಳೆ ಮಧುಶಂಕ ಅವರ ಎಡ ಕಾಲಿಗೆ ನೋವಾಯಿತು. ಭಾರತ ವಿರುದ್ಧದ ಮೂರನೇ ಟಿ20 ಪಂದ್ಯದ ವೇಳೆ ಚೆಂಡನ್ನು ಹಾರಿ ಹಿಡಿಯುವ ವೇಳೆ ಪತಿರಣ ತೀವ್ರ ಗಾಯೊಂಡರು. ಆ ಪಂದ್ಯದಲ್ಲಿ ಅವರು ಬೌಲಿಂಗ್‌ ಮಾಡಿಲ್ಲ.

ಅವರಿಬ್ಬರ ಅಸುಪಸ್ಥಿತಯಿಂದಾಗಿ ಶ್ರೀಲಂಕಾ ತಂಡ ಮೊಹಮ್ಮದ್‌ ಶಿರಾಜ್‌ ಮತ್ತು ಇಶನ್‌ ಮಾಲಿಂಗ ಅವರನ್ನು ತಂಡಕ್ಕೆ ಸೇರಿಸಲಾಗಿದೆ. ಇವರಲ್ಲದೇ ಮೀಸಲು ಆಟಗಾರರಾಗಿ ಕುಸಲ್‌ ಜನಿತ್‌, ಪ್ರಮೋದ್‌ ಮಧುಶನ್‌ ಮತ್ತು ಜೆಫ್ರಿ ವಂಡರ್‌ಸೇ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ವಿಕೆಟ್‌ ಹಿಂದುಗಡೆ ಉತ್ತಮ ನಿರ್ವಹಣೆ ನೀಡುತ್ತಿರುವ ಕೆಎಲ್‌ ರಾಹುಲ್‌ ಮತ್ತು ರಿಷಭ್‌ ಪಂತ್‌ ಏಕದಿನ ತಂಡದಲ್ಲಿದ್ದಾರೆ. ಏಕದಿನ ಸರಣಿ ವೇಳೆ ಇವರಿಬ್ಬರಲ್ಲಿ ಯಾರನ್ನು ವಿಕೆಟ್‌ಕೀಪಿಂಗ್‌ ನಿರ್ವಹಣೆಗೆ ಆಯ್ಕೆ ಮಾಡಲು ಗಂಭೀರ್‌ ನೇತೃತ್ವದ ಭಾರತೀಯ ತಂಡ ಚಿಂತನೆ ನಡೆಸುತ್ತಿದೆ. ಪಂತ್‌ ಅವರಿಗೆ ಹೋಲಿಸಿದರೆ ಕೆಎಲ್‌ ರಾಹುಲ್‌ ವಿಕೆಟ್‌ ಹಿಂದುಗಡೆ ಮತ್ತು ಬ್ಯಾಟಿಂಗ್‌ನಲ್ಲೂ ಗಮನಾರ್ಹ ನಿರ್ವಹಣೆ ನೀಡಿದ್ದಾರೆ.

ಸ್ಥಳ: ಕೊಲಂಬೊ
ಆರಂಭ: ಮಧ್ಯಾಹ್ನ 2.30
 ಪ್ರಸಾರ: ಸೋನಿ ಸ್ಪೋರ್ಟ್ಸ್

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.