Kundagalla: ಲಾರಿ ಡಿಕ್ಕಿ ಹೊಡೆದು 33 ಕುರಿಗಳ ಸಾವು… ಕುರಿ ಮಾಂಸಕ್ಕಾಗಿ ಮುಗಿಬಿದ್ದ ಜನ
30 ಕ್ಕೂ ಹೆಚ್ಚು ಕುರಿಗಳಿಗೆ ಗಾಯ
Team Udayavani, Aug 2, 2024, 2:40 PM IST
ಕಂದಗಲ್ಲ: ಸೊಲ್ಲಾಪುರ – ಮಂಗಳೂರು ರಾಷ್ಟ್ರೀಯ ಹೆದ್ದಾರಿ 50 ರ ಕಿರಿಯಾಡ್ ಹೋಟೆಲ್ ಸಮೀಪದಲ್ಲಿ ಲಾರಿಯೊಂದು ಡಿಕ್ಕಿ ಹೊಡೆದು 33 ಕುರಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿದರೆ ಕುರಿಗಾಹಿಯ ಕಾಲಿಗೆ ಗಂಭೀರ ಗಾಯಗೊಂಡಿರುವ ಘಟನೆ ಶುಕ್ರವಾರದಂದು ಮುಂಜಾನೆ ಎರಡು ಗಂಟೆಯ ಸುಮಾರಿಗೆ ನಡೆದಿದೆ.
ಮುಂಜಾನೆ ಹೆದ್ದಾರಿಯಲ್ಲಿ ಕುರಿಗಳು ಸಾಗುತ್ತಿರುವುದು ಕಾಣದೇ ಈ ದುರಂತ ನಡೆದಿದೆ. ಸುಮಾರು 30 ಕ್ಕೂ ಹೆಚ್ಚು ಕುರಿಗಳು ಗಾಯಗೊಂಡಿವೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೊಡಕೇಲ್ ಗ್ರಾಮದ ಕುರಿಗಾಹಿ ರಾಯಪ್ಪ ಕಾಲು ಮುರಿದು ಕೊಂಡು ಬಾಗಲಕೋಟೆ ಸರಕಾರಿ ಆಸ್ಪತ್ರೆಗೆ ಸೇರಿದ್ದಾನೆ.
ಇಳಕಲ್ಲ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸ್ ಐ ಮಲ್ಲು ಸತ್ತಿಗೌಡರ ಅವರು ಲಾರಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಕುರಿ ಮಾಂಸಕ್ಕೆ ಜನರ ಗದ್ದಲ : ಅಪಘಾತದಲ್ಲಿ ಸಾವಿಗೀಡಾದ ಕುರಿಗಳ ಮಾಂಸಕ್ಕಾಗಿ ಹಲವಾರು ಜನರು ಸ್ಥಳದಲ್ಲಿ ಸೇರಿ ಅದನ್ನು ತೆಗೆದುಕೊಂಡು ಹೋಗುತ್ತಿದ್ದ ದೃಶ್ಯಗಳು ಅಲ್ಲಿ ಕಂಡು ಬಂದವು.
ಇದನ್ನೂ ಓದಿ: INDvsSL ಏಕದಿನ ಸರಣಿ ಆರಂಭ: ಅವಕಾಶ ಪಡೆದ ಕನ್ನಡಿಗ; ಟಾಸ್ ಗೆದ್ದ ಲಂಕಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.