Madamakki ಗ್ರಾಮದ ಹಂಜಾ- ಕಾರಿಮನೆ – ಎಡ್ಮಲೆ ಹದಗೆಟ್ಟ ರಸ್ತೆ: ತುರ್ತು ದುರಸ್ತಿ ಕಾರ್ಯ

ಪರಿಷತ್‌ ಸದಸ್ಯ ಡಾ| ಮಂಜುನಾಥ್‌ ಭಂಡಾರಿ ತ್ವರಿತ ಸ್ಪಂದನೆ

Team Udayavani, Aug 2, 2024, 2:58 PM IST

Screenshot (72)

ಕುಂದಾಪುರ: ಕೆಸರುಮಯಗೊಂಡು ವಾಹನಗಳು ಸಂಚರಿಸಲು ಸಾಧ್ಯವಿಲ್ಲದಷ್ಟು ಹದಗೆಟ್ಟಿದ್ದ ಮಡಾಮಕ್ಕಿ ಗ್ರಾಮದ ಹಂಜಾ – ಕಾರಿಮನೆ – ಎಡ್ಮಲೆ ಸಂಪರ್ಕಿಸುವ ಮಣ್ಣಿನ ರಸ್ತೆ ಸಹಿತ ಪಂಚಾಯತ್‌ ವ್ಯಾಪ್ತಿಯ ವಿವಿಧ ರಸ್ತೆಗಳ ಸಮಸ್ಯೆಗೆ ಜಿಲ್ಲಾಡಳಿತ ತ್ವರಿತಗತಿಯಲ್ಲಿ ಸ್ಪಂದಿಸಿದ್ದು, ಪ್ರಾಕೃತಿಕ ವಿಕೋಪದಡಿ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ.

ಈ ಮಡಾಮಕ್ಕಿಯ ಹಂಜಾ- ಕಾರಿಮನೆ- ಎಡ್ಮಲೆ ಸಂಪರ್ಕಿಸುವ ರಸ್ತೆಯ ದುರಸ್ತಿಗಾಗಿ ವಿಧಾನ ಪರಿಷತ್‌ ಸದಸ್ಯ ಡಾ| ಮಂಜುನಾಥ್‌ ಭಂಡಾರಿ ಅವರ ಗಮನಕ್ಕೆ ಕುಂದಾಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಹರಿಪ್ರಸಾದ್‌ ಶೆಟ್ಟಿ ಕಾನ್ಮಕ್ಕಿ ಹಾಗೂ ಮಡಾಮಕ್ಕಿ ಗ್ರಾ.ಪಂ. ಅಧ್ಯಕ್ಷ ಉದಯ ಶೆಟ್ಟಿ ಅವರು ಜು. 31ಕ್ಕೆ ಮನವಿ ಮಾಡಿಕೊಂಡಿದ್ದರು. ಮನವಿಗೆ ತ್ವರಿತಗತಿಯಲ್ಲಿ ಸ್ಪಂದಿಸಿದ ಪರಿಷತ್‌ ಸದಸ್ಯರು, ಕೂಡಲೇ ಜಿಲ್ಲಾಧಿಕಾರಿ ಡಾ| ವಿದ್ಯಾಕುಮಾರಿ ಹಾಗೂ ಜಿ.ಪಂ. ಸಿಇಒ ಪ್ರತೀಕ್‌ ಬಾಯಲ್‌ ಅವರಿಗೆ ಸೂಚಿಸಿದ್ದು, ಪ್ರಾಕೃತಿಕ ವಿಕೋಪದ ಅನುದಾನದಡಿ ದುರಸ್ತಿ ಕೈಗೊಳ್ಳಲು ಸೂಚಿಸಿದರು.

ಮಡಾಮಕ್ಕಿ ಗ್ರಾಮದ ಹಂಜಾ ರಸ್ತೆ -2.5 ಕಿ.ಮೀ., ಮೇಲ್ಛಾವಡಿ ರಸ್ತೆ 500 ಮೀ., ಬೆಪ್ಡೆ ಗರಡಿ ಮನೆ ರಸ್ತೆ 500 ಮೀ., ಶೇಡಿಮನೆ ಗ್ರಾಮದ ಚಕ್ಕಾರ್‌ಮಕ್ಕಿ ಮುಖ್ಯ ರಸ್ತೆ 700 ಮೀ., ಸಂಸೆ ಬೂರದಜೆಡ್ಡು ರಸ್ತೆ 500 ಮೀ., ಗೋಳಿಗದ್ದೆ ರಸ್ತೆ 500 ಮೀ.ವರೆಗೆ ಮಳೆಯಿಂದಾಗಿ ಹಾಳಾಗಿದ್ದು, ನೂರಾರು ಕುಟುಂಬಗಳಿಗೆ
ತೊಂದರೆಯಾಗುತ್ತಿರುವ ಬಗ್ಗೆ ಮನವಿ ಸಲ್ಲಿಸಲಾಗಿತ್ತು. ಅದರಂತೆ ಮಾರ್ಗದರ್ಶನದಲ್ಲಿ ರಸ್ತೆಗೆ ಜಲ್ಲಿಕಲ್ಲುಗಳನ್ನು ಹಾಕಿ, ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡುವ ಕಾರ್ಯವನ್ನು ಮಾಡಲಾಗಿದೆ.

ಸುದಿನ ವರದಿ
ಹಂಜಾ- ಕಾರಿಮನೆ- ಎಡ್ಮಲೆ ಸಂಪರ್ಕಿಸುವ ಈ ರಸ್ತೆ ಅವ್ಯವಸ್ಥೆ ಕುರಿತು, ಜನ ಸಂಕಷ್ಟಪಡುತ್ತಿರುವ ಬಗ್ಗೆ “ಉದಯವಾಣಿ ಸುದಿನ’ವು ಕಳೆದ ಜೂ. 16 ರಂದು ವಿಶೇಷ ವರದಿ ಪ್ರಕಟಿಸಿತ್ತು. ಇದಲ್ಲದೆ ಬಸ್ಸಿನ ಅಭಿಯಾನದಲ್ಲೂ ಇಲ್ಲಿನ ಮಕ್ಕಳು ಹದಗೆಟ್ಟ ರಸ್ತೆಯಿಂದ ಪಡುತ್ತಿರುವ ಸಂಕಷ್ಟದ ಕುರಿತು ಗಮನಸೆಳೆಯಲಾಗಿತ್ತು.

ಕಾಮಗಾರಿಗೆ ಸೂಚನೆ
ಮಡಾಮಕ್ಕಿ ಗ್ರಾ.ಪಂ.ನ ಹಂಜ ರಸ್ತೆ ತುರ್ತು ದುರಸ್ತಿಗೆ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿಯವರಿಗೆ ಮನವಿ ಸಲ್ಲಿಸಿದ್ದು, ಅವರು ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ. ಸಿಇಒ ಅವರಲ್ಲಿ ಮಾತನಾಡಿ, ತುರ್ತು ಕಾಮಗಾರಿಗೆ ಸೂಚಿಸಿದ್ದಾರೆ. ಅದರಂತೆ ಕಾಮಗಾರಿ ಆರಂಭಿಸಲಾಗಿದೆ.

– ಕಾನ್ಮಕ್ಕಿ ಹರಿಪ್ರಸಾದ್‌ ಶೆಟ್ಟಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕುಂದಾಪುರ

ಟಾಪ್ ನ್ಯೂಸ್

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Nirashritha

Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.