BBMPಗೆ 600 ಕೋಟಿ ಹೆಚ್ಚುವರಿ ತೆರಿಗೆ

ಜುಲೈ ಅಂತ್ಯಕೆ 3065 ಕೋಟಿ ರೂ. ತೆರಿಗೆ ಸಂಗ್ರಹ | ಕಳೆದ ವರ್ಷ 2457 ಕೋಟಿ ರೂ. ಸಂಗ್ರಹ | ಒಟಿಎಸ್‌ ವಿಸರಣೆಗೆ ಸರ್ಕಾರಕ್ಕೆ ಮನವಿ

Team Udayavani, Aug 2, 2024, 4:18 PM IST

9-bbmp

ಬೆಂಗಳೂರು: ಬಿಬಿಎಂಪಿಗೆ ಕಳೆದ ವರ್ಷದ ಜುಲೈ ತಿಂಗಳಿಗೆ ಹೋಲಿಸಿದರೆ ಆಸ್ತಿ ತೆರಿಗೆ ಈ ವರ್ಷ 600 ಕೋಟಿ ರೂ. ಹೆಚ್ಚುವರಿ ಸಂಗ್ರಹವಾಗಿದೆ. ಸುದ್ದಿಗಾರರ ಜತೆ ಮಾತನಾಡಿದ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌, ಕಳೆದ ವರ್ಷದ 31 ಜುಲೈಗೆ 2,457.30 ಕೋಟಿ ರೂ. ತೆರಿಗೆ ಸಂಗ್ರಹವಾಗಿತ್ತು.

ಈ ವರ್ಷ 3065.82 ಕೋಟಿ ರೂ. ಆಗಿದೆ. ಕಳೆದ ವರ್ಷಕ್ಕೆ ಹೋಲಿಸಿದ್ರೆ 600 ಕೋಟಿ ರೂ. ಹೆಚ್ಚಳವಾಗಿದೆ. ಹಲವು ವರ್ಷಗಳಿಂದ ತೆರಿಗೆ ಬಾಕಿ ಉಳಿಸಿಕೊಂಡಿದ್ದ ಆಸ್ತಿ ಮಾಲೀಕರಿಂದ 184 ಕೋಟಿ ರೂ. ಸಂಗ್ರಹವಾಗಿದೆ ಎಂದು ವಿವರಿಸಿದ್ದಾರೆ.

ಬಾಕಿದಾರರ ಸಂಖ್ಯೆ 2.80 ಲಕ್ಷಕ್ಕೆ ಇಳಿಕೆ: ಈ ಹಿಂದೆ 3.95 ಲಕ್ಷ ಬಾಕಿದಾರರು ಬಿಬಿಎಂಪಿ ವ್ಯಾಪ್ತಿಯಲ್ಲಿದ್ದರು. ಇದರಲ್ಲೀಗ 1.14 ಲಕ್ಷ ಬಾಕಿದಾರರಿಂದ 184 ಕೋಟಿ ರೂ. ಆದಾಯ ಸಂಗ್ರಹ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬಾಕಿದಾರರ ಸಂಖ್ಯೆ ಈಗ 2.80 ಲಕ್ಷಕ್ಕೆ ಇಳಿಕೆಯಾಗಿದೆ ಎಂದು ತಿಳಿಸಿದರು.

ದಂಡ ವಸೂಲಿ ಹಲವು ಸ್ತರಗಳಲ್ಲಿ ಇದೆ: ಸರ್ಕಾರ ಬಿಬಿಎಂಪಿ ಆಸ್ತಿ ತೆರಿಗೆ ಪಾವತಿ ಸಂಬಂಧ ನೀಡಲಾಗಿದ್ದ “ಒಂದು ಬಾರಿ ಪರಿಹಾರ ಯೋಜನೆ'(ಒಟಿಎಸ್‌) ಅವಧಿ ಈಗಾಗಲೇ ಮುಗಿದಿದೆ. ಇನ್ನು ಮುಂದೆ ಯಾವುದೇ ರೀತಿ ಬಡ್ಡಿ ಮನ್ನಾವಾಗಲಿ ಜತೆಗೆ ರಿಯಾಯ್ತಿಯಾಗಲಿ ಇರುವುದಿಲ್ಲ. ದಂಡ ಹಾಕಿ ಆಸ್ತಿ ತೆರಿಗೆ ಸಂಗ್ರಹ ಮಾಡುವ ಕೆಲಸವನ್ನು ಪಾಲಿಕೆ ಕಂದಾಯ ಅಧಿಕಾರಿಗಳು ಮಾಡಲಿದ್ದಾರೆ. ದಂಡ ವಸೂಲಿ ಹಲವು ಸ್ತರಗಳಲ್ಲಿ ಇರಲಿದೆ. ಒಂದು ವರ್ಷಕ್ಕೆ ಶೇ.15 ದಂಡ ಹಾಕಬೇಕು ಎಂಬುವುದು ಬೈಲಾದಲ್ಲಿದೆ. ಅದಕ್ಕಿಂತಲೂ ಹೆಚ್ಚಿನ ವರ್ಷಗಳಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಬೇರೆ ಬೇರೆ ರೀತಿಯಲ್ಲಿ ದಂಡ ಹಾಕುವುದು ನಿಯದಲ್ಲಿದೆ ಎಂದು ಮಾಹಿತಿ ನೀಡಿದರು.

ಜಪ್ತಿ ಕೂಡ ಮಾಡಬಹುದು: ಆಸ್ತಿ ತೆರಿಗೆ ವಿಚಾರದಲ್ಲಿ ಬೈಲಾಕ್ಕೆ ಹಲವು ನಿಯಮಗಳನ್ನು ಅಳವಡಿಕೆ ಮಾಡಲಾಗಿದೆ. ಕಾನೂನು ಮತ್ತು ನಿಯಮದಲ್ಲಿ ಹಲವು ಬದಲಾವಣೆ ತರಲಾಗಿದೆ. ಈ ಹಿಂದಿನ ಕಾನೂನಿಗಿಂತಲೂ ಕಠಿಣವಾಗಿದೆ. ಪಾಲಿಕೆ ಆಸ್ತಿ ತೆರಿಗೆ ವಸೂಲಿ ಸಂಬಂಧ ಮಾಲೀಕರಿಗೆ ನೋಟಿಸ್‌ ನೀಡಿದರೂ ತೆರಿಗೆ ಕಟ್ಟಿಲ್ಲ ಎಂದಾದರೆ ಬೇರೆ ವಿಧಾನಗಳಲ್ಲೂ ತೆರಿಗೆ ವಸೂಲಿ ಮಾಡಬಹುದಾಗಿದೆ. ಕರದಾತರ ಸ್ಥಿರಾಸ್ತಿಗಳನ್ನು ಜಪ್ತಿ ಮಾಡಬಹುದಾಗಿದೆ. ಈ ಹಿಂದೆ ಆಸ್ತಿ ಹರಾಜಿಗೆ ಕಾನೂನಿನಲ್ಲಿ ಅವಕಾಶ ಇರಲಿಲ್ಲ. ಆದರೆ, ಹೊಸ ಕಾಯ್ದೆಯಲ್ಲಿ ಇದಕ್ಕೆ ಅವಕಾಶ ನೀಡಲಾಗಿದೆ. ಹೊಸ ನಿಯಮಾವಳಿಗಳು ಆಸ್ತಿ ತೆರಿಗೆ ಸಂಗ್ರಹಕ್ಕೆ ಪೂರಕವಾಗಿದೆ ಎಂದು ವಿವರಿಸಿದರು.

ಸರ್ಕಾರ ನಿರ್ಧಾರ ಕೈಕೊಳ್ಳಬೇಕು: ಈಗಾಗಲೇ ಆಸ್ತಿ ತೆರಿಗೆ ಪಾವತಿ ಯೋಜನೆ ಅವಧಿಯನ್ನು ವಿಸ್ತಾರ ಮಾಡುವಂತೆ ಹಲವು ಸಂಘ ಸಂಸ್ಥೆಗಳು ಮನವಿ ಮಾಡಿವೆ. ಆ.15ರವರೆಗೂ ವಿಸ್ತರಣೆ ಮಾಡುವಂತೆ ಹೋಟೆಲ್‌ ಮಾಲೀಕರ ಸಂಘ, ಎಫ್ಕೆಸಿಸಿಐ ಸೇರಿದಂತೆ ಹಲವು ಸಂಘ ಸಂಸ್ಥೆಗಳು ಕೋರಿವೆ. ಜು.31ರಂದು ಆಸ್ತಿ ತೆರಿಗೆಗೆ ಕೊನೆಯ ದಿನವಾಗಿತ್ತು. ಅಂತಿಮ ದಿನದಂದು ಮಳೆ, ಸಾಫ್ಟ್ವೇರ್‌ ಕೂಡ ಕೈ ಕೊಟ್ಟಿತ್ತು. ಈ ಹಿನ್ನೆಲೆಯಲ್ಲಿ ಪಾಲಿಕೆ ಕಂದಾಯ ಅಧಿಕಾರಿಗಳ ವರದಿ ಸರ್ಕಾರಕ್ಕೆ ಸಲ್ಲಿಸಲಾಗುವುದು. ಆಸ್ತಿ ತೆರಿಗೆ ಪಾವತಿ ಯೋಜನೆ ವಿಸ್ತರಣೆ ಮಾಡಬೇಕೇ? ಬೇಡವೇ? ಎಂಬುದನ್ನು ಸರ್ಕಾರ ನಿರ್ಧರಿಸಲಿದೆ ಎಂದು ಪಾಲಿಕೆ ಆಯುಕ್ತ ತುಷಾರ್‌ ಗಿರಿನಾಥ್‌ ಹೇಳಿದರು.

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.