Shivamogga: ಭಾರೀ ಮಳೆಗೆ ಸಾಗರ ಕ್ಷೇತ್ರದಲ್ಲಿ 90 ಕೋಟಿ ರೂ. ಅಧಿಕ ನಷ್ಟ: ಶಾಸಕ ಬೇಳೂರು
ಪ್ರತಿ ಗ್ರಾಪಂ ವ್ಯಾಪ್ತಿಯಲ್ಲಿ ಮಳೆಯಿಂದ ಸಂಭವಿಸಿದ ಅನಾಹುತಗಳ ಪಟ್ಟಿ ಮಾಡಿ ತಕ್ಷಣ ವರದಿ ಸಲ್ಲಿಸಿ; ಅಧಿಕಾರಿಗಳಿಗೆ ಸೂಚನೆ
Team Udayavani, Aug 2, 2024, 7:55 PM IST
ಆನಂದಪುರ (ಸಾಗರ) : ಭಾರಿ ಮಳೆಯಿಂದಾಗಿ ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 90 ಕೋಟಿ ರೂಪಾಯಿಗೂ ಅಧಿಕ ಹಾನಿ ಸಂಭವಿಸಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಪುಷ್ಯಾ ಮಳೆಯ ಅಬ್ಬರಕ್ಕೆ ನಲುಗಿರುವರಿಗೆ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಅನೇಕ ಅನಾಹುತಗಳು ಸಂಭವಿಸಿದ್ದು, ಮನೆಗಳು ಕುಸಿದು ಬಿದ್ದಿವೆ, ರಸ್ತೆಗಳು, ಹೊಲಗದ್ದೆಗಳು ತೋಟಗಳು ಮಳೆಯಿಂದಾಗಿ ಕೊಚ್ಚಿ ಹೋಗಿದ್ದು ಶಾಲೆ, ಅಂಗನವಾಡಿ ಸೇರಿದಂತೆ ಕೆರೆಯ ನಾಲೆಗಳು, ಕಿರು ಸೇತುವೆಗಳಿಗೆ ಹಾನಿ ಸಂಭವಿಸಿದೆ. ಆನಂದಪುರ, ಅಡೂರು, ಯಡೇಹಳ್ಳಿ, ಹೊಸಕೊಪ್ಪ ,ಕಣ್ಣೂರು, ಆಚಾಪುರ, ಕೈರಾ ಸೇರಿ ಅನೇಕ ಭಾಗದಲ್ಲಿ ಮಳೆಯಿಂದ ಹಾನಿ ಸಂಭವಿಸಿದ ಸ್ಥಳಗಳಿಗೆ ಭೇಟಿ ನೀಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ ಈ ಬಾರಿ ಸುರಿದ ಮಳೆ ಹಾಗೂ ಬೀಸಿದ ಗಾಳಿಯಿಂದ ಸುಮಾರು 90 ಕೋಟಿಗೂ ಅಧಿಕ ನಷ್ಟ ಸಂಭವಿಸಿರಬಹುದು ಎಂದು ತಿಳಿಸಿದರು. ದಾಖಲೆ ಇರುವಂತಹ ಮನೆಗಳು ಕುಸಿದರೆ 1ಲಕ್ಷದ 20 ಸಾವಿರ ರೂ. ಹಣ ನೀಡಲಾಗುವುದು. ಹಕ್ಕುಪತ್ರ ಇಲ್ಲದಿರುವಂತಹ ಮನೆಗಳಿಗೆ ಅನಾಹುತ ಉಂಟಾದರೆ ಅಂತಹ ಮನೆಗಳಿಗೆ 1 ಲಕ್ಷ ರೂ ಪರಿಹಾರ ನೀಡುವ ಬಗ್ಗೆ ಸರ್ಕಾರ ಆದೇಶ ನೀಡಿದೆ ಎಂದು ತಿಳಿಸಿದರು.
ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಮಳೆ ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿ ನೊಂದ ಕುಟುಂಬಗಳಿಗೆ ಸಾಂತ್ವನ ತಿಳಿಸಿ ವೈಯಕ್ತಿಕ ಧನ ಸಹಾಯ ನೀಡಿದರು. ಪ್ರತಿಯೊಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮಳೆಯಿಂದ ಸಂಭವಿಸಿರುವಂತಹ ಅನಾಹುತಗಳ ಪಟ್ಟಿಮಾಡಿ ತಕ್ಷಣವೇ ವರದಿ ಸಲ್ಲಿಸಲು ಸೂಚಿಸಿದರು. ನಾನು ಯಾವಾಗಲೂ ಕ್ಷೇತ್ರದ ಜನತೆಯೊಂದಿಗೆ ಇದ್ದೇನೆ ಯಾವುದೇ ಸಂದರ್ಭದಲ್ಲೂ ನನ್ನ ಕ್ಷೇತ್ರದ ಜನತೆಗೆ ಸಂಕಷ್ಟವಾದರೆ ತಕ್ಷಣವೇ ಸ್ಪಂದಿಸುತ್ತೇನೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಅನಿತಾ ಕುಮಾರಿ, ಸೋಮಶೇಖರ್ ಲಗ್ಗೆರೆ, ಚಂದ್ರಪ್ಪ, ರಮಾನಂದ್ ಸಾಗರ್, ಚೇತನ್ ರಾಜ್ ಕಣ್ಣೂರ್, ಮಂಜುನಾಥ್ ದಾಸನ್, ಶರತ್ ನಾಗಪ್ಪ, ಕಲೀಮುಲ್ಲಾ ಖಾನ್, ರೆಹಮತುಲ್ಲಾ, ಗಜೇಂದ್ರ ಯಾದವ್, ಹಾಗೂ ಪಕ್ಷದ ಅನೇಕ ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !
Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ
Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.