Mudhol ಸೇತುವೆ ನೀರು ಇಳಿಮುಖವಾದರೂ ಭಾರೀ ವಾಹನ ಸಂಚಾರಕ್ಕೆ ಅವಕಾಶವಿಲ್ಲ
ಸುರಕ್ಷತೆ ದೃಷ್ಟಿಯಿಂದ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿಲ್ಲ
Team Udayavani, Aug 2, 2024, 8:21 PM IST
ಮುಧೋಳ: ಘಟಪ್ರಭಾ ಪ್ರವಾಹ ನೀರು ಇಳಿಮುಖವಾಗಿ ಸಮೀಪದ ಚಿಂಚಖಂಡಿ ಸೇತುವೆ ಮೇಲೆ ಭಾರೀ ವಾಹನ ಸಂಚಾರಕ್ಕೆ ಮಾತ್ರ ಇನ್ನೂ ಅವಕಾಶ ದೊರೆತಿಲ್ಲ.
ಸೇತುವೆ ಮೇಲೆ ಸಂಪೂರ್ಣ ನೀರು ಹಿಂದೆ ಸರಿದಿದ್ದರೂ ಸುರಕ್ಷತೆ ದೃಷ್ಟಿಯಿಂದ ಭಾರೀ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿಲ್ಲ. ಗುರುವಾರ ಬೆಳಗ್ಗೆಯಿಂದ ಕಾರು, ಬೈಕ್ ಗಳ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವ ಅಧಿಕಾರಿಗಳು ಭಾರೀ ವಾಹನ ಸಂಚಾರಕ್ಕೆ ಮಾತ್ರ ಅನುಮತಿ ನೀಡಿಲ್ಲ. ಸೇತುವೆ ಕೆಳಗಡೆ ಹೆಚ್ಚಿನಮಟ್ಟದಲ್ಲಿ ನೀರು ಸರಿದು ಸೇತುವೆ ಸ್ಥಿತಿಗತಿ ಅರಿತಮೇಲೆ ಭಾರೀ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ವಜ್ಜರಮಟ್ಟಿ ಸಂಚಾರಕ್ಕೆ ಸೇತುವೆ ಮುಕ್ತ : ಪ್ರವಾಹಕ್ಕೆ ತುತ್ತಾಗಿ ಸಂಪರ್ಕ ಕಡಿದುಕೊಂಡಿದ್ದ ಮುಧೋಳ ಕಾತರಕಿ ರಸ್ತೆ ಸಂಚಾರದ ಮೇಲೆ ನೀರು ಹೆಚ್ಚಿನ ಪ್ರಮಾಣದಲ್ಲಿ ಶೇಖರಣೆಗೊಂಡು ಸಂಚಾರ ಸ್ಥಗಿತಗೊಂಡಿತ್ತು. ಪ್ರವಾಹ ತಗ್ಗಿದ ಬಳಿಕ ವಜ್ಜರಮಟ್ಟಿ ಭಾರೀವಾಹನ ಸಂಚಾರಕ್ಕೆ ಮುಕ್ತವಾಗಿದೆ. ಇದರಿಂದ ಮಂಟೂರ, ಕಿಶೋರಿ, ಹಲಗಲಿ ಮಾರ್ಗ ಬಳಕೆ ಮಾಡುವವರು ಇದೀಗ ವಜ್ಜರಮಟ್ಟಿ ಮಾರ್ಗದಲ್ಲಿಯೇ ಸಂಚರಿಸಬಹುದಾಗಿದೆ.
ಚಿಂಚಖಂಡಿ ಸೇತುವೆ ಮೇಲೆ ನೀರು ಸಂಪೂರ್ಣ ಇಳಿಮುಖವಾಗಿದೆ. ಇದೀಗ ಲಘು ವಾಹನ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಇನ್ನಷ್ಟು ನೀರು ಇಳಿಮುಖವಾದ ಮೇಲೆ ಸೇತುವೆ ಸ್ಥಿತಿಗತಿ ಪರಿಶೀಲಿಸಿ ಭಾರೀ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುವುದು.
-ಚನ್ನಬಸವ ಮಾಚನೂರ ಲೋಕೋಪಯೋಗಿ ಇಲಾಖೆ ಎಇಇ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು
ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ… ರಾತ್ರಿಯಿಡಿ ಸಾಗುವ ರಥೋತ್ಸವ
Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ
Mudhol: ಆರ್ಎಸ್ಎಸ್ನಿಂದ ದೇಶಕ್ಕೆ ಕಂಟಕ: ಆರ್.ಬಿ.ತಿಮ್ಮಾಪುರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.