Karnataka ಶರಾವತಿ ಪಂಪ್ಡ್ ಸ್ಟೋರೇಜ್‌ ವಿದ್ಯುತ್‌ ಯೋಜನೆಗೆ ಅಸ್ತು

ದೇಶದ ಅತಿದೊಡ್ಡ ಸ್ಥಾವರಕ್ಕೆ ಕೇಂದ್ರ ಸಮ್ಮತಿ

Team Udayavani, Aug 3, 2024, 6:55 AM IST

Karnataka ಶರಾವತಿ ಪಂಪ್ಡ್ ಸ್ಟೋರೇಜ್‌ ವಿದ್ಯುತ್‌ ಯೋಜನೆಗೆ ಅಸ್ತು

ಹೊಸದಿಲ್ಲಿ/ಶಿವಮೊಗ್ಗ: ಕರ್ನಾಟಕದ ಶರಾವತಿಯಲ್ಲಿ ಕೈಗೊಳ್ಳಲಾಗುತ್ತಿರುವ 2 ಸಾವಿರ ಮೆಗಾ ವ್ಯಾಟ್‌ ಸಾಮರ್ಥ್ಯದ ಪಂಪ್ಡ್ ಸ್ಟೋರೇಜ್‌ ವಿದ್ಯುತ್‌ ಉತ್ಪಾದನೆ ಘಟಕ ನಿರ್ಮಾಣ ಯೋಜನೆಯ ವಿಸ್ತೃತ ವರದಿಗೆ (ಡಿಪಿಆರ್‌) ಕೇಂದ್ರೀಯ ವಿದ್ಯುತ್‌ ಪ್ರಾಧಿಕಾರ (ಸಿಇಎ) ದಾಖಲೆಯ ಅವಧಿಯಲ್ಲಿ ಒಪ್ಪಿಗೆ ನೀಡಿದೆ ಎಂದು ಕೇಂದ್ರ ಇಂಧನ ಸಚಿವಾಲಯ ತಿಳಿಸಿದೆ.

ಶರಾವತಿ ನದಿಯಲ್ಲಿ ಕರ್ನಾಟಕ ವಿದ್ಯುತ್‌ ನಿಗಮವು ವಿದ್ಯುತ್‌ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಲಿಂಗನಮಕ್ಕಿ ಜಲಾಶಯದ ಕೆಳಭಾಗದಲ್ಲಿರುವ ಶಿವಮೊಗ್ಗದ ಲಿಂಗನಮಕ್ಕಿಯ ತಲಕಳಲೆ ಮತ್ತು ಉತ್ತರ ಕನ್ನಡ ಜಿಲ್ಲೆಯ ಗೇರುಸೊಪ್ಪ ಜಲಾಶಯಗಳ ಮಧ್ಯ ಭಾಗದಲ್ಲಿ ಶರಾವತಿ ಸ್ಟೋರೇಜ್‌ ಪಂಪ್ಡ್ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ.

ದೇಶದಲ್ಲಿ ವಿದ್ಯುತ್‌ ಭದ್ರತೆಯನ್ನು ಹೆಚ್ಚಿಸುವುದಕ್ಕಾಗಿ ಇಂಧನ ಸಂಗ್ರಹ ವ್ಯವಸ್ಥೆಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುತ್ತಿದೆ ಎಂದು ಕೇಂದ್ರ ಸರಕಾರವು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಶರವಾತಿಯ ಪಂಪ್ಡ್ ಸ್ಟೋರೇಜ್‌ ವಿದ್ಯುತ್‌ ಉತ್ಪಾದನೆ ಘಟಕವು ದೇಶದ ಅತಿದೊಡ್ಡ ಪಂಪ್ಡ್ ಸ್ಟೋರೇಜ್‌ ಘಟಕ ಎನಿಸಿಕೊಳ್ಳಲಿದೆ.

ಈ ಹಿಂದಿನ ಸಿದ್ದರಾಮಯ್ಯ ಸರಕಾರದಲ್ಲಿ 4 ಸಾವಿರ ಕೋಟಿ ರೂ.ಗೂ ಅಧಿಕ ವೆಚ್ಚದ ಶರಾವತಿ ಪಂಪ್ಡ್ ಸ್ಟೋರೇಜ್‌ ಯೋಜನೆಯ ಪ್ರಸ್ತಾಪವನ್ನು ಸಿದ್ಧಪಡಿಸಲಾಗಿತ್ತು. ಆದರೆ ಅನಂತರ ಈ ಯೋಜನೆ ಹೆಚ್ಚು ಸದ್ದು ಮಾಡಿರಲಿಲ್ಲ. ಮತ್ತೆ 2ನೇ ಬಾರಿಗೆ ಸಿದ್ದರಾಮಯ್ಯ ನೇತೃತ್ವದ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಯೋಜನೆಗೆ ಮರುಜೀವ ಬಂದಿದೆ. ತಲಾ 250 ಮೆಗಾವ್ಯಾಟ್‌ನ 8 ವಿದ್ಯುತ್‌ ಉತ್ಪಾದನ ಘಟಕ ಇಲ್ಲಿ ಆರಂಭವಾಗಲಿದೆ.

ಟಾಪ್ ನ್ಯೂಸ್

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mehabooba

Bangla ಹಿಂದೂಗಳು ಸಾಯುವಾಗ ಮುಫ್ತಿ ಮೌನವಾಗಿದ್ದರು: ಬಿಜೆಪಿ

1-stalin

Tamil Nadu; ಉದಯನಿಧಿ ಈಗ ಅಧಿಕೃತವಾಗಿ ತಮಿಳುನಾಡು ಉಪಮುಖ್ಯಮಂತ್ರಿ

Bhagavant mann

Punjab CM ಮಾನ್‌ ಆಸ್ಪತ್ರೆಯಿಂದ ಡಿಸ್ಟಾರ್ಜ್‌: ಸುಧಾರಿಸಿದ ಆರೋಗ್ಯ

suicide (2)

Heart attack: ಕಚೇರಿಯಲ್ಲೇ 40 ವರ್ಷದ ಟೆಕ್ಕಿ ಸಾವು

police crime

Speed ತಗ್ಗಿಸಲು ಹೇಳಿದ್ದಕ್ಕೆ ಕಾರು ಹತ್ತಿಸಿ ಪೊಲೀಸ್‌ ಪೇದೆ ಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.