Anebail: ಮನೆ ಮೇಲೆ ಕುಸಿದ ಗುಡ್ಡ, ಇಬ್ಬರು ಮಕ್ಕಳ ಸಹಿತ ಮನೆಮಂದಿ ಅಪಾಯದಿಂದ ಪಾರು

ಮಣ್ಣಿನಡಿಗೆ ಸಿಲುಕಿದ ವಾಹನ, ಸಾಕು ನಾಯಿ

Team Udayavani, Aug 3, 2024, 11:31 AM IST

Screenshot (82)

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಆನೆಬೈಲು ಸಮೀಪದ ಉಡ್ಲದಕೋಡಿ ಎಂಬಲ್ಲಿ ಗುಡ್ಡವೊಂದು ಕುಸಿದು ವಿಶ್ವನಾಥ ನಾಯ್ಕ ಅವರ ಮನೆ ಮೇಲೆ ಅಪ್ಪಳಿಸಿದ್ದು, ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಒಂದು ಓಮ್ನಿ ಕಾರು ಹಾಗೂ ಒಂದು ದ್ವಿಚಕ್ರ ವಾಹನ ಹಾಗೂ ಕಟ್ಟಿ ಹಾಕಿದ ಸಾಕು ನಾಯಿಯೊಂದು ಮಣ್ಣಿನಡಿ ಸಿಲುಕಿದೆ. ಗುಡ್ಡದ ಮಣ್ಣು ತೋಡಿಗೂ ಬಿದ್ದಿದ್ದು, ಇದರಿಂದ ಕೃಷಿ ತೋಟದಲ್ಲಿ ತೋಡಿನ ನೀರು ನದಿಯಂತೆ ಹರಿಯುತ್ತಿದೆ.

ಘಟನೆ ಸಂದರ್ಭ ಮನೆಯಲ್ಲಿ ವಿಶ್ವನಾಥ ನಾಯ್ಕ, ಅವರ ತಾಯಿ ಲಲಿತಾ, ಪತ್ನಿ ವಾರಿಜಾ ಹಾಗೂ ಅಂಗನವಾಡಿ ಹಾಗೂ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಅವರ ಇಬ್ಬರು ಮಕ್ಕಳು ಗಾಢ ನಿದ್ದೆಯಲ್ಲಿದ್ದರು. ಭಾರೀ ಶಬ್ದ ಕೇಳಿ ಎಚ್ಚರಗೊಂಡು ನೋಡಿದಾಗ ಮನೆಯ ಹಿಂಬದಿಯ ಗುಡ್ಡ ಕುಸಿದು ಇವರ ಮನೆಗೆ ತಾಗಿ ನಿಂತಿತ್ತು. ಇದರಿಂದ ಮನೆಯ ಒಂದು ಬದಿಯಲ್ಲಿ ಶೀಟ್‌ ಹಾಕಿ ಕಟ್ಟಲಾಗಿದ್ದ ಕೋಣೆ ನಾಶವಾಗಿದ್ದು, ಮನೆಯ ಗೋಡೆಗಳೂ ಬಿರುಕು ಬಿಟ್ಟಿವೆ. ಇದೇ ಬದಿಯಲ್ಲಿ ನಿಲ್ಲಿಸಲಾಗಿದ್ದ ಓಮ್ನಿ ಕಾರು ಹಾಗೂ ದ್ವಿಚಕ್ರ ವಾಹನಗಳುಮಣ್ಣಿನಡಿ ಸಿಲುಕಿತ್ತು. ಬಿದ್ದು ಮಣ್ಣು ಮುಂದುವರಿದು ಮನೆಯ ಕೆಳಗೆ ಹರಿಯುತ್ತಿದ್ದ ತೋಡು ಸೇರಿದ್ದರಿಂದ ಅದು ತನ್ನ ನೀರಿನ ಹರಿವಿನ ದಿಕ್ಕು ಬದಲಿಸಿದೆ. ಇದರಿಂದಾಗಿ ತೋಟದೆಲ್ಲೆಡೆ ನೀರು ಹರಿಯುತ್ತಿದೆ. ಮನೆಗೆ ಹೋಗುವ ದಾರಿಯೂ ನೀರಿನಿಂದಾವೃತವಾಗಿದೆ. ವಿದ್ಯುತ್‌ ಕಂಬಗಳು ಮಗುಚಿ ಬಿದ್ದಿವೆ.

ರಕ್ಷಣ ಕಾರ್ಯ

ಸುದ್ದಿ ತಿಳಿದು 34 ನೆಕ್ಕಿಲಾಡಿ ಗ್ರಾ.ಪಂ. ಸದಸ್ಯರಾದ ಪ್ರಶಾಂತ್‌ ಎನ್‌. ಹಾಗೂ ಹರೀಶ್‌ ಕುಲಾಲ್‌, ಸದಾನಂದ ಕಾರ್‌ ಕ್ಲಬ್‌ ರಕ್ಷಣ ಕಾರ್ಯಾಚರಣಗೆ ತೆರಳಿದ್ದುಸ್ಥಳೀಯರಾದ ಗುರುರಾಜ ಭಟ್‌,
ಧನಂಜಯ ಸೇರಿದಂತೆ ಸ್ಥಳೀಯರು ಸೇರಿದರು. ಲಲಿತಾ ಅವರನ್ನು ಎತ್ತಿಕೊಂಡು ಬಂದು ಸುರಕ್ಷಿತ ಜಾಗಕ್ಕೆ ಕಳುಹಿಸಿಕೊಡಲಾಯಿತು. ಗೃಹರಕ್ಷಕ ದಳದವರನ್ನೊಳಗೊಂಡ ಪ್ರವಾಹ ರಕ್ಷಣಾ ತಂಡದವರು ದೋಣಿಯೊಂದಿಗೆ ಸ್ಥಳಕ್ಕೆ ತೆರಳಿ, ಮನೆಯ ಸಾಮಗ್ರಿ, ಸರಂಜಾಮುಗಳನ್ನು ಹಾಗೂ ಮನೆಯಲ್ಲಿದ್ದ ಅಡಿಕೆ ಸೇರಿದಂತೆ ಇನ್ನಿತರ ವಸ್ತುಗಳನ್ನು ಸುರಕ್ಷಿತ ಜಾಗಕ್ಕೆ ತಲುಪಿಸಿದರು.

ಹಿಟಾಚಿಯಲ್ಲಿ ಮಣ್ಣು ತೆಗೆಯುವ ಕಾರ್ಯ ನಡೆಯುತ್ತಿದ್ದು, ತೋಡನ್ನು ಬಿಡಿಸಿ ಕೊಡುವ ಕೆಲಸ ನಡೆಯಿತು.

ಘಟನೆಯಲ್ಲಿ ಸಾಕು ನಾಯಿಯೊಂದು ಮಣ್ಣಿನ ಅಡಿಯೊಳಗೆ ಸೇರಿ ಹೋಗಿದ್ದು, ಈವರೆಗೆ ಅದರ ಪತ್ತೆಯಾಗಿಲ್ಲ.

ಉಪ್ಪಿನಂಗಡಿ ಕಂದಾಯ ಹೋಬಳಿ ಉಪತಹಶೀಲ್ದಾರ್‌ ಚೆನ್ನಪ್ಪ ಗೌಡ, ಗ್ರಾಮ ಕರಣಿಕ ಜಂಗಪ್ಪ, ಗ್ರಾಮ ಸಹಾಯಕ ದಿವಾಕರ, ನೆಕ್ಕಿಲಾಡಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಸತೀಶ ಕೆ. ಬಂಗೇರ, ಅಧ್ಯಕ್ಷೆ ಸುಜಾತಾ ಆರ್‌. ರೈ, ಉಪಾಧ್ಯಕ್ಷ ಹರೀಶ್‌ ಡಿ., 34 ನೆಕ್ಕಿಲಾಡಿ ವಲಯ ಕಾಂಗ್ರೆಸ್‌ ಅಧ್ಯಕ್ಷೆ ಅನಿ ಮಿನೇಜಸ್‌, ಪ್ರಮುಖರಾದ ಯು.ಜಿ ರಾಧ ಭೇಟಿ ನೀಡಿದರು.

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.