Anebail: ಮನೆ ಮೇಲೆ ಕುಸಿದ ಗುಡ್ಡ, ಇಬ್ಬರು ಮಕ್ಕಳ ಸಹಿತ ಮನೆಮಂದಿ ಅಪಾಯದಿಂದ ಪಾರು

ಮಣ್ಣಿನಡಿಗೆ ಸಿಲುಕಿದ ವಾಹನ, ಸಾಕು ನಾಯಿ

Team Udayavani, Aug 3, 2024, 11:31 AM IST

Screenshot (82)

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಆನೆಬೈಲು ಸಮೀಪದ ಉಡ್ಲದಕೋಡಿ ಎಂಬಲ್ಲಿ ಗುಡ್ಡವೊಂದು ಕುಸಿದು ವಿಶ್ವನಾಥ ನಾಯ್ಕ ಅವರ ಮನೆ ಮೇಲೆ ಅಪ್ಪಳಿಸಿದ್ದು, ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಒಂದು ಓಮ್ನಿ ಕಾರು ಹಾಗೂ ಒಂದು ದ್ವಿಚಕ್ರ ವಾಹನ ಹಾಗೂ ಕಟ್ಟಿ ಹಾಕಿದ ಸಾಕು ನಾಯಿಯೊಂದು ಮಣ್ಣಿನಡಿ ಸಿಲುಕಿದೆ. ಗುಡ್ಡದ ಮಣ್ಣು ತೋಡಿಗೂ ಬಿದ್ದಿದ್ದು, ಇದರಿಂದ ಕೃಷಿ ತೋಟದಲ್ಲಿ ತೋಡಿನ ನೀರು ನದಿಯಂತೆ ಹರಿಯುತ್ತಿದೆ.

ಘಟನೆ ಸಂದರ್ಭ ಮನೆಯಲ್ಲಿ ವಿಶ್ವನಾಥ ನಾಯ್ಕ, ಅವರ ತಾಯಿ ಲಲಿತಾ, ಪತ್ನಿ ವಾರಿಜಾ ಹಾಗೂ ಅಂಗನವಾಡಿ ಹಾಗೂ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಅವರ ಇಬ್ಬರು ಮಕ್ಕಳು ಗಾಢ ನಿದ್ದೆಯಲ್ಲಿದ್ದರು. ಭಾರೀ ಶಬ್ದ ಕೇಳಿ ಎಚ್ಚರಗೊಂಡು ನೋಡಿದಾಗ ಮನೆಯ ಹಿಂಬದಿಯ ಗುಡ್ಡ ಕುಸಿದು ಇವರ ಮನೆಗೆ ತಾಗಿ ನಿಂತಿತ್ತು. ಇದರಿಂದ ಮನೆಯ ಒಂದು ಬದಿಯಲ್ಲಿ ಶೀಟ್‌ ಹಾಕಿ ಕಟ್ಟಲಾಗಿದ್ದ ಕೋಣೆ ನಾಶವಾಗಿದ್ದು, ಮನೆಯ ಗೋಡೆಗಳೂ ಬಿರುಕು ಬಿಟ್ಟಿವೆ. ಇದೇ ಬದಿಯಲ್ಲಿ ನಿಲ್ಲಿಸಲಾಗಿದ್ದ ಓಮ್ನಿ ಕಾರು ಹಾಗೂ ದ್ವಿಚಕ್ರ ವಾಹನಗಳುಮಣ್ಣಿನಡಿ ಸಿಲುಕಿತ್ತು. ಬಿದ್ದು ಮಣ್ಣು ಮುಂದುವರಿದು ಮನೆಯ ಕೆಳಗೆ ಹರಿಯುತ್ತಿದ್ದ ತೋಡು ಸೇರಿದ್ದರಿಂದ ಅದು ತನ್ನ ನೀರಿನ ಹರಿವಿನ ದಿಕ್ಕು ಬದಲಿಸಿದೆ. ಇದರಿಂದಾಗಿ ತೋಟದೆಲ್ಲೆಡೆ ನೀರು ಹರಿಯುತ್ತಿದೆ. ಮನೆಗೆ ಹೋಗುವ ದಾರಿಯೂ ನೀರಿನಿಂದಾವೃತವಾಗಿದೆ. ವಿದ್ಯುತ್‌ ಕಂಬಗಳು ಮಗುಚಿ ಬಿದ್ದಿವೆ.

ರಕ್ಷಣ ಕಾರ್ಯ

ಸುದ್ದಿ ತಿಳಿದು 34 ನೆಕ್ಕಿಲಾಡಿ ಗ್ರಾ.ಪಂ. ಸದಸ್ಯರಾದ ಪ್ರಶಾಂತ್‌ ಎನ್‌. ಹಾಗೂ ಹರೀಶ್‌ ಕುಲಾಲ್‌, ಸದಾನಂದ ಕಾರ್‌ ಕ್ಲಬ್‌ ರಕ್ಷಣ ಕಾರ್ಯಾಚರಣಗೆ ತೆರಳಿದ್ದುಸ್ಥಳೀಯರಾದ ಗುರುರಾಜ ಭಟ್‌,
ಧನಂಜಯ ಸೇರಿದಂತೆ ಸ್ಥಳೀಯರು ಸೇರಿದರು. ಲಲಿತಾ ಅವರನ್ನು ಎತ್ತಿಕೊಂಡು ಬಂದು ಸುರಕ್ಷಿತ ಜಾಗಕ್ಕೆ ಕಳುಹಿಸಿಕೊಡಲಾಯಿತು. ಗೃಹರಕ್ಷಕ ದಳದವರನ್ನೊಳಗೊಂಡ ಪ್ರವಾಹ ರಕ್ಷಣಾ ತಂಡದವರು ದೋಣಿಯೊಂದಿಗೆ ಸ್ಥಳಕ್ಕೆ ತೆರಳಿ, ಮನೆಯ ಸಾಮಗ್ರಿ, ಸರಂಜಾಮುಗಳನ್ನು ಹಾಗೂ ಮನೆಯಲ್ಲಿದ್ದ ಅಡಿಕೆ ಸೇರಿದಂತೆ ಇನ್ನಿತರ ವಸ್ತುಗಳನ್ನು ಸುರಕ್ಷಿತ ಜಾಗಕ್ಕೆ ತಲುಪಿಸಿದರು.

ಹಿಟಾಚಿಯಲ್ಲಿ ಮಣ್ಣು ತೆಗೆಯುವ ಕಾರ್ಯ ನಡೆಯುತ್ತಿದ್ದು, ತೋಡನ್ನು ಬಿಡಿಸಿ ಕೊಡುವ ಕೆಲಸ ನಡೆಯಿತು.

ಘಟನೆಯಲ್ಲಿ ಸಾಕು ನಾಯಿಯೊಂದು ಮಣ್ಣಿನ ಅಡಿಯೊಳಗೆ ಸೇರಿ ಹೋಗಿದ್ದು, ಈವರೆಗೆ ಅದರ ಪತ್ತೆಯಾಗಿಲ್ಲ.

ಉಪ್ಪಿನಂಗಡಿ ಕಂದಾಯ ಹೋಬಳಿ ಉಪತಹಶೀಲ್ದಾರ್‌ ಚೆನ್ನಪ್ಪ ಗೌಡ, ಗ್ರಾಮ ಕರಣಿಕ ಜಂಗಪ್ಪ, ಗ್ರಾಮ ಸಹಾಯಕ ದಿವಾಕರ, ನೆಕ್ಕಿಲಾಡಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಸತೀಶ ಕೆ. ಬಂಗೇರ, ಅಧ್ಯಕ್ಷೆ ಸುಜಾತಾ ಆರ್‌. ರೈ, ಉಪಾಧ್ಯಕ್ಷ ಹರೀಶ್‌ ಡಿ., 34 ನೆಕ್ಕಿಲಾಡಿ ವಲಯ ಕಾಂಗ್ರೆಸ್‌ ಅಧ್ಯಕ್ಷೆ ಅನಿ ಮಿನೇಜಸ್‌, ಪ್ರಮುಖರಾದ ಯು.ಜಿ ರಾಧ ಭೇಟಿ ನೀಡಿದರು.

ಟಾಪ್ ನ್ಯೂಸ್

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shourya

Dharmasthala: ಶೌರ್ಯ ಯೋಧರು ಆಪತ್ಕಾಲದ ಆಪ್ತ ರಕ್ಷಕರು: ಡಾ.ಡಿ.ವೀರೇಂದ್ರ ಹೆಗ್ಗಡೆ

Suside-Boy

Putturu: ವೃದ್ಧನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Car-Palti

Sulya: ಎರಡು ಕಾರುಗಳು ಢಿಕ್ಕಿ; ನಿಯಂತ್ರಣ ತಪ್ಪಿ ಕಾರು ಪಲ್ಟಿ

Subramanya ಚಿನ್ನಾಭರಣ ಕಳವು; ಪ್ರಕರಣ ದಾಖಲು

Subramanya ಚಿನ್ನಾಭರಣ ಕಳವು; ಪ್ರಕರಣ ದಾಖಲು

kalla

Vittalpadanur: 36 ಗ್ರಾಂ ಚಿನ್ನಾಭರಣ ಕಳವು; ಪ್ರಕರಣ ದಾಖಲು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.