Chandigarh Courtನೊಳಗೆ ಅಧಿಕಾರಿ ಅಳಿಯನನ್ನೇ ಗುಂಡಿಕ್ಕಿ ಕೊಂದ ಮಾವ!
ಸ್ವಲ್ಪ ಹೊತ್ತಿನಲ್ಲೇ ಐದು ಗುಂಡಿನ ಶಬ್ದ ಕೇಳಿಬಂದಿರುವುದಾಗಿ ವರದಿ ವಿವರಿಸಿದೆ.
Team Udayavani, Aug 3, 2024, 6:07 PM IST
ಚಂಡೀಗಢ: ಪಂಜಾಬ್ ಪೊಲೀಸ್ ಇಲಾಖೆಯಿಂದ ಅಮಾನತುಗೊಂಡಿದ್ದ ಅಸಿಸ್ಟೆಂಟ್ ಇನ್ಸ್ ಪೆಕ್ಟರ್ ಜನರಲ್ ತನ್ನ ಅಳಿಯನನ್ನೇ ಕೋರ್ಟ್ ಹಾಲ್ ನೊಳಗೆ ಗುಂಡಿಕ್ಕಿ ಕೊಲೆಗೈದಿರುವ ಘಟನೆ ಚಂಡೀಗಢದಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಮೃತ ಹರ್ ಪ್ರೀತ್ ಸಿಂಗ್ ನೀರಾವರಿ ಇಲಾಖೆಯಲ್ಲಿ ಐಆರ್ ಎಸ್ (Indian Revenue service) ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಾವ ಮಾಲ್ವಿಂದರ್ ಸಿಂಗ್ ಹಾಗೂ ಅಳಿಯ ಹರ್ ಪ್ರೀತ್ ಸಿಂಗ್ ಕುಟುಂಬದ ನಡುವೆ ಕೌಟುಂಬಿಕ ಕಲಹ ನಡೆಯುತ್ತಿತ್ತು.
ಇದನ್ನೂ ಓದಿ:Big Boss OTT 3 ಗೆದ್ದ ವಿಶ್ ಖ್ಯಾತಿಯ ನಟಿ ಸನಾ ಮಕ್ಬೂಲ್ ಖಾನ್
ಈ ವಿಚಾರದಿಂದಾಗಿ ಎರಡೂ ಕುಟುಂಬ ಸದಸ್ಯರು ಚಂಡೀಗಢ ಕೌಟುಂಬಿಕ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಫ್ಯಾಮಿಲಿ ಕೋರ್ಟ್ ನಲ್ಲಿ ಸಂಧಾನ ಮಾತುಕತೆ ನಡೆಯುತ್ತಿದ್ದ ಸಂದರ್ಭದಲ್ಲಿ ತನಗೆ ಶೌಚಾಲಯಕ್ಕೆ ಹೋಗುವ ದಾರಿ ತೋರಿಸುವಂತೆ ಅಳಿಯನ ಬಳಿ (ಹರ್ ಪ್ರೀತ್ ಸಿಂಗ್) ಕೇಳಿದಾಗ, ಇಬ್ಬರೂ ಹೊರಗೆ ಹೋಗಿದ್ದರು. ಸ್ವಲ್ಪ ಹೊತ್ತಿನಲ್ಲೇ ಐದು ಗುಂಡಿನ ಶಬ್ದ ಕೇಳಿಬಂದಿರುವುದಾಗಿ ವರದಿ ವಿವರಿಸಿದೆ.
ಗುಂಡಿನ ದಾಳಿಯಿಂದ ಹರ್ ಪ್ರೀತ್ ನೆಲದ ಮೇಲೆ ಕುಸಿದು ಬಿದ್ದಿದ್ದು, ಕೋರ್ಟ್ ರೂಂನಲ್ಲಿದ್ದ ಕುಟುಂಬ ಸದಸ್ಯರು ಸಹಾಯಕ್ಕಾಗಿ ಮೊರೆ ಇಡುತ್ತಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆಸ್ಪತ್ರೆಗೆ ಕೊಂಡೊಯ್ಯುವಷ್ಟರಲ್ಲಿ ಹರ್ ಪ್ರೀತ್ ಕೊನೆಯುಸಿರೆಳೆದಿದ್ದ. ಘಟನೆಗೆ ಸಂಬಂಧಿಸಿದಂತೆ ಆರೋಪಿ ಮಾಲ್ವಿಂದರ್ ಸಿಂಗ್ ನನ್ನು ಪೊಲೀಸರು ಬಂಧಿಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.