PSI ಪರಶುರಾಮ ಸಾವಿನ ಬಗ್ಗೆ ಸೂಕ್ತ ತನಿಖೆಯಾಗಲಿ: ಗೃಹ ಸಚಿವರಿಗೆ ಕಂದಕೂರು ಪತ್ರ
ಪರಶುರಾಮ ಅವರ ಪತ್ನಿ ಏಳು ತಿಂಗಳ ಗರ್ಭಿಣಿ... ನನ್ನ ಎರಡು ತಿಂಗಳ ಸಂಬಳ ಅವರ ಕುಟುಂಬಕ್ಕೆ ನೀಡುತ್ತೇನೆ
Team Udayavani, Aug 3, 2024, 8:41 PM IST
ಯಾದಗಿರಿ: ನಗರ ಪೊಲೀಸ್ ಠಾಣೆಯ ಪಿಎಸ್ಐ ಪರಶುರಾಮ ಅವರ ಸಾವಿನ ಬಗ್ಗೆ ಸೂಕ್ತ ತನಿಖೆಯಾಗಲಿ ಹಾಗೂ ಪ್ರಭಾವಿಗಳ ಹೆಸರು ಕೇಳಿ ಬರುತ್ತಿದ್ದು, ಅಂತವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರು ಅವರು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರಿಗೆ ಪತ್ರ ಬರೆದಿದ್ದಾರೆ.
ಪಿಎಸ್.ಐ ಪರಶುರಾಮ ಅವರ ಪತ್ನಿ ಶ್ವೇತಾ ಅವರು ಏಳು ತಿಂಗಳ ಗರ್ಭಿಣಿಯಿದ್ದು, ಅವರ ಕುಟುಂಬ ನಿರ್ವಹಣೆಗೆ ‘ನನ್ನ ಎರಡು ತಿಂಗಳ ಶಾಸಕ ಸಂಬಳ’ ನೀಡುತ್ತೇನೆ ಹಾಗೂ ರಾಜ್ಯ ಸರ್ಕಾರವು ಸಹ ಮೃತ ಪಿಎಸ್ಐ ಕುಟುಂಬಕ್ಕೆ ನ್ಯಾಯ ಒದಗಿಸಿ ಆರ್ಥಿಕ ನೆರವು ಒದಗಿಸಬೇಕೆಂದು ಹೇಳಿದ್ದಾರೆ.
ನಗರ ಪೊಲೀಸ್ ಠಾಣೆಗೆ ಬಂದು ಇನ್ನು ಒಂದು ವರ್ಷವೂ ಪೂರ್ಣಗೊಂಡಿರಲಿಲ್ಲ, ಆಗಲೇ ಪಿಎಸ್ಐ ಪರಶುರಾಮ ಅವರಿಗೆ ವರ್ಗಾವಣೆಯಾಗಿದ್ದು, ಅವೈಜ್ಞಾನಿಕ ವರ್ಗಾವಣೆ ಜಿಲ್ಲೆಯಲ್ಲಿ ಹೆಚ್ಚಾಗಿದೆ. ಗೃಹ ಇಲಾಖೆ ಹಾಗೂ ಇಲಾಖೆ ಮೇಲಾಧಿಕಾರಿಗಳು ಪಿಎಸ್ಐ ಪರಶುರಾಮ ಅವರ ಸಾವಿಗೆ ಹಾಗೂ ಅವರ ಪತ್ನಿ ಶ್ವೇತಾ ಅವರಿಗೆ ನ್ಯಾಯ ಒದಗಿಸಬೇಕು ಎಂದು ಶಾಸಕ ಕಂದಕೂರು ಪತ್ರದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.