BJPಯವರು ಪ್ರಾಯಶ್ಚಿತ್ತ ಯಾತ್ರೆ ಮಾಡಲಿ’: ಎಂಎಲ್‌ಸಿ ಐವನ್‌ ಡಿ’ಸೋಜಾ


Team Udayavani, Aug 4, 2024, 12:33 AM IST

Ivan-Dsoza

ಮಂಗಳೂರು: ಬಿಜೆಪಿಯವರು ಕಾಂಗ್ರೆಸ್‌ ಸರಕಾರದ ವಿರುದ್ಧ ಪಾದಯಾತ್ರೆ ಮಾಡುವ ಬದಲು ತಮ್ಮ ಆಡಳಿತ ಅವಧಿಯಲ್ಲಿ ನಡೆದಿರುವ ಭ್ರಷ್ಟಾಚಾರ, ಹಗರಣಗಳಿಗೆ ಪ್ರಾಯಶ್ಚಿತ್ತ ಯಾತ್ರೆ ಮಾಡಲಿ ಎಂದು ವಿಧಾನ ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಸರಕಾರದ ಅವಧಿಯಲ್ಲಿ ಬೋವಿ ನಿಗಮದಲ್ಲಿ 87 ಕೋ. ರೂ., ಅಂಬೇಡ್ಕರ್‌ ನಿಗಮದಲ್ಲಿ 4.95 ಕೋ.ರೂ., ದೇವರಾಜ್‌ ಟ್ರಕ್‌ ಟರ್ಮಿನಲ್‌ನಲ್ಲಿ 47 ಕೋ. ರೂ., ಕೆಐಎಡಿಬಿಯಲ್ಲಿ 60 ಕೋ. ರೂ., ಕೊರೊನಾ ಅವಧಿಯಲ್ಲಿ 2,000 ಕೋ.ರೂ.ಗಳಿಗೂ ಅಧಿಕ ಹಗರಣಗಳಾಗಿವೆ.

ಬಿಜೆಪಿಯವರು ಈ ಹಗರಣಗಳಿಗೆ ಸಂಬಂಧಿಸಿ ಆಗ ಮುಖ್ಯಮಂತ್ರಿ, ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ, ಜಗದೀಶ್‌ ಶೆಟ್ಟರ್‌, ಡಾ| ಸುಧಾಕರ್‌, ಕೋಟ ಶ್ರೀನಿವಾಸ ಪೂಜಾರಿ ಮನೆಗೆ ಪಾದಯಾತ್ರೆ ನಡೆಸಲಿ ಎಂದರು.
ಸಿದ್ದರಾಮಯ್ಯ ಹೆಸರಿನಲ್ಲಿ ಪಾದಯಾತ್ರೆ ಮಾಡಿದರೆ, ನಾವು ಸುಮ್ಮನೆ ಬಿಡುವುದಿಲ್ಲ. ಜನರ ಬಳಿ ಹೋಗಿ ಬಿಜೆಪಿಯ ಭ್ರಷ್ಟಾಚಾರವನ್ನು ತೆರೆದಿಡುತ್ತೇವೆ. ರಾಜ್ಯ ಸರಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಗೆ ಈ ಜನ್ಮ ಮಾತ್ರ ಅಲ್ಲ ಮುಂದಿನ ಜನ್ಮದಲ್ಲೂ ಸಾಧ್ಯ ಇಲ್ಲ ಎಂದರು.

ರಾಜ್ಯಪಾಲರಿಂದ ಸಂವಿಧಾನ ವಿರೋಧಿ ನಡೆ
ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಆಯ್ಕೆಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ನೊಟೀಸ್‌ ನೀಡುವ ಮೂಲಕ ರಾಜ್ಯಪಾಲರು ಸಂವಿಧಾನ ವಿರೋಧಿ ನಡೆ ಅನುಸರಿಸಿದ್ದಾರೆ. ಆದ್ದರಿಂದ ರಾಜ್ಯಪಾಲರು ತತ್‌ಕ್ಷಣ ನೋಟಿಸನ್ನು ಹಿಂಪಡೆಯಬೇಕು. ಇಲ್ಲವಾದರೆ ಕಾನೂನು ಹೋರಾಟದ ಜತೆಗೆ ಬೀದಿಗಿಳಿದೂ ಹೋರಾಟ ಮಾಡಲಿದ್ದೇವೆ ಎಂದು ಐವನ್‌ ಡಿ’ಸೋಜಾ ಹೇಳಿದರು.

ಸೈಟ್‌ ನೀಡಿರುವುದು ಬಿಜೆಪಿ ಅವಧಿಯಲ್ಲಿ
ಮುಡಾ ಪ್ರಕರಣದಲ್ಲಿ ಜಾಗ ಕಳೆದುಕೊಂಡಿದ್ದ ಸಿದ್ದರಾಮಯ್ಯ ಅವರ ಪತ್ನಿಗೆ ಸೈಟ್‌ ನೀಡಿರುವುದು ಬಿಜೆಪಿ ಅವಧಿಯಲ್ಲಿ. ಒಂದು ವೇಳೆ ಅಕ್ರಮ ಆಗಿದೆ ಎಂದಾದರೆ ನೋಟಿಸ್‌ ನೀಡಬೇಕಿರುವುದು ಸಿದ್ಧರಾಮಯ್ಯರ ಪತ್ನಿಗೆ, ಮುಡಾ ಅಧಿಕಾರಿಗಳಿಗೆ ಹಾಗೂ ಆ ಅವಧಿಯಲ್ಲಿ ಅಧಿಕಾರದಲ್ಲಿದ್ದವರಿಗೆ. ಅದು ಬಿಟ್ಟು ಕೇಂದ್ರ ಸರಕಾರದ ಅಣತಿಯಂತೆ ಕಾನೂನು ಪರಿಮಿತಿ ತಿಳಿಯದೆ ರಾಜ್ಯಪಾಲರು ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಮುಖಂಡರಾದ ಎಂ.ಶಶಿಧರ್‌ ಹೆಗ್ಡೆ, ಅಶ್ರಫ್ ಕೆ., ಪ್ರಕಾಶ್‌ ಸಾಲಿಯಾನ್‌, ಅಪ್ಪಿ, ಕಿರಣ್‌ ಬುಡ್ಲೆಗುತ್ತು, ಸತೀಶ್‌ ಪೆಂಗಲ್‌, ಭಾಸ್ಕರ ರಾವ್‌, ಪ್ರೇಮನಾಥ್‌, ಮೀನಾ ಟೆಲ್ಲಿಸ್‌, ವಿಕಾಸ್‌ ಶೆಟ್ಟಿ, ಇಮ್ರಾನ್‌, ಅಬ್ದುಲ್‌ ಸಲೀಂ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.