Gujarat; ದಲಿತ ಮಹಿಳಾಧಿಕಾರಿ ಕುರ್ಚಿ ಎಳೆದು ಬೀಳಿಸಿದ ಕೈ ನಾಯಕನ ಬಂಧನ
Team Udayavani, Aug 4, 2024, 6:47 AM IST
ಗಾಂಧೀನಗರ: ಗುಜರಾತ್ ರಾಜ್ಯ ಗುಪ್ತಚರ ಇಲಾಖೆಯ (ಐಬಿ)ಮಹಿಳಾ ಅಧಿಕಾರಿ ರೀನಾ ಚೌಹಾಣ್ ಅವರು ಕುಳಿತಿದ್ದ ಕುರ್ಚಿ ಎಳೆದು ಬೀಳಿಸಿದ್ದ ಕಾಂಗ್ರೆಸ್ ನಾಯಕ ಹರೇಶ್ ಅಧೀರ್ ಅವರನ್ನು ಬಂಧಿಸಲಾಗಿದೆ.
ಘಟನೆ ಬೆನ್ನಲ್ಲೇ ಅಧೀರ್ ವಿರುದ್ಧ ಕೇಸು ದಾಖಲಿಸಲಾಗಿತ್ತು. ಪತ್ರಿಕಾಗೋಷ್ಠಿಯಲ್ಲಿ ರೀನಾ ಕುರ್ಚಿಯಿಂದ ಮೇಲೆ ಎದ್ದಿದ್ದರು. ಆಕೆ ಮತ್ತೆ ಕೂರುವಾಗ ಅಧೀರ್ ಕುರ್ಚಿ ಎಳೆದಿದ್ದಾರೆ. ಇದರಿಂದ ಆಕೆ ಬಿದ್ದು ಗಾಯಗೊಂಡಿದ್ದಾರೆ. ದಲಿತ ಅಧಿಕಾರಿ ಎನ್ನುವ ಕಾರಣಕ್ಕೆ ಹೀಗೆ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕನ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಅಹಿರ್ ಕಾಂಗ್ರೆಸ್ ಕಿಸಾನ್ ಸೆಲ್ನ ಸಂಯೋಜಕರಾಗಿದ್ದು, ಭುಜ್ನ ಸರ್ಕ್ಯೂಟ್ ಹೌಸ್ನಲ್ಲಿ ಮೇವಾನಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ರೀನಾ ಚೌಹಾಣ್ ತನ್ನ ಕೆಲಸದ ಭಾಗವಾಗಿ ಅಲ್ಲಿ ಹಾಜರಾಗಿದ್ದರು.
ಎಕ್ಸ್ ಪೋಸ್ಟ್ನಲ್ಲಿ, ಗೃಹ ಖಾತೆಯ ರಾಜ್ಯ ಸಚಿವ ಹರ್ಷ ಸಂಘವಿ ಅವರು ಘಟನೆಯನ್ನು ಖಂಡಿಸಿದ್ದು, ಕಾಂಗ್ರೆಸ್ ಮಹಿಳಾ ಮತ್ತು ದಲಿತ ವಿರೋಧಿ ಎಂದು ಹೇಳಿದ್ದಾರೆ. ಮೇವಾನಿ ಅವರು ಅಹಿರ್ ಚೌಹಾಣ್ ಅವರನ್ನು ಬಿಜೆಪಿ ಸರ್ಕಾರದ ಆದೇಶದ ಮೇರೆಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯ ಅಡಿಯಲ್ಲಿ ಸಿಲುಕಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.