MUDA; ಸಿಎಂ ವಿಚಾರಣೆಗೆ ರಾಜ್ಯಪಾಲರು ಒಪ್ಪಿಗೆ ಕೊಡುವರೇ: ಕುತೂಹಲ

 ಇಂದು ರಾಜ್ಯಪಾಲ ಗೆಹ್ಲೋಟ್‌ ವಾಪಸ್‌: ನಾಳೆ ಅನುಮತಿ? ಅದಕ್ಕೆ ಮುನ್ನ ಮತ್ತೂಂದು ನೋಟಿಸ್‌?

Team Udayavani, Aug 4, 2024, 7:00 AM IST

1-thavr

ಬೆಂಗಳೂರು: ಮುಡಾ ಪ್ರಕ ರಣಕ್ಕೆ ಸಂಬಂಧಿಸಿ ಸರಕಾರ ಹಾಗೂ ರಾಜಭವನದ ನಡುವಣ ಸಂಘರ್ಷ ಈಗ ಕುತೂಹಲಕಾರಿ ಘಟ್ಟಕ್ಕೆ ಬಂದು ನಿಂತಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾ ಚಾರ ಆರೋಪ ಸಂಬಂಧ ಅಭಿಯೋಜನೆಗೆ ಸಮ್ಮತಿ ನೀಡುವ ವಿಷಯದಲ್ಲಿ ರಾಜ್ಯಪಾಲರು ಸೋಮವಾರ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

ದಿಲ್ಲಿಯಲ್ಲಿ ರಾಜ್ಯಪಾಲರ ಸಮ್ಮೇಳನ ದಲ್ಲಿ ಭಾಗಿಯಾಗಲು ತೆರಳಿದ್ದ ಅವರು ಕಾನೂನು ತಜ್ಞರ ಜತೆಗೆ ಸಮಾಲೋಚನೆ ನಡೆಸಿದ್ದು, ಅಭಿಯೋಜನೆಗೆ ಸಮ್ಮತಿ ನೀಡುವುದರಿಂದ ಆಗುವ ಸಾಧಕ- ಬಾಧಕಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಅಭಿಯೋಜನೆಗೆ ಅನುಮತಿ ನೀಡುವಾಗ ಸಚಿವ ಸಂಪುಟದ ನಿರ್ಣಯ ಪಾಲಿಸಬೇಕೆಂಬ ಸರಕಾರದ ವಾದ ಹಾಗೂ ಸಿಎಂ ಸಿದ್ದರಾಮಯ್ಯ ಅವರ ನಡೆ ರಾಜಭವನದ ಕೆಂಗಣ್ಣಿಗೆ ಗುರಿಯಾಗಿದ್ದು, ಬೆಂಗಳೂರಿಗೆ ವಾಪಸ್‌ ಆಗುತ್ತಿದ್ದಂತೆ ಅವರು ನಿರ್ಧಾರ ತೆಗೆದುಕೊಳ್ಳುವುದು ನಿಚ್ಚಳವಾಗಿದೆ. ರಾಜ್ಯ ಪಾಲರು ರವಿವಾರ ಬೆಂಗಳೂರಿಗೆ ವಾಪಸ್‌ ಆಗುವರು ಎನ್ನಲಾಗುತ್ತಿದೆ.

ಮತ್ತೊಮ್ಮೆ ನೋಟಿಸ್‌
ಮೂಲಗಳ ಪ್ರಕಾರ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೂಂದು ಶೋಕಾಸ್‌ ನೋಟಿಸ್‌ ನೀಡುವ ಸಾಧ್ಯತೆಯೂ ಇದೆ. ಈ ಹಿಂದೆ ನೀಡಿದ ನೋಟಿಸ್‌ನ ವಿರುದ್ಧವಾಗಿ ಮಂತ್ರಿ ಪರಿಷತ್‌ ಸಭೆ ತೆಗೆದುಕೊಂಡ ನಿರ್ಣಯವೇ ಕಾನೂನುಬಾಹಿರ ಎಂದು ರಾಜ್ಯಪಾಲರು ವಾದಿಸುವ ಸಾಧ್ಯತೆ ಇದೆ. ಅದಾದ ಬಳಿಕ ಸರಕಾರದ ನಡೆ ಆಧರಿಸಿ ಅಭಿಯೋಜನೆಗೆ ಒಪ್ಪಿಗೆ ನೀಡಬಹುದು ಎನ್ನಲಾಗುತ್ತಿದೆ. ಇವೆಲ್ಲವುಗಳ ಮಧ್ಯೆ ಅಭಿಯೋಜನೆಗೆ ಒಪ್ಪಿಗೆ ನೀಡುವ ವಿಚಾರದಲ್ಲಿ ರಾಜ್ಯಪಾಲರ ವಿವೇಚನಾಧಿಕಾರವನ್ನು ಪ್ರಶ್ನಿಸುವುದಕ್ಕೆ ಸಾಧ್ಯವಿಲ್ಲ. ಆದರೆ ಪ್ರಕರಣದ ಸತ್ಯಾಸತ್ಯ ಆಧರಿಸಿ ನ್ಯಾಯಾಲಯದಲ್ಲಿ ಇದಕ್ಕೆ ತಡೆ ಕೋರಿ ಕಾನೂನು ಹೋರಾಟ ನಡೆಸಬಹುದೇ ವಿನಾ ಸಂವಿಧಾನಾತ್ಮಕವಾಗಿ ರಾಜ್ಯಪಾಲರ ಈ ವಿವೇಚನಾಧಿಕಾರವನ್ನು ಪ್ರಶ್ನಿಸುವುದು ಸರಕಾರದ ಕಡೆಯಿಂದ ಕಾಲಹರಣದ ತಂತ್ರ ಎಂದೇ ಕಾನೂನು ತಜ್ಞರು ವ್ಯಾಖ್ಯಾನಿಸಲಾರಂಭಿಸಿದ್ದಾರೆ.

ವೈಯಕ್ತಿಕ ಹೋರಾಟ
ಕಾನೂನು ತಜ್ಞರ ಪ್ರಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವಷ್ಟೇ ರಾಜ್ಯಪಾಲರು ಅಭಿಯೋಜನೆಗೆ ಅಂಗೀಕಾರ ನೀಡಿದರೆ ಆಗ ಅವರು ವೈಯಕ್ತಿಕವಾಗಿ ಕಾನೂನು ಹೋರಾಟ ನಡೆಸಬೇಕಾಗುತ್ತದೆ. ಸರಕಾರ ಇದರ ಭಾಗವಾಗುವುದಕ್ಕೆ ಸಾಧ್ಯವಿಲ್ಲ. ಒಟ್ಟಾರೆಯಾಗಿ ಏಕಾಂಗಿಯಾಗಿ ಸಿದ್ದರಾಮಯ್ಯ ತಮ್ಮನ್ನು ಕಾನೂನು ಹೋರಾಟಕ್ಕೆ ಒಡ್ಡಿಕೊಳ್ಳಬೇಕಾಗುತ್ತದೆ. ಸರಕಾರದ ಮೂಲಗಳ ಪ್ರಕಾರ ಸಿದ್ದರಾಮಯ್ಯನವರು ರಾಜಭವನದ ನಡೆ ಆಧರಿಸಿ ನೇರವಾಗಿ ಸುಪ್ರೀಂ ಕೋರ್ಟ್‌ನಲ್ಲೇ ಸಮರಕ್ಕೆ ಮುಂದಾಗುವ ಸಾಧ್ಯತೆ ಹೆಚ್ಚಿದೆ.

ರಾಜ್ಯಪಾಲರ ವಿವೇಚನಾಧಿಕಾರ ಸಚಿವ ಸಂಪುಟದ ನಿರ್ಣಯವನ್ನೇ ಆಧರಿಸಿರಬೇಕೆಂದಿಲ್ಲ. ಸಂಪುಟದ ಅನು ಮತಿ ಇಲ್ಲದೆ ರಾಜ್ಯಪಾಲರು ಪ್ರವರ್ತಿಸು ವುದಕ್ಕೆ ಅನೇಕ ಕಾರಣಗಳಿವೆ. ಆದರೆ ಅಭಿ ಯೋಜನೆಯನ್ನು ಪ್ರಶ್ನಿಸುವ ಹಕ್ಕು ಸಿಎಂಗೆ ಇದೆ.-ಅಶೋಕ್‌ ಹಾರ್ನಹಳ್ಳಿ,ಮಾಜಿ ಅಡ್ವೊಕೇಟ್‌ ಜನರಲ್‌

ಅಭಿಯೋಜನೆಗೆ ಅನುಮತಿ ನೀಡುವ ಅಥವಾ ನಿರಾಕರಿಸುವ ರಾಜ್ಯಪಾಲರ ವಿವೇಚಾನಾಧಿಕಾರವನ್ನು ಪ್ರಶ್ನಿಸುವುದಕ್ಕೆ ಸಾಧ್ಯವೇ ಇಲ್ಲ. ಮುಖ್ಯ ಮಂತ್ರಿ ವಿರುದ್ಧ ದೂರು ಬಂದಾಗ ಅದರ ಬಗ್ಗೆ ವಿಚಾರಣೆ ಅಥವಾ ಅಭಿಯೋಜನೆಗೆ ಅನುಮತಿ ನೀಡುವ ಅಧಿಕಾರ ರಾಜ್ಯಪಾಲರಿಗೆ ಇದೆ.
-ಸಿ.ಎಚ್‌. ಹನುಮಂತರಾಯ, ಹಿರಿಯ ನ್ಯಾಯವಾದಿ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.