Putturu: ಬೆದ್ರಾಳ ತೋಡಿಗೆ ದಿಢೀರ್ ಕುಸಿದ ಗುಡ್ಡ, ತೋಟ ಜಲಾವೃತ; ಅಪಾಯದಲ್ಲಿ ಮನೆ
Team Udayavani, Aug 4, 2024, 1:40 AM IST
ಪುತ್ತೂರು: ನಗರದ ರಾಜಕಾಲುವೆ, ಉಪ ತೋಡುಗಳ ಮಳೆ ನೀರು ಹರಿಯುವ ಬೆದ್ರಾಳ ತೋಡಿಗೆ ಗುಡ್ಡೆ ಕುಸಿದು ಪಕ್ಕದ ಅಡಿಕೆ ತೋಟಗಳು ಜಲಾವೃತಗೊಂಡು ಮನೆಯೊಂದು ಅಪಾಯದ ಅಂಚಿನಲ್ಲಿದೆ.
ಕೆಮ್ಮಿಂಜೆ ಗ್ರಾಮದ ಪುತ್ತೂರಮೂಲೆ ಮತ್ತು ಕೆಮ್ಮಿಂಜೆಬೈಲಿನಲ್ಲಿ ಬೆದ್ರಾಳ ತೋಡಿಗೆ ಭಾರೀ ಪ್ರಮಾಣದ ಗುಡ್ಡೆಯ ಮಣ್ಣು ಕುಸಿದು ಬಿದ್ದು ತೋಡಿನಲ್ಲಿ ಮಳೆ ನೀರು ಹರಿಯುವಿಕೆಗೆ ಅಡ್ಡಿಯಾಗಿದೆ. ಪರಿಣಾಮವಾಗಿ ಪಕ್ಕದಲ್ಲಿರುವ ಅಡಿಕೆ ತೋಟಗಳಿಗೆ ನೀರು ನುಗ್ಗಿ ತೋಟಗಳು ಜಲಾವೃತವಾಗಿವೆ.
ಸುಬ್ರಹ್ಮಣ್ಯ ಬಳ್ಳಕ್ಕುರಾಯ, ಎಂಜಿನಿಯರ್ ಸಚಿನ್, ಮುತ್ತು ಶೆಟ್ಟಿ ಅವರ ತೋಟಗಳು ಜಲಾವೃತಗೊಂಡಿವೆ. ತೋಡಿನ ಬದಿಯಲ್ಲಿರುವ ಯಶೋದಾ ಅವರ ಮನೆ ಅಪಾಯದ ಅಂಚಿನಲ್ಲಿದೆ. ಸ್ಥಳಕೆ ನಗರಸಭಾ ಸದಸ್ಯ ಬಾಲಚಂದ್ರ, ಪೌರಾಯುಕ್ತ ಮಧು ಎಸ್. ಮನೋಹರ್ ಮತ್ತು ನಗರಸಭೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಪುತ್ತೂರು: ರಾಜ್ಯ ಹೆದ್ದಾರಿ ಬದಿ ಕುಸಿತ
ಪುತ್ತೂರು: ಉಪ್ಪಿನಂಗಡಿ-ಪುತ್ತೂರು ರಾಜ್ಯ ಹೆದ್ದಾರಿಯಲ್ಲಿ ಆ.3 ರಾತ್ರಿ ಏಕಾಏಕಿ ಬರೆ ಕುಸಿದಿದೆ. ಕೋಡಿಂಬಾಡಿ ಸಮೀಪ ಶಾಸಕ ಅಶೋಕ್ ಕುಮಾರ್ ರೈ ಅವರ ನಿವಾಸದಿಂದ ಕೂಗಳತೆ ದೂರದಲ್ಲಿ ಘಟನೆ ನಡೆದಿದೆ. ರಸ್ತೆಯ ಇನ್ನೊಂದು ಭಾಗದಲ್ಲಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಮಣ್ಣು ತೆರವು ಕಾರ್ಯ ಆರಂಭಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.