Special Day Celebration: ಇನ್ನು ಸರಕಾರಿ ಶಾಲೆಗಳಲ್ಲಿ ವಿಶೇಷ ದಿನ ಹಬ್ಬದೂಟ!

ದಾನಿಗಳ ನೆರವು ಪಡೆಯಲು ಮುಂದಾದ ಇಲಾಖೆ ವರ್ಷಕ್ಕೆ 100 ಊಟಕ್ಕೆ ಅವಕಾಶ

Team Udayavani, Aug 4, 2024, 7:45 AM IST

stede

ಬೆಂಗಳೂರು: ರಾಜ್ಯದ ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿ ವರೆಗೆ ಓದುತ್ತಿರುವ ಮಕ್ಕಳಿಗೆ ಹಬ್ಬ ಹರಿದಿನ, ಮದುವೆ/ಮದುವೆ ವಾರ್ಷಿಕೋತ್ಸವ, ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಜನ್ಮದಿನಗಳು, ರಾಷ್ಟ್ರೀಯ ಪ್ರಮುಖ ದಿನಗಳು, ರಾಜ್ಯ ಸ್ಥಾಪನೆಯ ದಿನಗಳು ಸೇರಿ ವಿಶೇಷ ದಿನಾಚರಣೆಗಳ ಸಂದರ್ಭ ವಿಶೇಷ ಭೋಜನ ಏರ್ಪಡಿಸಲು ಸರಕಾರ ಅವಕಾಶ ಕಲ್ಪಿಸಿದೆ.

ಇದಕ್ಕೆ ಸಂಬಂಧಪಟ್ಟಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಪೌಷ್ಟಿಕ ಮತ್ತು ಆರೋಗ್ಯಕರ ಊಟ ಅಥವಾ ಆಹಾರ ಪದಾರ್ಥಗಳನ್ನು ನೀಡಬೇಕು ಎಂದು ಹೇಳಿದೆ. ಈ ವಿಶೇಷ ಭೋಜನವು ಪಿಎಂ ಪೋಷಣ್‌ನ ಭಾಗವಾಗಿದೆ. ಎನ್‌ಜಿಒಗಳು, ಕೈಗಾರಿಕೆ, ವಾಣಿಜ್ಯ ಮತ್ತು ವ್ಯಾಪಾರ ಇತ್ಯಾದಿ ಸಮುದಾಯದ ಸದಸ್ಯರು ಸೇರಿ ಪೋಷಕರು, ಸಮುದಾಯದ ದಾನಿಗಳ ನೆರವು, ಪ್ರಾಯೋಜಕತ್ವ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಮಾನದಂಡಗಳಿಗೆ ಅನುಗುಣವಾಗಿ ಪ್ರಾಥಮಿಕ ತರಗತಿ ವಿದ್ಯಾರ್ಥಿಗಳಿಗೆ 450 ಕ್ಯಾಲೋರಿಗಳು ಮತ್ತು 12 ಗ್ರಾಂ ಪ್ರೊಟೀನ್‌, ಹಿರಿಯ ಪ್ರಾಥಮಿಕ ವಿದ್ಯಾರ್ಥಿಗಳಿಗೆ 750 ಕ್ಯಾಲೋರಿ ಮತ್ತು 20 ಗ್ರಾಂ ಪ್ರೊಟೀನ್‌ ಲಭ್ಯವಾಗುವಂತೆ ವಿಶೇಷ ಭೋಜನದ ಮೆನು ಇರಬೇಕು ಎಂದು ಸೂಚನೆ ನೀಡಲಾಗಿದೆ.

ಸ್ಥಳೀಯ ಆಹಾರಕ್ಕೆ ಆದ್ಯತೆ:
ಸ್ಥಳೀಯವಾಗಿ ಲಭ್ಯವಿರುವ ಸೊಪ್ಪಿನ ತರಕಾರಿಗಳು, ಕಾಳು, ದ್ವಿದಳ ಧಾನ್ಯ ಮತ್ತು ಸಿರಿಧಾನ್ಯಗಳಿಗೆ ಒತ್ತು ನೀಡಬೇಕು. ಋತುಮಾನದ ಹಣ್ಣುಗಳನ್ನು, ತಾಜಾ ತರಕಾರಿಗಳನ್ನು ಬಳಸಿಕೊಳ್ಳಬಹುದು. ಆಹಾರ ಧಾನ್ಯ ಸಂಗ್ರಹ, ಅಡುಗೆ ಮಾಡುವಾಗ ಹಾಗೂ ಬಡಿಸುವಾಗ ಸ್ವತ್ಛತೆ ಮತ್ತು ನೈರ್ಮಲ್ಯದ ಮಾನದಂಡಗಳ ಕಡ್ಡಾಯ ಪಾಲನೆ ಆಗಬೇಕು. ಆಹಾರ ಕಲಬೆರಕೆ ಮತ್ತು ಆಹಾರ ಹಾಳಾಗುವುದನ್ನು ತಡೆಯಲು ಪ್ರಮಾಣಿತ ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಶುದ್ಧ ಕುಡಿಯುವ ನೀರನ್ನೇ ಬಳಸಬೇಕು ಎಂದು ಸೂಚಿಸಲಾಗಿದೆ.

ಜಂಕ್‌ ಫ‌ುಡ್‌ ಬೇಡ
ಮಕ್ಕಳಲ್ಲಿ ಜಂಕ್‌ ಫ‌ುಡ್‌ ಸೇವನೆಯಿಂದ ಆರೋಗ್ಯ ಸಮಸ್ಯೆಗಳು ಆಗುತ್ತಿರುವ ಬಗ್ಗೆ ವಿವಿಧ ವರದಿಗಳಲ್ಲಿ ಉಲ್ಲೇಖ ಆಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಶಿಕ್ಷಣ ಇಲಾಖೆಯು ವಿಶೇಷ ಭೋಜನದಲ್ಲಿ ನೂಡಲ್ಸ್‌, ಚಿಪ್ಸ್‌, ಚಾಕೋಲೆಟ್‌ ಮುಂತಾದ ಜಂಕ್‌ ಫ‌ುಡ್‌ಗೆ ಅವಕಾಶವಿಲ್ಲ, ಹಳಸಿದ ಆಹಾರವನ್ನು ಕೊಡಬೇಡಿ ಎಂದು ಸೂಚಿಸಲಾಗಿದೆ. ಮಕ್ಕಳಿಗೆ ಉಣಬಡಿಸುವ ಮೊದಲು ಶಿಕ್ಷಕರು ಮತ್ತು ಅಡುಗೆಯವರು ರುಚಿ ನೋಡಬೇಕೆಂದು ಹೇಳಲಾಗಿದೆ. ವರ್ಷಕ್ಕೆ ನೂರರಷ್ಟು ವಿಶೇಷ ಭೋಜನ ಕಾರ್ಯಕ್ರಮ ಹಮ್ಮಿಕೊಳ್ಳಬಹುದೆಂದು ಹೇಳಲಾಗಿದೆ.

“ಮಾರ್ಗಸೂಚಿಯಂತೆ ಶಾಲಾ ಹಂತದಲ್ಲಿ ವಿಶೇಷ ಭೋಜನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು. ಮಕ್ಕಳಿಗೆ ಉತ್ತಮ ಮತ್ತು ಗುಣಮಟ್ಟದ ಪೋಷಕಾಂಶಗಳಿರುವ ಪೂರಕ ಆಹಾರ ಪದಾರ್ಥಗಳನ್ನು ಪೋಷಕರು ಮತ್ತು ಸಮುದಾಯದ ದಾನಿಗಳಿಂದ ಕೊಡುಗೆಯಾಗಿ ಕೊಡುವುದನ್ನು ಉತ್ತೇಜಿಸಬೇಕು.” – ಬಿ.ಬಿ. ಕಾವೇರಿ, ಆಯುಕ್ತ, ಶಾಲಾ ಶಿಕ್ಷಣ ಇಲಾಖೆ

– ರಾಕೇಶ್‌ ಎನ್‌.ಎಸ್‌.

ಟಾಪ್ ನ್ಯೂಸ್

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.