Hunsur: ತಾಯಿಯೊಂದಿಗೆ ನಾಲ್ಕು ಚಿರತೆ ಮರಿಗಳು ಪ್ರತ್ಯಕ್ಷ; ಆತಂಕದಲ್ಲಿ ಜನತೆ

ನಂಜಾಪುರದಲ್ಲಿ ಕಾಡು ಹಂದಿಗಳ ದಾಳಿಗೆ ಬೆಳೆನಾಶ

Team Udayavani, Aug 4, 2024, 11:12 AM IST

2-hunsur

ಹುಣಸೂರು: ತಾಲೂಕಿನ ನಂಜಾಪುರ ಸುತ್ತಮುತ್ತ ಗ್ರಾಮಗಳಲ್ಲಿ ಚಿರತೆ ಹಾಗೂ ಕಾಡು ಹಂದಿಗಳ ಹಾವಳಿ ಮಿತಿ ಮೀರಿದ್ದು, ಗ್ರಾಮಸ್ಥರು ಹಾಗೂ  ವಿದ್ಯಾರ್ಥಿಗಳು ಭಯಭೀತರಾಗಿದ್ದಾರೆ.

ಬಿಳಿಕೆರೆ ಹೋಬಳಿಯ ನಂಜಾಪುರ, ಗೌರಿಪುರ, ಧರ್ಮಾಪುರದ ಕಿತ್ತೂರು ರಾಣಿ ಚೆನ್ನಮ್ಮ, ಮೊರಾರ್ಜಿ ಶಾಲೆ ಸೇರಿದಂತೆ ಸುತ್ತ ಮುತ್ತಲ ಗ್ರಾಮಗಳಲ್ಲಿ ತಾಯಿ ಚಿರತೆಯೊಂದಿಗೆ ನಾಲ್ಕು ಮರಿಗಳು ಕಾಣಿಸಿಕೊಳ್ಳುತ್ತಿದ್ದು, ಹಗಲು ವೇಳೆಯೇ ಕಾಣಿಸಿಕೊಳ್ಳುತ್ತಿದೆ.

ಚಿರತೆ ಈಗಾಗಲೇ ಹಲವಾರು ನಾಯಿಗಳನ್ನು ಕೊಂದು ಹಾಕಿದ್ದು, ಮಾತ್ರವಲ್ಲದೇ ಜಾನುವಾರುಗಳ ಮೇಲೆ ದಾಳಿ ನಡೆಸಿವೆ. ಧರ್ಮಾಪುರದ ವಸತಿ ಶಾಲೆಗಳ ಸುತ್ತ- ಮುತ್ತ ಓಡಾಡುತ್ತಿರುವುದು ಕಂಡು ಬಂದಿದೆ.

ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಜೀವ ಭಯದಲ್ಲಿ ಓಡಾಡುವಂತಾಗಿದೆ. ಚಿರತೆಗಳು ರಾತ್ರಿ ವೇಳೆ ರಸ್ತೆಯಲ್ಲೇ ಸಂಚರಿಸುತ್ತಿರುವುದು ದ್ವಿಚಕ್ರ ವಾಹನ ಸವಾರರಿಗೆ ಓಡಾಡದಂತಾಗಿದೆ. ರೈತರು ಜಮೀನಿಗೆ ಹೋಗಲು ಹೆದರುವ ಸ್ಥಿತಿ ನಿರ್ಮಾಣವಾಗಿದೆ.

ಕಾಡು ಹಂದಿಗಳ ಕಾಟ:

ನಂಜಾಪುರ ಗ್ರಾಮದ ಪಕ್ಕದಲ್ಲೇ ಕುರುಚಲು ಕಾಡಿದ್ದು, ಇಲ್ಲಿ ಹಂದಿ ಹಾಗೂ ಚಿರತೆಗಳು ಆವಾಸ ಸ್ಥಾನ ಮಾಡಿಕೊಂಡಿದ್ದು, ಕಾಡು ಹಂದಿಗಳಂತೂ ಮುಸುಕಿನ ಜೋಳದ ಬಿತ್ತನೆ ಸಮಯದಲ್ಲೇ ಸಾಲು ಹಿಡಿದು ಬಿತ್ತನೆ ಬೀಜವನ್ನೇ ತಿಂದು ಹಾಕುತ್ತಿದ್ದವು.

ಇದೀಗ ಜೋಳದ ಬೆಳೆ ಬಂದಿದ್ದು, ಕಾಡು ಹಂದಿಗಳ ಹಿಂಡು ಹೊಲಕ್ಕೆ ದಾಳಿ ಇಟ್ಟು ಜೋಳದ ಮೋತೆಯನ್ನೇ ತಿಂದು ಹಾಕುತ್ತಿವೆ. ಇದರಿಂದ ನಷ್ಟಕ್ಕೊಳಗಾಗಿರುವ ರೈತರು ಪೂರ್ಣ ಕಾಳು ಕಟ್ಟುವ ಮುನ್ನವೇ ಜೋಳದ ಗಿಡ ಸಮೇತ ಮಾರಾಟ ಮಾಡುತ್ತಿದ್ದು, ಲಕ್ಷಾಂತರ ರೂ. ಮಾಡಿಕೊಂಡಿದ್ದಾರೆ.

ಚಿರತೆ, ಹಂದಿ ಕಾಟ ತಪ್ಪಿಸಲು ಆಗ್ರಹ:

ಈ ಭಾಗದಲ್ಲಿ ಪ್ರತಿವರ್ಷ ಕಾಡು ಹಂದಿ, ಚಿರತೆ ಕಾಟ ಇದ್ದದ್ದೆ. ಯಾವುದೇ ಬೆಳೆ ಬೆಳೆಯಲಾಗದಂತಾಗಿದೆ. ಜೀವ ಭಯದಿಂದಲೇ ಬದುಕುವಂತಾಗಿದೆ. ಲಕ್ಷಾಂತರ ರೂ. ಬೆಳೆ ನಷ್ಟ ಉಂಟಾಗುತ್ತಿದೆ. ಇನ್ನಾದರೂ ಅರಣ್ಯ ಇಲಾಖೆ ಈ ಭಾಗದಲ್ಲಿ ಹೆಚ್ಚಿನ ಸಿಬ್ಬಂದಿ ನೇಮಿಸಿ ಚಿರತೆ ಸೆರೆ ಹಿಡಿಯಬೇಕು. ಹಂದಿ ಕಾಟ ತಪ್ಪಿಸಬೇಕೆಂದು ಅರಣ್ಯಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಅರಣ್ಯ ಇಲಾಖೆ ವಿರುದ್ದ ಪ್ರತಿಭಟನೆ ನಡೆಸುವುದಾಗಿ ಗ್ರಾ.ಪಂ.ಸದಸ್ಯ ಮನು, ಶೋಭಾ ವಿಠಲ, ಚಂದ್ರಶೇಖರ್, ಸೋಮಶೇಖರ್, ಮಂಜುರಾವ್ ಕದಂ, ಶಿವಕುಮಾರ್ ಹಾಗೂ ರೈತರು ಎಚ್ಚರಿಸಿದ್ದಾರೆ.

ಸೆರೆಗೆ ಕ್ರಮ:

ಶಾಲೆಯವರ ಮನವಿಯಂತೆ ಈಗಾಗಲೇ ವಸತಿ ಶಾಲೆ ಬಳಿ ಚಿರತೆ ಸೆರೆಗೆ ಬೋನ್ ಇರಿಸಲಾಗಿದೆ. ಗ್ರಾಮಸ್ಥರೊಂದಿಗೆ ಚರ್ಚಿಸಿ ಶೀಘ್ರದಲ್ಲೇ ಚಿರತೆಗಳನ್ನು ಸೆರೆ ಹಿಡಿಯಲಾಗುವುದೆಂದು ಆರ್.ಎಫ್.ಓ.ನಂದಕುಮಾರ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ

Mysuru; ಟಿಕೆಟ್‌ ಆಕಾಂಕ್ಷಿಗಳು ಸಕ್ರಿಯವಾಗಿರಬೇಕು: ಸಾ.ರಾ ಮಹೇಶ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

Mysuru: ಮುನಿರತ್ನ ಪರ ಬಿಜೆಪಿ ಬ್ಯಾಟಿಂಗ್‌ ಸಲ್ಲದು: ಎಂಎಲ್‌ಸಿ ವಿಶ್ವನಾಥ್‌

22-hunsur-1

Hunsur: ಕಾರು ಪಲ್ಟಿಯಾಗಿ ಎಳನೀರು ವ್ಯಾಪಾರಿ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.