Theft Case: ಒಂಟಿ ಮನೆಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ
Team Udayavani, Aug 4, 2024, 1:18 PM IST
ಬೆಂಗಳೂರು: ಬೀಗ ಹಾಕಿದ ಮನೆಗಳನ್ನೇ ಟಾರ್ಗೆಟ್ ಮಾಡಿ ಕನ್ನ ಹಾಕುತ್ತಿದ್ದ ವೃತ್ತಿಪರ ಕಳ್ಳನನ್ನು ಸುಬ್ರಮಣ್ಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು ಮೂಲದ ಯಶವಂತಪುರ ನಿವಾಸಿ ಅರ್ಜುನ್ ಬಂಧಿತ. ಬಂಧಿತನಿಂದ 4.5 ಲಕ್ಷ ರೂ. ಮೌಲ್ಯದ 68 ಗ್ರಾಂ ಚಿನ್ನಾಭರಣ, 180 ಗ್ರಾಂ ಬೆಳ್ಳಿ ಸಾಮಗ್ರಿ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್ ಅನ್ನು ಜಪ್ತಿ ಮಾಡಲಾಗಿದೆ. 20 ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ ಅರ್ಜುನ್ ಯಶವಂತಪುರದಲ್ಲಿ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದ. ಪ್ರಾರಂಭದಲ್ಲಿ ಕೊರಿಯರ್ ಸರ್ವೀಸ್ ಮಾಡುತ್ತಿದ್ದ ಆರೋಪಿಯು ನಂತರ ಮನೆಗಳ್ಳತನ ಮಾಡಲು ಪ್ರಾರಂಭಿಸಿದ್ದ. ಈ ಹಿಂದೆ ಜೈಲಿಗೆ ಹೋಗಿ ಇತ್ತೀಚೆಗೆ ಹೊರ ಬಂದಿದ್ದ. ಈತನ ವಿರುದ್ಧ ತಲಘಟ್ಟಪುರ, ತಿಲಕ್ನಗರ, ಮಹಾಲಕ್ಷ್ಮೀಪುರ ಪೊಲೀಸ್ ಠಾಣೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿವೆ.
ಬೀಗ ಹಾಕಿರುವ ಒಂಟಿ ಮನೆಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಆರೋಪಿಯು, ಕದ್ದ ಚಿನ್ನಾಭರಣಗಳನ್ನು ತನ್ನ ಪರಿಚಿತ ಸೇಟುವೊಬ್ಬರಿಗೆ ಮಾರಾಟ ಮಾಡುತ್ತಿದ್ದ. ಬಂದ ದಡ್ಡಲ್ಲಿ ಮೋಜು-ಮಸ್ತಿ ಮಾಡುತ್ತಿದ್ದ. ಈ ನಡುವೆ ಕೆಲ ದಿನಗಳ ಹಿಂದೆ ಸುಬ್ರಹ್ಮಣ್ಯನಗರದ ಆರ್.ಪಿ. ರಸ್ತೆಯಲ್ಲಿ ಅನುಮಾನಾಸ್ಪದವಾಗಿ ದ್ವಿಚಕ್ರವಾಹನದಲ್ಲಿ ಓಡಾಡುತ್ತಿದ್ದ ಆರೋಪಿ ಅರ್ಜುನ್ನನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ ಆತ ಕಳ್ಳತನ ನಡೆಸಿರುವ ಸಂಗತಿ ಬೆಳಕಿಗೆ ಬಂದಿದೆ.
ಮನೆ ಕೆಲಸದವಳ ಮನೆಗೆ ಕನ್ನ ಹಾಕಿ ಸಿಕ್ಕಿ ಬಿದ್ದ !:
ಗಾಯತ್ರಿನಗರದ ನಿವಾಸಿ ಬಸಮ್ಮ (50) ಎಂಬುವವರು ಮನೆ ಕೆಲಸ ಮಾಡಿಕೊಂಡು ಜೀವನ ನಿರ್ವಹಣೆ ಮಾಡಿದ್ದರು. ಮನೆ ಕೆಲಸ ಮಾಡಿ ಕೂಡಿಟ್ಟ ದುಡ್ಡಲ್ಲಿ ಚಿನ್ನಾಭರಣ ಖರೀದಿಸಿ ಮನೆಯ ಬೀರುವಿನಲ್ಲಿ ಇಟ್ಟಿದ್ದರು. ಎಂದಿನಂತೆ ಜು.25ರಂದು ಮನೆಗೆ ಬೀಗ ಹಾಕಿ ಮನೆ ಕೆಲಸಕ್ಕೆ ಬಸಮ್ಮ ಹೋಗಿದ್ದರು. ಆ ವೇಳೆ ಅದೇ ರಸ್ತೆಯಲ್ಲಿ ಬೀಗ ಹಾಕಿದ ಮನೆಗಳನ್ನು ಗುರುತಿಸುತ್ತಿದ್ದ ಆರೋಪಿ ಅರ್ಜುನ್ ಬಸಮ್ಮನ ಮನೆಯ ಬೀಗ ಒಡೆದು ಬೀರುವಿನಲ್ಲಿದ್ದ 4.20 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣ ದೋಚಿದ್ದ. ಮಧ್ಯಾಹ್ನ ಬಸಮ್ಮ ಮನೆಗೆ ಬಂದಾಗ ಕಳ್ಳತನವಾಗಿರುವುದು ಆಕೆಯ ಗಮನಕ್ಕೆ ಬಂದು ಸುಬ್ರಹ್ಮಣ್ಯನಗರ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.