Bidadi; ಪ್ರಾಮಾಣಿಕ ಎಂದು ಅಜ್ಜಯ್ಯನ ಮೇಲೆ ಪ್ರಮಾಣ ಮಾಡಿ; ಡಿಕೆಶಿಗೆ ಎಚ್‌ ಡಿಕೆ ಸವಾಲು

ರಾಜಕೀಯ ನಿವೃತ್ತಿ ಸವಾಲು ಹಾಕಿದ ಕುಮಾರಸ್ವಾಮಿ

Team Udayavani, Aug 4, 2024, 4:50 PM IST

Bidadi; ಪ್ರಾಮಾಣಿಕ ಎಂದು ಅಜ್ಜಯ್ಯನ ಮೇಲೆ ಪ್ರಮಾಣ ಮಾಡಿ; ಡಿಕೆಶಿಗೆ ಎಚ್‌ ಡಿಕೆ ಸವಾಲು

ರಾಮನಗರ (ಬಿಡದಿ): ನಿಮ್ಮದೆಲ್ಲ ಬಿಚ್ಚಿಡುತ್ತೇನೆ ಎಂದು ಹೇಳಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಗುಡುಗಿದ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು, ನಾನು ನಿಮ್ಮದನ್ನು ಬಿಚ್ಚಲು ಹೋದರೆ ಪುಟಗಟ್ಟಲೆ ಇದೆ ಎಂದು ಎಚ್ಚರಿಕೆ ಕೊಟ್ಟರು.

ಬಿಡದಿಯಲ್ಲಿ ಮೈಸೂರು ಚಲೋ ಎರಡನೇ ದಿನದ ಪಾದಯಾತ್ರೆಗೆ ಚಾಲನೆ ಕೊಟ್ಟ ನಂತರ ಬಹಿರಂಗ ಸಭೆಯಲ್ಲಿ ಭಾಷಣ ಮಾಡಿದರು.

ಆ ಹೆಣ್ಣುಮಗಳನ್ನು ಕಿಡ್ನಾಪ್ ಮಾಡಿ ಬೆದರಿಸಿ ಅವರಪ್ಪನಿಂದ ಸದಾಶಿವನಗರದಲ್ಲಿ ನಿವೇಶನ ಬರೆಸಿಕೊಂಡಿದ್ದೀರಿ. ಆ ಹೆಣ್ಣುಮಗಳನ್ನು ಕಿಡ್ನ್ಯಾಪ್ ಮಾಡಿ ಬೆದರಿಕೆ ಹಾಕಿದ್ದು ನೀವೇ ಅಲ್ಲವೇ. ಅದೇನೋ ಬಿಚ್ಚುತ್ತೇನೆ ಅಂದ್ಯಲ್ಲಪ್ಪ, ಬಿಚ್ಚು ನೋಡೋಣ, ನಂದು ವಿಜಯೆಂದ್ರದ್ದು. ಆಮೇಲೆ ನಿನ್ನದನ್ನು ಹೇಗೆ ಬಿಚ್ಚುತೀನಿ ಎಂದು ನೋಡುವಿಯಂತೆ. ಏನಿದೆ ನಿಮ್ಮ ಬಳಿ ಬಿಚ್ಚಿ, ನಾನಿರೋದು ಬೀದಿಯಲ್ಲಿ, ನೀನಿರೋದು ಗಾಜಿನ ಮನೆಯಲ್ಲಿ ಎಂದು ಡಿಕೆಶಿ ವಿರುದ್ಧ ಎಚ್ಡಿಕೆ ವಾಗ್ದಾಳಿ ನಡೆಸಿದರು.

ನಾನು ಬಿಚ್ಚುವುದಕ್ಕೆ ಹೋದರೆ ನಿಮ್ಮದು ಪುಟಗಟ್ಟಲೆ ಇದೆ. ಅಜ್ಜಯ್ಯನ ಬಗ್ಗೆ ಈ ಡಿ.ಕೆ.ಶಿವಕುಮಾರ್ ಗೆ ಭಕ್ತಿ ಗೌರವ ಇದ್ದರೆ ಪ್ರಮಾಣ ಮಾಡಲಿ. ಅಜ್ಜಯ್ಯನ ಬಗ್ಗೆ ನನಗೆ ಗೌರವ, ಭಕ್ತಿ ಎರಡೂ ಇದೆ. ನಾನು ಪ್ರಾಮಾಣಿಕವಾಗಿ ಬೆಳೆದು ಬಂದಿದೇನೆ ಎಂದು ಅವರ ಮೇಲೆ ಪ್ರಮಾಣ ಮಾಡಿ. ನಾನೂ ಪ್ರಮಾಣ ಮಾಡುತ್ತೇನೆ ಎಂದು ಡಿಸಿಎಂ ಡಿಕೆಶಿಗೆ ನೇರ ಸವಾಲು ಹಾಕಿದರು.

ಈ ಡಿಕೆಶಿಗೆ ಅಜ್ಜಯ್ಯನ ಶಾಪವೂ ಆರಂಭವಾಗಿದೆ. ಎಷ್ಟು ಮನೆಗಳನ್ನು ಒಡೆದು ನೀವು ಬೆಳೆದಿದ್ದೀರಿ ಎಂದು ನನಗೆ ಗೊತ್ತಿದೆ. ನಾನು ಏನೂ ಮಾಡಿಯೇ ಇಲ್ಲ, ಸ್ವಚ್ಚವಾಗಿದ್ದೇನೆ ಎಂದು ಅಜ್ಜಯನ ಮುಂದೆ ನಿಂತು ಪ್ರಮಾಣ ಮಾಡಲಿ ಎಂದು ಸವಾಲೆಸೆದರು.

ನಾನು ಯಾರಿಗೂ ದ್ರೋಹ ಮಾಡಲಿಲ್ಲ. ಮಾಡುವುದೂ ಇಲ್ಲ. ಜನರ ಆಶೀರ್ವಾದವೇ ನನ್ನ ಬಲ, ಅದೇ ನನ್ನ ಬೆಳೆಸಿದೆ. ನಾನು ಯಡಿಯೂರಪ್ಪ ಅವರಿಗೂ ದ್ರೋಹ ಮಾಡಲಿಲ್ಲ. ಆ ಸಂದರ್ಭದಲ್ಲಿ ಅನಿವಾರ್ಯ ಕಾರಣಗಳಿಂದ ಅಧಿಕಾರ ಹಂಚಿಕೆ ಆಗಲಿಲ್ಲ. ನಾನು ಯಡಿಯೂರಪ್ಪ ಅವರಿಗೆ ಯಾವತ್ತೂ ದ್ರೋಹ ಮಾಡಿಲ್ಲ. ಬಿಜೆಪಿ‌-ಜೆಡಿಎಸ್ ಮೈತ್ರಿ ಕಾಂಗ್ರೆಸ್ ನಿದ್ದೆಗೆಡಿಸಿದೆ. ಅದಕೆ ಶಿವಕುಮಾರ್ ನಮ್ಮ ಮೈತ್ರಿ ಬಗ್ಗೆ ಹೊಟ್ಟೆ ಉರಿ ಅನುಭವಿಸುತ್ತಿದ್ದಾರೆ ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ನನಗೆ ಮತ್ತೆ ಅಧಿಕಾರಕ್ಕೆ ಬರುವ ಆಸೆ ಇಲ್ಲ. ಈಗಾಗಲೇ ನಾನು ಎರಡು ಸಲ ಸಿಎಂ ಆಗಿದ್ದೇನೆ. ಆದರೆ ರಾಜ್ಯಕ್ಕೆ ಒಳ್ಳೆಯದಾಗಬೇಕು. ನಾನು ಅಧಿಕಾರ ಕೇಳಿ ನಿಮ್ಮ ಬಳಿ ಬಂದಿರಲಿಲ್ಲ. ನೀವೇ ಗೋಗರೆದು ಸಿಎಂ ಮಾಡಿದಿರಿ ಶಿವಕುಮಾರ್. ನೀವು ಮರೆತು ಹೋಗಿದ್ದೀರಿ, ಒಮ್ಮೆ ನೆನಪುವಾಡಿಕೊಳ್ಳಿ ಎಂದು ಕುಮಾರಸ್ವಾಮಿ ಅವರು ಡಿಕೆಶಿಗೆ ಟಾಂಗ್ ಕೊಟ್ಟರು.

ಡಾ.ಮಂಜುನಾಥ್ ಅವರು ಡಾಕ್ಟರ್ ಕೆಲಸ ಮಾತ್ರ ಮಾಡ್ತಿಲ್ಲ. ಅವರಲ್ಲೂ ರಾಜಕೀಯದ ರಕ್ತ ಹರಿಯುತ್ತಿದೆ. ಅವರ ಬಗ್ಗೆಯೂ ಶಿವಕುಮಾರ್ ಮಾತಾಡಿದ್ದಾರೆ. ಅವರ ಹತಾಶೆ, ನಿರಾಶೆ ನನಗೆ ಅರ್ಥವಾಗುತ್ತದೆ ಎಂದು ಕುಮಾರಸ್ವಾಮಿ ಅವರು ತಿರುಗೇಟು ಕೊಟ್ಟರು.

ಗೃಹ ಸಚಿವರಾಗಿ ಒಬ್ಬ ದಲಿತ ಪೊಲೀಸ್ ಅಧಿಕಾರಿ ರಕ್ಷಣೆ ಮಾಡಲು ಪರಮೇಶ್ವರ್ ಅವರಿಂದ ಆಗಲಿಲ್ಲ. ಅಲ್ಲಿಗೆ ಅವರು ಇಪ್ಪತ್ತು ಲಕ್ಷ ಕೊಟ್ಟು ಪೋಸ್ಟಿಂಗ್ ಮಾಡಿಸಿಕೊಂಡಿದ್ದಾರೆ. ಈಗ ಅವರು ಅಲ್ಲೇ ಉಳಿಯಲು ಮೂವತ್ತು ಲಕ್ಷ ಕೊಡಬೇಕಂತೆ. ಒಬ್ಬ ಪೋಲಿಸ್ ಅಧಿಕಾರಿಯನ್ನೇ ರಕ್ಷಣೆ ಮಾಡಲಾಗದ ಈ ಸರ್ಕಾರಕ್ಕೆ ಜನರ ರಕ್ಷಣೆ ಮಾಡಲು ಸಾಧ್ಯವೇ ಎಂದು ಕೇಂದ್ರ ಸಚಿವರು ಪ್ರಶ್ನೆ ಮಾಡಿದರು.

ರಾಜಕೀಯ ನಿವೃತ್ತಿಯ ಸವಾಲು ಹಾಕಿದ ಎಚ್‌ ಡಿಕೆ

ದಲಿತರಿಗೆ ಸೇರಬೇಕಾದ 68 ಎಕರೆ ಜಮೀನು ಡಿಸಿಎಂ ಲಪಟಾಯಿಸಿದ್ದಾರೆ. ದಲಿತರಿಗೆ ಸಿಗಬೇಕಾದ ನಿವೇಶನಗಳನ್ನು ಡಿಕೆ ಶಿವಕುಮಾರ್ ಹೊಡೆದು ಕೊಂಡಿದ್ದಾರೆ. ಅಸಲಿ ಸೊಸೈಟಿಯನ್ನು ನಕಲಿ ಮಾಡಿ ದಲಿತರ ಭೂಮಿ ಲಪಟಾಯಿಸಿದ್ದಾರೆ. ಇವರ ಬಳಿ ‌ನಾನು ಹೇಳಿಸಿಕೊಳ್ಳುವ ಅಗತ್ಯ ಇಲ್ಲ ಎಂದರು.

ನಾನು ಸಿನಿಮಾ ವಿತರಕನಾಗಿದ್ದಾಗ ಭೂಮಿ‌ ಖರೀದಿಸಿದೆ. ಕೇತಗಾನಹಳ್ಳಿಯಲ್ಲಿ ನಾನು ಚಲನಚಿತ್ರ ಪ್ರದರ್ಶಕನಾಗಿದ್ದಾಗ ಚುನಾವಣೆಗೆ ನಿಲ್ಲುವ 15 ವರ್ಷಗಳ ಹಿಂದೆ 45 ಎಕರೆ ಜಮೀನು ತಗೊಂಡಿದ್ದೇನೆ. ಇದನ್ನು ನಾನು ಎಲ್ಲೂ ಮುಚ್ಚಿಟ್ಟಿಲ್ಲ. ಯಾರಿಗೂ ಮೋಸ ಮಾಡಲಿಲ್ಲ ನಾನು. ನಾನು ವಂಚನೆ ಮಾಡಿ ಭೂಮಿ ಖರೀದಿಸಿದ್ದಿದ್ದರೆ ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ಕೇಂದ್ರ ಸಚಿವರು ಸವಾಲು ಹಾಕಿದರು.

ಸರ್ಕಾರದ ಬಗ್ಗೆ ನಮಗೆ ಅಸೂಯೆ ಇಲ್ಲ

ಈ ಪಾದಯಾತ್ರೆ ಅಸೂಯೆಯಿಂದ ಹಮ್ಮಿಕೊಂಡಿದ್ದಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನವೇ ಅಂಗಡಿ ಬಾಗಿಲು ತೆರೆದು ಕೂತಿದೆ. ಗ್ಯಾರಂಟಿಗಳಿಂದ ಬದಲಾವಣೆಗಳನ್ನು ತಂದಿದ್ದೇವೆ ಅನ್ಕೊಂಡಿದ್ದೇವೆ. ಗ್ಯಾರಂಟಿಗಳಿಂದ ರಾಜ್ಯವನ್ನು ದರಿದ್ರದತ್ತ ತಗೊಂಡು ಹೋಗಿದ್ದಾರೆ. ಮಂತ್ರಿಗಳಲ್ಲಿ ಭ್ರಷ್ಟಾಚಾರ ನಡೆಸಲು ಪೈಪೋಟಿ ನಡೀತಿದೆ ಎಂದು  ಕುಮಾರಸ್ವಾಮಿ ಆರೋಪಿಸಿದರು.

ಬಿಜೆಪಿ ಸರ್ಕಾರದಲ್ಲಿ ಅಕ್ರಮ ನಡೆದಿತ್ತು ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಇವರಿಗೆ ಒಂದೇ ಒಂದು ದಾಖಲೆ ಕೊಡಲು ಆಗಿಲ್ಲ ಎಂದು ಟಾಂಗ್ ಕೊಟ್ಟರು.

ಮೂಡಾ ಬಗ್ಗೆ ದಾಖಲೆ ಸಮೇತ ಮಾತನಾಡಿದ್ದೇವೆ

ಮೂಡಾ ಬಗ್ಗೆ ನಾನು, ನಮ್ಮ ಶಾಸಕರು ಇವರ ಅಕ್ರಮದ ಬಗ್ಗೆ ದಾಖಲೆಗಳ ಸಮೇತ ಮಾತನಾಡಿದೇವೆ. ಮೈಸೂರು ನಗರದ ಉಸ್ತುವಾರಿಯನ್ನು ಸಿಎಂ ಅವರೇ ವಹಿಸಿಕೊಂಡಿದ್ದಾರೆ. ಸಿಎಂ ತಮ್ಮ ಪತ್ನಿ ಹೆಸರಲ್ಲಿ 15 ಸೈಟು ಪಡೆಯಲು ನಮ್ಮ ವಿರೋಧ ಇಲ್ಲ. ಆದರೆ ಅಧಿಕಾರ ದುರುಪಯೋಗ ಪಡಿಸಿಕೊಂಡು ಸೈಟು ಪಡೆದಿದ್ದಾರೆ. ಇಲ್ಲಿ ನಿಂಗ, ಜವರ, ದೇವರಾಜ, ದಲಿತ ಅನ್ನೋ ಪ್ರಶ್ನೆ ಇಲ್ಲ. ನಕಲಿ ದಾಖಲೆ ಸೃಷ್ಟಿ 15 ಸೈಟುಗಳನ್ನು ತಗೊಂಡಿದ್ದಾರೆ. ಇದನ್ನು ಸಿಎಂ ಕಾನೂನು ಬಾಹಿರವಾಗಿ ತಗೊಂಡಿದ್ದಾರೆ ಎಂದು ಕುಮಾರಸ್ವಾಮಿ ಅವರು ದೂರಿದರು.

ಡಿಕೆಶಿ ಪ್ರಶ್ನೆಗಳಿಗೆ ಉತ್ತರಿಸುತ್ತೇನೆ; ಏಕವಚನ ನನಗೂ ಬರುತ್ತದೆ

ಡಿಸಿಎಂ ಡಿಕೆ ಶಿವಕುಮಾರ್ ಅವರು ಏ‌ನು ಪ್ರಶ್ನೆಗಳನ್ನು ಹಾಕಿದಾರೋ ಅದಕ್ಕೆ ಉತ್ತರ ಕೊಡಲು ಇಲ್ಲಿದ್ದೇನೆ. ನನ್ನ ಬಗ್ಗೆ, ವಿಜಯೇಂದ್ರ ಬಗ್ಗೆ ಡಿಸಿಎಂ ಏಕವಚನದಲ್ಲಿ ಮಾತಾಡಿದ್ದಾರೆ. ನಾವೂ ಹಳ್ಳಿಯ ಮಕ್ಕಳೇ ನಿಮಗಿಂತಲೂ ಏಕವಚನದಲ್ಲಿ ಮಾತಾಡಲು ನಮಗೂ ಗೊತ್ತು. ಆದರೆ ಆ ಕೆಳಮಟ್ಟಕ್ಕೆ ನಾವು ಇಳಿಯಲ್ಲ ಎಂದು ಎಚ್ಚರಿಕೆ ಕೊಟ್ಟರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ’ ಮಾಜಿ ಸಚಿವರಾದ ಬಿ.ಶ್ರೀರಾಮುಲು, ಸಿ.ಸಿ.ಪಾಟೀಲ್, ಎ.ಮಂಜು, ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಸಂಸದರಾದ ಡಾ.ಡಾ.ಸಿ.ಎನ್.ಮಂಜುನಾಥ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಕೃಷ್ಣಪ್ಪ,  ಹರೀಶ್ ಗೌಡ, ಮಾಜಿ ಶಾಸಕ ಮಂಜುನಾಥ್

ಸೇರಿದಂತೆ ಎರಡೂ ಪಕ್ಷಗಳ ಶಾಸಕರು, ಸಂಸದರು, ನಾಯಕರು, ಅಸಂಖ್ಯಾತ ಕಾರ್ಯಕರ್ತರು ನಮ್ಮ ಜತೆಯಲ್ಲಿ ಇದ್ದರು.

ಟಾಪ್ ನ್ಯೂಸ್

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್‌?

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.