Manipal: ಚಿರತೆಗಾಗಿ ಶೋಧ ಕಾರ್ಯ ಮುಂದುವರಿಕೆ
Team Udayavani, Aug 5, 2024, 6:30 AM IST
ಮಣಿಪಾಲ: ಹಲವು ದಿನಗಳಿಂದ ಮಣಿಪಾಲ ಸುತ್ತಮುತ್ತಲು ಆತಂಕ ಮೂಡಿಸಿದ್ದ ಚಿರತೆಯ ಚಲನವಲನ ಇತ್ತೀಚೆಗೆ ಪತ್ತೆಯಾಗಿಲ್ಲ. ಇಲಾಖೆ ವತಿಯಿಂದ ಗಸ್ತು ವೀಕ್ಷಣೆಯಲ್ಲಿ ಶೋಧ ಕಾರ್ಯ ಮುಂದುವರಿದಿದೆ ಎಂದು ಇಲಾಖೆ ಸಿಬಂದಿ ತಿಳಿಸಿದ್ದಾರೆ.
ಕೆಲವು ದಿನಗಳ ಹಿಂದೆ ಪೆರಂಪಳ್ಳಿಯ ಮನೆ ಬಳಿ ಚಿರತೆ ಪತ್ತೆಯಾಗಿರುವ ಬಗ್ಗೆ ಸಿಸಿಟಿವಿಯಲ್ಲಿ ದೃಶ್ಯ ದಾಖಲಾಗಿತ್ತು. ಅನಂತರ ಮಣಿಪಾಲದ ಇತರೆ ಕಡೆಗಳಲ್ಲಿ ಚಿರತೆ ಓಡಾಡಿವೆ ಎಂದು ಸಾರ್ವಜನಿಕರು ಮಾಹಿತಿ ನೀಡಿದ್ದು, ಅರಣ್ಯ ಇಲಾಖೆ ಸಿಬಂದಿ ಚಿರತೆ ಹೆಚ್ಚು ಓಡಾಡುವ ಎಂಡ್ ಪಾಯಿಂಟ್ ಪ್ರದೇಶದ ಬಳಿ ಬೋನು ಇರಿಸಲಾಗಿತ್ತು.
ಸೋಮವಾರ ಎಂಡ್ಪಾಯಿಂಟ್ ಬಳಿ ಇರಿಸಲಾದ ಬೋನು ಪರಿಶೀಲಿಸಿ, ಸ್ಥಳೀಯರೊಂದಿಗೂ ಚರ್ಚಿಸಿ ಬೋನನ್ನು ಇಲ್ಲಿಯೇ ಮುಂದುವರಿಸಬೇಕೇ ಅಥವಾ ಇನ್ನೊಂದು ಕಡೆಗೆ ಸ್ಥಳಾಂತರಿಸುವ ಬಗ್ಗೆ ನಿರ್ಧರಿಸಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.