Udupi ನಗರದಲ್ಲಿ ಮತ್ತೆ ಕಳ್ಳತನ; ಬುಡ್ನಾರು ಬಳಿಯ ಮನೆಗೆ ನುಗ್ಗಿದ ಕಳ್ಳರು

ಮನೆಯಲ್ಲಿ ಇಟ್ಟಿರುವ ಹಣದ ಪ್ರಮಾಣ ಎಷ್ಟು? ಇತರ ವಸ್ತುಗಳ ಬಗ್ಗೆ ಪೊಲೀಸರಿಂದ ಮಾಹಿತಿ ಸಂಗ್ರಹ

Team Udayavani, Aug 5, 2024, 7:20 AM IST

Thief

ಉಡುಪಿ: ಖಾಲಿ ಮನೆಗಳನ್ನೇ ಗುರುತಿಸಿಕೊಂಡು ಕಳ್ಳತನ ನಡೆಸುವ ಘಟನೆ ಉಡುಪಿ ನಗರದಲ್ಲಿ ಮತ್ತೆ ಮುಂದುವರಿದಿದೆ.

ನಗರದ ಬುಡ್ನಾರಿನಲ್ಲಿ ಶನಿವಾರ ತಡರಾತ್ರಿ ಖಾಲಿ ಮನೆಗೆ ನುಗ್ಗಿದ ಕಳ್ಳರು ಲ್ಯಾಪ್‌ಟಾಪ್‌, ಟ್ಯಾಬ್‌, ಸುಮಾರು ಅಂದಾಜು 1.5 ಲ.ರೂ. ನಗದು, ಚಿನ್ನಾಭರಣಗಳು ಕಳವು ನಡೆದಿರುವ ಸಾಧ್ಯತೆಗಳಿವೆ ಎಂದು ಮನೆಯ ಸಂಬಂಧಿಕರು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸಿದ್ದು, ಕದ್ದ ಸೊತ್ತುಗಳ ನಿಖರ ಮೌಲ್ಯ ಇನ್ನಷ್ಟೇ ತಿಳಿದುಬರಬೇಕಿದೆ ಎಂದು ನಗರ ಠಾಣೆಯ ಪೊಲೀಸ್‌ ನಿರೀಕ್ಷಕರು ತಿಳಿಸಿದ್ದಾರೆ.

ಸಂಬಂಧಿಕರ ಮನೆಗೆ ತೆರಳಿದ್ದರು
ದಿ| ಕೆ. ಮೊಹಮ್ಮದ್‌ ಅವರಿಗೆ ಸೇರಿದ ಡ್ರೀಮ್‌ ಹೌಸ್‌ನಲ್ಲಿ ಈ ಘಟನೆ ನಡೆದಿದೆ. ಕಳವು ನಡೆದ ಮನೆಯಲ್ಲಿ ತಾಯಿ ಹಾಗೂ ಮಗಳು ಇಬ್ಬರೇ ವಾಸಮಾಡಿಕೊಂಡಿದ್ದರು. ಕೆ. ಮೊಹಮ್ಮದ್‌ ಅವರು 6 ತಿಂಗಳ ಹಿಂದೆಯಷ್ಟೇ ನಿಧನ ಹೊಂದಿದ್ದರು. ಶನಿವಾರ ಸಂಜೆ ತಾಯಿ ಹಾಗೂ ಮಗಳು ಮಂಗಳೂರಿನಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದರು. ಮನೆಯವರು ನಾವಿಲ್ಲದಿದ್ದರೂ ಹೊರ ಭಾಗದಲ್ಲಿ ಸ್ವಚ್ಛ  ಮಾಡುವಂತೆ ತಿಳಿಸಿದ ಮೇರೆಗೆ ಕೆಲಸದಾಕೆ ರವಿವಾರ ಬೆಳಗ್ಗೆ ಬಂದಿದ್ದಾಗ ಬಾಗಿಲು ಒಡೆದಿತ್ತು. ಕೂಡಲೇ ಕೆಲಸದಾಕೆ ಈ ವಿಚಾರವನ್ನು ಪಕ್ಕದ ಮನೆಯವರ ಬಳಿ ತಿಳಿಸಿದ ಮೇರೆಗೆ ಈ ಘಟನೆ ಬೆಳಕಿಗೆ ಬಂದಿದೆ.

ಕಳ್ಳರು ಮನೆಯ ಚಿಲಕ ತೆಗೆದು ಒಳಭಾಗದಲ್ಲಿದ್ದ ಕಪಾಟಿನಲ್ಲಿ ಇಟ್ಟಿದ್ದ ಹಣವನ್ನು ತೆಗೆದುಕೊಂಡು ಹೋಗಿದ್ದಾರೆ ಎನ್ನ ಲಾಗುತ್ತಿದೆ. ಮನೆಯಲ್ಲಿ ಇಟ್ಟಿರುವ ಹಣದ ಪ್ರಮಾಣ ಎಷ್ಟು ಹಾಗೂ ಇತರ ವಸ್ತುಗಳು ಏನಿತ್ತು ಎಂಬುವುದರ ಬಗ್ಗೆ ರವಿವಾರ ತಡರಾತ್ರಿಯವರೆಗೂ ಪೊಲೀಸರು ಮಾಹಿತಿ ಸಂಗ್ರಹಿಸಿದರು. ಸಂಪೂರ್ಣ ಮಾಹಿತಿ ಲಭಿಸಿದ ಬಳಿಕ ಎಫ್ಐಆರ್‌ ದಾಖಲಿಸ ಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಶ್ವಾನ ದಳ, ಬೆರಳಚ್ಚು ತಜ್ಞರು ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಮುಸುಕುಧಾರಿಗಳ ಕೃತ್ಯವೇ?
ಬ್ರಹ್ಮಗಿರಿಯಲ್ಲಿ ಕಳ್ಳತನ ನಡೆಸಿದ ಮುಸುಕುಧಾರಿಗಳೇ ಈ ಕೃತ್ಯ ಎಸಗಿದಂತೆ ಕಾಣುತ್ತಿಲ್ಲ ಎಂಬುವುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಒಂದು ಅಥವಾ ಇಬ್ಬರು ಕಳ್ಳರು ಸೇರಿ ಈ ಕೃತ್ಯ ಎಸಗಿರುವ ಸಾಧ್ಯತೆಗಳಿವೆ ಎಂಬುವುದು ಪೊಲೀಸರ ಅಭಿಪ್ರಾಯ. ಸ್ಥಳೀಯವಾಗಿ ಈ ಭಾಗದಲ್ಲಿ ಯಾವುದೇ ಸಿಸಿಟಿವಿ ದೃಶ್ಯಾವಳಿಗಳು ಇಲ್ಲದ ಕಾರಣ ಪೊಲೀಸರು ಹೆದ್ದಾರಿ ಬದಿಯಲ್ಲಿರುವ ಅಂಗಡಿ ಹಾಗೂ ಸನಿಹದಲ್ಲಿರುವ ಇತರ ಅಂಗಡಿ, ಮನೆಗಳ ಸಿಸಿ ಟಿವಿ ದೃಶ್ಯಾವಳಿಗಳಲ್ಲಿ ಕಳ್ಳರ ಚಲನವಲನ ಗುರುತಿಸುವ ಕೆಲಸದಲ್ಲಿ ನಿರತರಾಗಿದ್ದಾರೆ.

ಅನುಮಾನಾಸ್ಪದ ವ್ಯಕ್ತಿ ಪತ್ತೆ?
ಘಟನೆ ನಡೆಯುವ ಮುನ್ನ ಶನಿವಾರ ಹಗಲಿನಲ್ಲಿ ವ್ಯಕ್ತಿಯೋರ್ವ ಸ್ಕೂಟರ್‌ನಲ್ಲಿ ಬಂದು ಅನುಮಾನಸ್ಪದವಾಗಿ ವರ್ತಿಸುತ್ತಿದ್ದ ಬಗ್ಗೆ ಪಕ್ಕದ ಮನೆಯ ಸಿಸಿ ಟಿವಿ ಕೆಮರಾದಲ್ಲಿ ದಾಖಲಾಗಿದೆ. ಟಾರ್ಚ್‌ಲೈಟ್‌ ಹಿಡಿದು ಒಬ್ಬನೇ ವ್ಯಕ್ತಿ ಕೃತ್ಯ ನಡೆಸಿರುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.

ಇನ್ನೂ ಸಿಗದ ಮುಸುಕುಧಾರಿಗಳ ಸುಳಿವು!
ಬ್ರಹ್ಮಗಿರಿ ಬಳಿಯ 3 ಅಪಾರ್ಟ್‌ಮೆಂಟ್‌ಗಳಿಗೆ ನುಗ್ಗಿದ ಮುಸುಕುದಾರಿಗಳ ಪತ್ತೆ ಕಾರ್ಯ ಇನ್ನೂ ನಡೆದಿಲ್ಲ. ಆ. 31ರ ತಡರಾತ್ರಿ ಈ ಘಟನೆ ನಡೆದಿದ್ದು, ವಿವಿಧ ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಪೊಲೀಸರಿಗೆ ಅಚ್ಚರಿ ಕಾದಿತ್ತು. ಕಳ್ಳರು ಬ್ರಹ್ಮಗಿರಿ ಸರ್ಕಲ್‌ನತ್ತಲೂ ಹೋಗಿಲ್ಲ. ಅಂಬಲಪಾಡಿ ಜಂಕ್ಷನ್‌ಗೂ ತೆರಳಿಲ್ಲ. ಇತ್ತ ಮಾರುತಿ ಟ್ರೂ ವ್ಯಾಲ್ಯೂ ಭಾಗಕ್ಕೂ ಕಾಲಿಟ್ಟಿಲ್ಲ. ಆದರೆ ಅವರು ಯಾವ ಮಾರ್ಗದಲ್ಲಿ ಎಸ್ಕೇಪ್‌ ಆಗಿರಬಹುದು ಎಂಬವುದೇ ಪೊಲೀಸರಿಗೆ ಗೊಂದಲ ಶುರುವಾಗಿದೆ.

ಫ್ಲ್ಯಾಟ್‌ ಹಿಂಭಾಗದ ಮೂಲಕ ಶ್ಯಾಮಿಲಿ ಹಾಲ್‌ನ ಬಳಿಯಿಂದ ಕರಾವಳಿ ಬೈಪಾಸ್‌ ಅಥವಾ ಕೆಎಸ್ಸಾರ್ಟಿಸಿ ಬಸ್‌ ತಂಗುದಾಣದ ಮೂಲಕ ಹಾದು ಹೋಗಿದ್ದಾರೆಯೇ ಎಂಬ ಅನುಮಾನಗಳೂ ಹುಟ್ಟಿಕೊಂಡಿವೆ. ಪೊಲೀಸರು ಈ ನಿಟ್ಟಿನಲ್ಲಿಯೂ ವಿವಿಧ ಅಂಗಡಿ, ಮನೆಗಳ ಸಿಸಿ ಟಿವಿ ದೃಶ್ಯಾವಳಿಗಳ ತಪಾಸಣೆಯಲ್ಲಿ ನಿರತರಾಗಿದ್ದಾರೆ. ಕಳ್ಳರು ಭಾರೀ ಯೋಜನೆ ರೂಪಿಸಿಕೊಂಡೇ ಚಾಣಾಕ್ಷತನದಿಂದ ಕೃತ್ಯ ನಡೆಸಿರುವುದು ಮೇಲ್ನೋಟಕ್ಕೆ ತಿಳಿಯುತ್ತಿದೆ.

ಟಾಪ್ ನ್ಯೂಸ್

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

Stock Market: ಸಾರ್ವಕಾಲಿಕ ದಾಖಲೆ ಬರೆದ ಷೇರುಪೇಟೆ; ಹೂಡಿಕೆದಾರರಿಗೆ 6 ಲಕ್ಷ ಕೋಟಿ ರೂ. ಲಾಭ

1-frr

Bail ಪಡೆದು ಬಿಡುಗಡೆಯಾದ ಬೆನ್ನಲ್ಲೇ ಮುನಿರತ್ನ ಮತ್ತೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್‌ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!

ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್‌ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.