Grant Problem: ಅಮೃತ ರೈತ ಉತ್ಪಾದಕ ಯೋಜನೆಗೆ ಅನುದಾನ ಬಾಕಿ; ಸಿಬಂದಿ ವೇತನಕ್ಕೂ ಸಂಕಷ್ಟ

ಅನುದಾನ ಬಿಡುಗಡೆಗೊಳ್ಳದ್ದರಿಂದ ಸದಸ್ಯರಿಗೆ ಯಾವುದೇ ಚಟುವಟಿಕೆ ಸಾಧ್ಯವಾಗುತ್ತಿಲ್ಲ

Team Udayavani, Aug 5, 2024, 7:15 AM IST

Agri

ಕೋಟ: ರೈತರು, ಮೀನುಗಾರರು, ತೋಟಗಾರಿಕೆ ಕ್ಷೇತ್ರ, ನೇಕಾರ ವರ್ಗವನ್ನು ಸಂಘಟಿಸಿ ಅವರ ಉತ್ಪಾದಕತೆಯನ್ನು ಹೆಚ್ಚಿಸುವುದು ಹಾಗೂ ಅವರ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸುವ ನಿಟ್ಟಿನಲ್ಲಿ ಆರಂಭಗೊಂಡಿರುವ ಅಮೃತ ರೈತ ಉತ್ಪಾದಕ ಯೋಜನೆ ಅನುದಾನ ಕೊರತೆಯಿಂದ ಸಂಕಷ್ಟದಲ್ಲಿದೆ.

2021-22ರಲ್ಲಿ 75ನೇ ಸ್ವಾತಂತ್ರ್ಯ  ದಿನಾಚರಣೆ ಅಂಗವಾಗಿ ಅಮೃತ ರೈತ ಉತ್ಪಾದಕ ಯೋಜನೆ ಜಾರಿಗೆ ರಾಜ್ಯ ಸರಕಾರ ಆದೇಶಿಸಿತ್ತು. ಮೂರು ವರ್ಷಗಳಲ್ಲಿ ರಾಜ್ಯವ್ಯಾಪಿ 750 ಸಂಸ್ಥೆಗಳನ್ನು ರಚಿಸುವುದು, ಯೋಜನೆ ಅಡಿಯಲ್ಲಿ ನೋಂದಣಿಯಾದ ರೈತರಿಂದ ಷೇರುಗಳನ್ನು ಸಂಗ್ರಹಿಸಿ, ಸಂಘದ ಸದಸ್ಯರಿಗೆ ನೇರ ಮಾರುಕಟ್ಟೆ ಬೆಂಬಲ ನೀಡುವುದರ ಮೂಲಕ ಮಧ್ಯವರ್ತಿಗಳ ಹಾವಳಿ ತಪ್ಪಿಸುವುದು, ರೈತರ ಉತ್ಪನ್ನ ಹಾಗೂ ಮೀನುಗಾರರ ಸಿಗಡಿ, ಮೀನು, ಪಚ್ಚಿಲೆ ಮೊದಲಾದವುಗಳಿಗೆ ಉತ್ತಮ ಮಾರುಕಟ್ಟೆ ಒದಗಿಸುವುದು, ಮೀನಿನ ಮೌಲ್ಯವ ರ್ಧಿತ ಉತ್ಪನ್ನಗಳನ್ನು ಉತ್ಪಾದಿಸಿ ಸೂಕ್ತ ಬೆಲೆ ದೊರಕಿಸಿಕೊಡುವುದು, ಮಾಹಿತಿ, ಮಾರ್ಗದರ್ಶನಕ್ಕಾಗಿ ತರಬೇತಿ, ಪ್ರಾತ್ಯಕ್ಷಿಕೆಗಳನ್ನು ನಡೆಸುವುದು ಮೊದ ಲಾದ ಕಾರ್ಯಕ್ರಮಗಳನ್ನು ಯೋಜನೆ ಯಡಿ ಅಳವಡಿಸಿಕೊಳ್ಳಲಾಗಿತ್ತು.

ನೇಕಾರರಿಗೂ ಇಲಾಖೆಯಡಿ ಕೆಲವು ಯೋಜನೆಗಳಿದ್ದವು. ಸರಕಾರದ ನಿಯಮದಂತೆ ಈ ಸಂಸ್ಥೆಗಳಿಗೆ ಮೂರು ವರ್ಷಗಳ ಅವಧಿಗೆ ಒಂದೊಂದು ಸಂಘಕ್ಕೆ ತಲಾ 30 ಲ.ರೂ.ಗಳ ಅನುದಾನ ನೀಡುವ ಯೋಜನೆ ಇತ್ತು. ಹೀಗೆ ಯೋಜನೆ ಯಡಿ ರಾಜ್ಯವ್ಯಾಪಿ 486 ಸಂಸ್ಥೆಗಳು ರಚನೆಗೊಂಡಿದ್ದವು. ಉಡುಪಿ, ದ.ಕ. ಜಿಲ್ಲೆಯಲ್ಲಿ ಬೇರೆಬೇರೆ ವಿಭಾಗದ 10 ಸಂಘಗಳು ಸ್ಥಾಪನೆಯಾಗಿದ್ದವು.

ಕಾರ್ಯಚಟುವಟಿಕೆಗೆ ಹಿನ್ನಡೆ
ಪ್ರಸ್ತುತ ಮೂರು ವರ್ಷದಿಂದ ಕಂಪೆನಿಗಳು ಷೇರುದಾರರಿಗೆ ಅನೇಕ ಸೌಲಭ್ಯಗಳನ್ನು ನೀಡಿದೆ ಹಾಗೂ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಸರಕಾರದ ನಿಯಮದಂತೆ ಇವುಗಳಿಗೆ 30 ಲಕ್ಷ ಅನುದಾನ ಸಿಗಬೇಕಿತ್ತು. ಆದರೆ ಇಲ್ಲಿಯ ತನಕ ಕೈ ಸೇರಿರುವುದು ಕೇವಲ 9,71,860 ರೂ. ಮಾತ್ರ. ಹೀಗಾಗಿ 20,28,140 ರೂ ಅನುದಾನ ಬಾಕಿ ಇದೆ.

ರಾಜ್ಯದ 486 ರೈತ ಉತ್ಪಾದಕ ಕಂಪೆನಿಗಳು ಅನುದಾನ ಬಿಡುಗಡೆಗೊಳ್ಳದ ಕಾರಣ ತಮ್ಮ ಸದಸ್ಯರಿಗೆ ಯಾವುದೇ ಚಟುವಟಿಕೆ ನಡೆಸಲು ಸಾಧ್ಯವಾಗುತ್ತಿಲ್ಲ. ಸಂಸ್ಥೆಗಳಲ್ಲಿ ಕಾರ್ಯನಿರ್ವ ಹಿಸುತ್ತಿರುವ ಮುಖ್ಯ ಕಾರ್ಯನಿರ್ವ ಹಣಾಧಿಕಾರಿಗಳು, ಡಾಟಾ ಎಂಟ್ರಿ ಆಪರೇಟರ್‌ಗಳಿಗೆ ಹಲವು ತಿಂಗಳು ಗಳಿಂದ ಸಂಬಳ ಸಿಕ್ಕಿಲ್ಲ. ಸಂಸ್ಥೆಯ ಆದಾಯ ಕುಂಠಿತಗೊಳ್ಳುವುದಲ್ಲದೆ, ಸಂಸ್ಥೆಯನ್ನು ನಂಬಿಕೊಂಡು ಚಟುವಟಿಕೆ ನಡೆಸುತ್ತಿರುವ ರೈತರ ಆದಾಯವೂ ಕುಂಠಿತವಾಗಿರುತ್ತದೆ. ಇದೇ ಕಾರಣದಿಂದ ಕೆಲವು ಸಂಸ್ಥೆಗಳು ಕಾರ್ಯಸ್ಥಗಿತಗೊಳಿಸಿದೆ.

“ಮೀನುಗಾರಿಕೆಯ ರೈತ ಉತ್ಪಾದಕ ಸಂಸ್ಥೆಗಳಿಗೆ ಜಲಾನಯನ ಇಲಾಖೆ ಮೂಲಕ ಅನುದಾನ ಬಿಡುಗಡೆಗೊಂಡು ನಮ್ಮ ಇಲಾಖೆಯಿಂದ ಜಮೆಯಾಗುತ್ತದೆ. ಸರಕಾರದಿಂದ ಅನುದಾನ ಬಿಡುಗಡೆಯಾಗಲು ಬಾಕಿ ಇದ್ದು, ಸಮಸ್ಯೆ ಬಗ್ಗೆ ಈಗಾಗಲೇ ಹಲವು ಸಂಸ್ಥೆಗಳು ಮನವಿ ಮಾಡಿದೆ.”  – ದಿನೇಶ್‌ ಕುಮಾರ್‌, ಮೀನುಗಾರಿಕೆ ಇಲಾಖೆ ನಿರ್ದೇಶಕರು

ಕೇಂದ್ರ ಸಂಯೋಜಿತ ಸಂಸ್ಥೆಗಳಿಗೆ ಸಮಸ್ಯೆ ಇಲ್ಲ
ರಾಜ್ಯ ಹಾಗೂ ಕೇಂದ್ರ ಸರಕಾರ ಗಳಲ್ಲಿ ಇಂಥ ಯೋಜನೆಗಳಿವೆ. ಕೇಂದ್ರ ಸರಕಾರ ಸಂಯೋಜಿತ ಸಂಸ್ಥೆಗಳಿಗೆ ಕಾಲಕಾಲಕ್ಕೆ ಅನುದಾನ ತಲುಪುತ್ತಿದೆ. ರಾಜ್ಯದಲ್ಲಿ ಮಾತ್ರ ಸಮಸ್ಯೆ ಇದೆ.

ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

Davanagere: Judicial custody of 14 accused in Ganesh procession stone pelting case

Davanagere: ಗಣೇಶ ಮೆರವಣಿಗೆ ಕಲ್ಲು ತೂರಾಟ ಪ್ರಕರಣದಲ್ಲಿ 14 ಆರೋಪಿಗಳಿಗೆ ನ್ಯಾಯಾಂಗ ಬಂಧನ

ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

Hubli; ಶಾಸಕ ಮುನಿರತ್ನ ಒಬ್ಬ ನಾಲಾಯಕ್, ಅಯೋಗ್ಯ: ಶಾಸಕ ಪ್ರಸಾದ ಅಬ್ಬಯ್ಯ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Belve ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 108 ಆ್ಯಂಬುಲೆನ್ಸ್‌ ಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.