Wonder Woman: ಸೇನಾಧಿಕಾರಿಯನ್ನು ಹೊಗಳಿದ ಆನಂದ್‌ ಮಹೀಂದ್ರ; ಯಾರು ಈ ಮೇಜರ್‌ ಸೀತಾ


Team Udayavani, Aug 5, 2024, 12:55 PM IST

Wonder Woman: Anand Mahindra Praises Army Officer; Who is this Major Sita Ashok Shelke?

ವಯನಾಡ್: ‌ಭೀಕರ ಗುಡ್ಡ ಕುಸಿತಕ್ಕೆ ಸಾಕ್ಷಿಯಾದ ಕೇರಳದ ವಯನಾಡಿನ (Wayanad) ಚೂರಮಲಾ ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಿದ ಬೈಲಿ ಸೇತುವೆಯ ರೈಲಿಂಗ್‌ ನಲ್ಲಿ ನಿಂತಿರುವ ಮಹಿಳಾ ಸೇನಾ ಅಧಿಕಾರಿಯ ಫೋಟೋವೊಂದು ಇದೀಗ ಭಾರಿ ವೈರಲ್‌ ಆಗುತ್ತಿದೆ.

ಭೂಕುಸಿತದಿಂದ ಭಾರೀ ನಷ್ಟ ಸಂಭವಿಸಿದ ಚೂರಮಲಾದಲ್ಲಿ ಸೇನೆಯು ಕೇವಲ 31 ಗಂಟೆಯ ಅವಧಿಯೊಳಗೆ ನೂತನ ಸೇತುವೆಯನ್ನು ನಿರ್ಮಿಸಿದೆ. ಈ ಸೇನಾ ತಂಡದಲ್ಲಿರುವ ಏಕೈಕ ಮಹಿಳೆ ಮೇಜರ್‌ ಸೀತಾ ಅಶೋಕ್‌ ಶೆಲ್ಕೆ (Major Sita Ashok Shelke) ಅವರ ಫೋಟೋ ಇದೀಗ ಇಂಟರ್ನೆಟ್‌ ಸೆನ್ಸೇಶನ್‌ ಆಗಿದೆ.

ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಮೇಜರ್ ಶೆಲ್ಕೆ ಮತ್ತು ಭಾರತೀಯ ಸೇನೆಯ ಬಗ್ಗೆ ಬಳಕೆದಾರರು ಮೆಚ್ಚುಗೆ ಸೂಚಿಸುತಿದ್ದಾರೆ.

ಉದ್ಯಮಿ ಆನಂದ್‌ ಮಹೀಂದ್ರ (Anand Mahindra) ಅವರು ಮೇಜರ್‌ ಸೀತಾ ಶೆಲ್ಕೆ ಅವರ ಫೋಟೋವನ್ನು ಶೇರ್‌ ಮಾಡಿದ್ದು, ಸೇನಾಧಿಕಾರಿಯನ್ನು ʼವಂಡನ್‌ ವುಮನ್‌ʼ ಎಂದು ಹೇಳಿದ್ದಾರೆ.

“ದಿ ವಂಡರ್‌ ವುಮನ್‌ ಆಫ್‌ ವಯನಾಡ್.‌ ಡಿಸಿ ಸೂಪರ್‌ ಹೀರೋಸ್‌ ಗಳ ಅಗತ್ಯವಿಲ್ಲ. ನಾವು ಅವರನ್ನು ಇಲ್ಲಿ ನಿಜ ಜೀವನದಲ್ಲಿ ಹೊಂದಿದ್ದೇವೆ.” ಎಂದು ಆನಂದ್‌ ಮಹೀಂದ್ರ ಹೇಳಿದರು.

ಮೇಜರ್‌ ಸೀತಾ ಅಶೋಕ್‌ ಶೆಲ್ಕೆ ಅವರು ಮಹಾರಾಷ್ಟ್ರದ ಅಹಮದ್‌ ನಗರದ ಗಾಡಿಲ್ಗೌನ್‌ ಗ್ರಾಮದವರಾಗಿದ್ದಾರೆ. ಬೆಂಗಳೂರಿನಲ್ಲಿರುವ ಸೇನೆಯ ಮದ್ರಾಸ್‌ ಇಂಜಿನಿಯರಿಂಗ್‌ ಗ್ರೂಪ್‌ (ಎಂಇಜಿ) 70 ಜನರ ತಂಡದಲ್ಲಿರುವ ಏಕೈಕ ಮಹಿಳಾ ಅಧಿಕಾರಿಯಾಗಿದ್ದಾರೆ.

ಸೇತುವೆಯ ನಿರ್ಮಾಣವನ್ನು ಕೇವಲ 31 ಗಂಟೆಗಳಲ್ಲಿ ಪೂರ್ಣಗೊಳಿಸಲು ಮದ್ರಾಸ್ ಇಂಜಿನಿಯರ್ ಗ್ರೂಪ್ (MEG) ಬೃಹತ್ ಅವಶೇಷಗಳು, ಬೇರುಸಹಿತ ಮರಗಳು ಮತ್ತು ವೇಗವಾಗಿ ಹರಿಯುವ ನದಿಯನ್ನು ಎದುರಿಸಿ ದೃಢತೆ ಮತ್ತು ಕೌಶಲ್ಯವನ್ನು ಪ್ರದರ್ಶಿಸಿತು. ಇದರಲ್ಲಿ ಮೇಜರ್ ಸೀತಾ ಅಶೋಕ್ ಶೆಲ್ಕೆ ಅವರು ಪ್ರಮುಖ ಪಾತ್ರವನ್ನು ನಿರ್ವಹಿಸಿದರು.

ಇದರ ಬಗ್ಗೆ ಪಿಟಿಐ ಸುದ್ದಿಸಂಸ್ಥೆ ಜತೆಗೆ ಮಾತನಾಡಿದ ಮೇಜರ್ ಸೀತಾ‌ ಶೆಲ್ಕೆ, “ನಾನು ಇಲ್ಲಿ ಏಕೈಕ ಮಹಿಳೆ ಎಂದು ಭಾವಿಸುವುದಿಲ್ಲ. ನಾನಿಲ್ಲ ಸೈನಕರಾಗಿದ್ದೇವೆ. ಭಾರತೀಯ ಸೇನೆಯನ್ನು ಪ್ರತಿನಿಧಿಸಿಕೊಂಡು ಇಲ್ಲಿದ್ದೇವೆ, ಈ ಕಾರ್ಯಾಚರಣೆ ತಂಡದ ಭಾಗವಾಗಲು ಹೆಮ್ಮೆ ಎನಿಸುತ್ತದೆ” ಎಂದರು.

ಸೇತುವೆ ನಿರ್ಮಾಣದ ಬಗ್ಗೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳು, ರಾಜ್ಯ ಸರ್ಕಾರದ ಅಧಿಕಾರಿಗಳು ಮತ್ತು ನಮಗೆ ಸಹಾಯ ಮಾಡಿ ಎಲ್ಲರಿಗೂ ಧನ್ಯವಾದ ಹೇಳ ಬಯಸುತ್ತೇನೆ” ಎಂದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.