Delhi:ಕಾನೂನು ಸಮರದಲ್ಲಿ AAPಗೆ ಹಿನ್ನಡೆ- ಲೆ| ಗವರ್ನರ್‌ ಅಧಿಕಾರ ಎತ್ತಿಹಿಡಿದ ಸುಪ್ರೀಂ


Team Udayavani, Aug 5, 2024, 3:23 PM IST

Delhi:ಕಾನೂನು ಸಮರದಲ್ಲಿ AAPಗೆ ಹಿನ್ನಡೆ- ಲೆ| ಗವರ್ನರ್‌ ಅಧಿಕಾರ ಎತ್ತಿಹಿಡಿದ ಸುಪ್ರೀಂ

ನವದೆಹಲಿ: ಸರ್ಕಾರದ ಒಪ್ಪಿಗೆ ಇಲ್ಲದೆ ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ಅವರು ದೆಹಲಿ ಮುನ್ಸಿಪಲ್‌ ಕಾರ್ಪೋರೇಶನ್‌ (MCD)ಗೆ ಸದಸ್ಯರನ್ನು ನೇಮಕ ಮಾಡುವ ಅಧಿಕಾರ ಹೊಂದಿರುವುದಾಗಿ ಸುಪ್ರೀಂಕೋರ್ಟ್‌ ಸೋಮವಾರ (ಆಗಸ್ಟ್‌ 05) ಸ್ಪಷ್ಟಪಡಿಸಿದ್ದು, ಇದರೊಂದಿಗೆ ಆಡಳಿತರೂಢ ಆಮ್‌ ಆದ್ಮಿ ಪಕ್ಷಕ್ಕೆ ಭಾರೀ ಹಿನ್ನಡೆಯಾದಂತಾಗಿದೆ.

ಸುಪ್ರೀಂಕೋರ್ಟ್‌ ಆದೇಶದ ಪ್ರಕಾರ, ದೆಹಲಿ ಮುನ್ಸಿಪಲ್‌ ಕಾರ್ಪೋರೇಶನ್‌ ಕಾಯ್ದೆ ಪ್ರಕಾರ ಲೆಫ್ಟಿನೆಂಟ್‌ ಗವರ್ನರ್‌ ಈ ಅಧಿಕಾರವನ್ನು ಹೊಂದಿದ್ದಾರೆ. ಕಾಯ್ದೆ ಅನ್ವಯ ದೆಹಲಿ ಲೆ. ಗವರ್ನರ್‌ ದೆಹಲಿ ಸರ್ಕಾರದ ಸಲಹೆಯನ್ನು ಅನುಸರಿಸಬೇಕಾದ ಅಗತ್ಯವಿಲ್ಲ. ಇದೊಂದು ಶಾಸನಬದ್ಧ ಅಧಿಕಾರವಾಗಿದೆ. ಲೆಫ್ಟಿನೆಂಟ್‌ ಗವರ್ನರ್‌ ಅವರು ದೆಹಲಿ ಸರ್ಕಾರದ ಸಲಹೆಯನ್ನು ಅನುಸರಿಸಬೇಕೆಂಬುದು ಕಡ್ಡಾಯವಲ್ಲ ಎಂದು ಹೇಳಿದೆ.

“ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ಅವರದ್ದು ಲಾಟರಿಯ ಅಧಿಕಾರ ಎಂದು ಗ್ರಹಿಸುವುದು ತಪ್ಪಾಗುತ್ತದೆ. ಸಂಸತ್‌ ಈ ಕಾನೂನನ್ನು ರೂಪಿಸಿದೆ. ಕಾನೂನಿನ ಪ್ರಕಾರ ಲೆಫ್ಟಿನೆಂಟ್‌ ಗವರ್ನರ್‌ ಅವರು ಅಧಿಕಾರವನ್ನು ಬಳಸುವುದು ಅವರ ವಿವೇಚನೆಗೆ ಬಿಟ್ಟಿದ್ದು, ಇದು ಕಲಂ 239ರ ಅಡಿ ವಿನಾಯ್ತಿ ಹೊಂದಿದೆ. ಇದು 1993ರ ದೆಹಲಿ ಮುನ್ಸಿಪಲ್‌ ಕಾರ್ಪೋರೇಶನ್‌ ಕಾಯ್ದೆಯಲ್ಲಿ ಸದಸ್ಯರ ನಾಮನಿರ್ದೇಶನ ಮಾಡುವ ಅಧಿಕಾರವನ್ನು ಲೆಫ್ಟಿನೆಂಟ್‌ ಗವರ್ನರ್‌ ಗೆ ನೀಡಿದೆ ಎಂದು ಸುಪ್ರೀಂಕೋರ್ಟ್‌ ವಿವರಿಸಿದೆ.

ಸುಪ್ರೀಂಕೋರ್ಟ್‌ ಸಿಜೆಐ ಚಂದ್ರಚೂಡ್‌, ಜಸ್ಟೀಸ್‌ ಪಿಎಸ್‌ ನರಸಿಂಹ, ಜಸ್ಟೀಸ್ ಜೆಬಿ ಪರ್ಡಿವಾಲಾ ಅವರನ್ನೊಳಗೊಂಡ ಪೀಠವು 2023ರ ಮೇ 17ರಂದು ತೀರ್ಪನ್ನು ಕಾಯ್ದಿರಿಸಿತ್ತು. ದೆಹಲಿ ಸರ್ಕಾರದ ಸಲಹೆ ಪಡೆಯದೇ ಅಂದಿನ ಲೆಫ್ಟಿನೆಂಟ್‌ ಗವರ್ನರ್‌ ವಿಕೆ ಸಕ್ಸೇನಾ ಅವರು ದೆಹಲಿ ಮಹಾನಗರ ಪಾಲಿಕೆಗೆ ಸದಸ್ಯರನ್ನು ನೇಮಕ ಮಾಡಿರುವುದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿತ್ತು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.