Udupi;ಸುನಿಲ್ ಕುಮಾರ್ ಧರ್ಮದ ಹೆಸರಲ್ಲಿ ಸುಳ್ಳುಹೇಳಿ ಗೆದ್ದಿದ್ದಾರೆ: ಮುನಿಯಾಲ್ ಉದಯ ಶೆಟ್ಟಿ

ಮಹಜರು ಮತ್ತು ಮೂರ್ತಿ ತೆರವಿಗೆ ನಾನು ಮುಸ್ಲಿಮರನ್ನು ಕರೆದುಕೊಂಡು ಹೋಗಿಲ್ಲ

Team Udayavani, Aug 5, 2024, 5:24 PM IST

Udupi;ಸುನಿಲ್ ಕುಮಾರ್ ಧರ್ಮದ ಹೆಸರಲ್ಲಿ ಸುಳ್ಳುಹೇಳಿ ಗೆದ್ದಿದ್ದಾರೆ: ಮುನಿಯಾಲ್ ಉದಯ ಶೆಟ್ಟಿ

ಉಡುಪಿ: ಜನಗಳ ಧಾರ್ಮಿಕ ಭಾವನೆಯನ್ನು ಕದಡಿ ಪರಶುರಾಮ ಥೀಂ ಪಾರ್ಕ್ (Parashurama Theme Park) ನಿರ್ಮಾಣ ಮಾಡಲಾಗಿದೆ. ಸುನಿಲ್ ಕುಮಾರ್ (Sunil Kumar) ಅವರು ಶಾಸಕನಾಗಲು ಸುಳ್ಳು ಹೇಳಿ ನಕಲಿ ಮೂರ್ತಿ ಸೃಷ್ಟಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಮುನಿಯಾಲ್ ಉದಯ್ ಕುಮಾರ್ ಶೆಟ್ಟಿ (Muniyal Uday Kumar Shetty) ಆರೋಪಿಸಿದರು.

ಉಡುಪಿಯಲ್ಲಿ ಸೋಮವಾರ (ಆ.05) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾನ ಮರ್ಯಾದೆ ಇದ್ದರೆ ಸುನಿಲ್ ಕುಮಾರ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ದೇವರ ಹೆಸರಲ್ಲಿ, ಧಾರ್ಮಿಕತೆಗೆ ಮೋಸ ಮಾಡಬಾರದು ಎಂದು ಕಿಡಿಕಾರಿದರು.

ಒಂದು ವರ್ಷದ ಹೋರಾಟಕ್ಕೆ ಒಂದು ಹಂತದ ಜಯ ಸಿಕ್ಕಿದೆ. ಈಗ ನಡೆಯುತ್ತಿರುವ ಬೆಳವಣಿಗೆಗಳನ್ನು ನೋಡುವಾಗ ಮನಸ್ಸಿಗೆ ಘಾಸಿಯಾಗುತ್ತದೆ. ಪರಶುರಾಮನ ಮೂರ್ತಿಯ ಬಿಡಿ ಭಾಗಗಳನ್ನು ಪೊಲೀಸರು ವಶಪಡಿಸಿದ್ದಾರೆ. ಅರ್ಧ ಮೂರ್ತಿ ಸಿದ್ಧ ಇರುವಾಗಲೇ, ಮತ್ತೆ ಎರಡು ಕಾಲು ತಯಾರಿಸಿದ್ದು ಯಾಕೆ ಎಂದು ತಿಳಿಯುತ್ತಿಲ್ಲ. ಹಾಗಾದರೆ ಬೆಟ್ಟದ ಮೇಲಿರುವ ಅರ್ಧಮೂರ್ತಿ ಕೂಡ ನಕಲಿಯೇ? ಎಂದು ಪ್ರಶ್ನಿಸಿದರು.

ಪರಶುರಾಮ ಥೀಂ ಪಾರ್ಕ್ ಉದ್ಘಾಟನಾ ಕಾರ್ಯಕ್ರಮಕ್ಕೆ 2.50 ಕೋಟಿ ಖರ್ಚು ಮಾಡಿದ್ದಾರೆ. ಕಂಚಿನ ಪ್ರತಿಮೆ ವೆಚ್ಚಕ್ಕಿಂತ ಹೆಚ್ಚು ಉದ್ಘಾಟನೆಗೆ ಖರ್ಚಾಗಿದೆ. ವರ್ಕ್ ಆರ್ಡರ್ ಗಿಂತ ಮೊದಲು ಒಂದು ಕೋಟಿ ಅಡ್ವಾನ್ಸ್ ಹಣ ಕೊಡಲಾಗಿದೆ. ಕಾನೂನು ಗಾಳಿಗೆ ತೂರಿ ಗೋಮಾಳದಲ್ಲಿ ಥೀಂ ಪಾರ್ಕ್ ನಿರ್ಮಿಸಲಾಗಿದೆ. ಫೈಬರ್ ನ ನಕಲಿ ಮೂರ್ತಿ ಸೃಷ್ಟಿಸಿ ಹಿಂದೂ ಧರ್ಮದ ಧಾರ್ಮಿಕ ಭಾವನೆಗೆ ಧಕ್ಕೆ ತರಲಾಗಿದೆ ಎಂದು ದೂರಿದರು.

ಪೊಲೀಸರು ಮಹಜರಿಗೆ ಕರೆದಕ್ಕೆ ನಾನು ಬೆಂಗಳೂರಿನ ಆರ್ಟ್ ಗ್ಯಾಲರಿಗೆ ಹೋಗಿದ್ದೇನೆ. ಮಹಜರು ಪ್ರಕ್ರಿಯೆಗೆ ಸಾಮಾನ್ಯ ಮನುಷ್ಯನಾಗಿ ಹೋಗಿದ್ದೇನೆ. ನನ್ನ ಕಾರು ಚಾಲಕ ಲಿಂಗಾಯತ, ಮತ್ತೋರ್ವ ಮೊಗವೀರ ಸಮುದಾಯದ ಗೆಳೆಯ. ಮಹಜರು ಮತ್ತು ಮೂರ್ತಿ ತೆರವಿಗೆ ನಾನು ಮುಸ್ಲಿಮರನ್ನು ಕರೆದುಕೊಂಡು ಬಂದಿಲ್ಲ ಎಂದು ಹೇಳಿದರು.

ಪರಶುರಾಮ ಮೂರ್ತಿಯ ಶಿಲ್ಪಿ ಕೃಷ್ಣ ನಾಯ್ಕ್ ದೊಡ್ಡ ಡ್ರಾಮಾ ಕ್ರಿಯೇಟರ್. ಕೃಷ್ಣ ನಾಯ್ಕ್ ಚಡಪಡಿಸುವಿಕೆ ವರ್ತನೆ ನೋಡಿ ನಾನು ಅಲ್ಲಿಂದ ವಾಪಾಸ್ ಬಂದಿದ್ದೇನೆ‌. ಅವರು ಬಂದು ನಮ್ಮದು ತಪ್ಪಾಯ್ತು ಚುನಾವಣೆ ಗೆಲ್ಲಲು ನಾವು ಹೀಗೆ ಮಾಡಿದ್ದೇವೆ ಎಂದು ಹೇಳಲಿ. ನಾಳೆ ಬಂದರೂ ಅವರನ್ನು ಸ್ವಾಗತಿಸಿ ಕಂಚಿನ ಮೂರ್ತಿ ಪ್ರತಿಷ್ಠಾಪನೆ ಮಾಡಲು ಪ್ರಯತ್ನ ಪಡುತ್ತೇವೆ ಎಂದರು.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.