Bangla ಕ್ಷಿಪ್ರ ಮಿಲಿಟರಿ ಕ್ರಾಂತಿ; ವಿಮಾನ ಪ್ರಯಾಣ- ಪದಚ್ಯುತ ಹಸೀನಾಗೆ ಭಾರತದಲ್ಲಿ ಆಶ್ರಯ?
ಭಾನುವಾರ ಪ್ರತಿಭಟನೆ ತೀವ್ರ ಹಿಂಸಾಚಾರಕ್ಕೆ ತಿರುಗಿ, ಸುಮಾರು 100 ಮಂದಿ ಸಾವನ್ನಪ್ಪಿದ್ದರು.
Team Udayavani, Aug 5, 2024, 5:19 PM IST
ನವದೆಹಲಿ: ದೇಶಾದ್ಯಂತ ಸರ್ಕಾರಿ ವಿರೋಧಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ನೂರಾರು ಜನರ ಪ್ರಾಣ ಹಾನಿಗೆ ಕಾರಣವಾಗಿದ್ದು, ಏತನ್ಮಧ್ಯೆ ಕ್ಷಿಪ್ರ ಸೇನಾ ಕ್ರಾಂತಿಯ ಪರಿಣಾಮ ಸೋಮವಾರ (ಆಗಸ್ಟ್ 05) ಶೇಖ್ ಹಸೀನಾ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ, ದೇಶವನ್ನು ತೊರೆದಿರುವುದಾಗಿ ವರದಿ ತಿಳಿಸಿದೆ.
ಭಾರತದಲ್ಲಿ ಹಸೀನಾಗೆ ಆಶ್ರಯ:
ಶೇಖ್ ಹಸೀನಾ ಮತ್ತು ಆಕೆಯ ಸಹೋದರಿ ಬಾಂಗ್ಲಾದೇಶದ ಮಿಲಿಟರಿ ವಿಮಾನದ ಮೂಲಕ ಭಾರತದತ್ತ ತೆರಳಿರುವುದಾಗಿ ವರದಿ ವಿವರಿಸಿದೆ. ಏರ್ ಲೈನ್ ಟ್ರ್ಯಾಕರ್ ಫ್ಲೈಟ್ ರಾಡಾರ್ ಫೂಟೇಜ್ ನಲ್ಲಿ ಬಾಂಗ್ಲಾ ಸೇನೆಯ Lockheed C-130J ಹರ್ಕ್ಯೂಲಸ್ ಭಾರತದತ್ತ ಪ್ರಯಾಣಿಸುತ್ತಿದ್ದು, ಜಾರ್ಖಂಡ್ ನಲ್ಲಿ ಹಾರಾಟ ನಡೆಸುತ್ತಿರುವುದು ಸೆರೆಯಾಗಿದೆ ಎಂದು ವರದಿ ವಿವರಿಸಿದೆ.
ಈ ಮೊದಲು ಕೆಲವು ಮಾಧ್ಯಮಗಳಲ್ಲಿ, ಶೇಖ್ ಹಸೀನಾ ಪಶ್ಚಿಮಬಂಗಾಳದತ್ತ ವಿಮಾನದಲ್ಲಿ ತೆರಳಿರುವುದಾಗಿ ತಿಳಿಸಿತ್ತು. ಆದರೆ ಬಾಂಗ್ಲಾ ಮಿಲಿಟರಿ ವಿಮಾನ ಬಂಗಾಳ ಹಾದು ಹೋಗಿರುವುದು ಏರ್ ಲೈನ್ ಡಾಟಾದಲ್ಲಿರುವುದಾಗಿ ವರದಿ ಹೇಳಿದೆ.
2009ರಿಂದ ಬಾಂಗ್ಲಾದೇಶದ ಚುಕ್ಕಾಣಿ ಹಿಡಿದಿರುವ ಶೇಖ್ ಹಸೀನಾ ಪ್ರಧಾನಿ ಹುದ್ದೆಯಿಂದ ಕೆಳಗಿಳಿಯಬೇಕೆಂದು ಒಂದು ತಿಂಗಳಿನಿಂದ ಪ್ರತಿಭಟನೆ ನಡೆಯುತ್ತಿತ್ತು. ಆದರೆ ಭಾನುವಾರ ಪ್ರತಿಭಟನೆ ತೀವ್ರ ಹಿಂಸಾಚಾರಕ್ಕೆ ತಿರುಗಿದ್ದು, ಸುಮಾರು 100 ಮಂದಿ ಸಾವನ್ನಪ್ಪಿದ್ದ ಘಟನೆ ನಡೆದಿತ್ತು.
ಮೂಲಗಳ ಪ್ರಕಾರ, ಘಟನೆ ನಡೆಯುತ್ತಿದ್ದಂತೆಯೇ ಮಿಲಿಟರಿ ಮುಖ್ಯಸ್ಥ ಶೇಖ್ ಹಸೀನಾ ತಕ್ಷಣವೇ ರಾಜೀನಾಮೆ ನೀಡಿ, ದೇಶ ತೊರೆಯುವಂತೆ ಸೂಚನೆ ನೀಡಿರುವುದಾಗಿ ತಿಳಿಸಿದೆ. ಬಾಂಗ್ಲಾದೇಶ ಸ್ವತಂತ್ರವಾಗಲು ಹೋರಾಡಿದ್ದ ಹಸೀನಾ ತಂದೆ, ಬಾಂಗ್ಲಾ ಮಾಜಿ ಅಧ್ಯಕ್ಷ ಶೇಖ್ ಮುಜಿಬುರ್ ರೆಹಮಾನ್ ಅವರ ಪ್ರತಿಮೆಯನ್ನು ಪ್ರತಿಭಟನಾಕಾರರು ಒಡೆದು ಹಾಕಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Explode in Lebanon: ಪೇಜರ್ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು
Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್ ನ ಮೊಸ್ಸಾದ್!
Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್ ಸ್ಟಾರ್ ಬಂಧನ
PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.