Wrestling Quarter-Final; ನೋವಿನಿಂದಾಗಿ ಗೆಲ್ಲುವ ಪಂದ್ಯ ಸೋತು ಕಣ್ಣೀರಿಟ್ಟ ನಿಶಾ ದಹಿಯಾ

ಸ್ಕೀಟ್‌ ಮಿಶ್ರ ಡಬಲ್ಸ್‌ನಲ್ಲಿ 1 ಅಂಕದಿಂದ ತಪ್ಪಿದ ಕಂಚು ; ಭಾರತಕ್ಕೆ ನೋವಿನ ಕ್ಷಣ

Team Udayavani, Aug 5, 2024, 10:18 PM IST

1-ccc

ಪ್ಯಾರಿಸ್‌: ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ಭಾರತದ ಕುಸ್ತಿ ಅಭಿಯಾನದ ಮೊದಲ ದಿನವೇ ಭಾರತಕ್ಕೆ ನೋವಿನ ಕ್ಷಣ ಎದುರಾಯಿತು. ಪದಕ ಗೆಲ್ಲುವ ಅವಕಾಶವಿದ್ದರೂ ನಿಶಾ ದಹಿಯಾ ಬಲಗೈಯ ತೀವ್ರ ತೀವ್ರ ನೋವಿನಿಂದಾಗಿ ಪಂದ್ಯವನ್ನು ಬಿಟ್ಟುಕೊಟ್ಟರು. ನೋವಿಗೆ ತುತ್ತಾಗಿದ್ದರೂ ಜಿದ್ದಿಗೆ ಬಿದ್ದು ಹೋರಾಡಿ ಭಾರೀ ಮೆಚ್ಚುಗೆ ಪಡೆದರು. ಸೋಲಿನ ಬಳಿಕ ಕಣ್ಣೀರಿಟ್ಟರು.

ಅರ್ಹತಾ ಸುತ್ತಿನ ಪಂದ್ಯದಲ್ಲಿ ನಿಶಾ ಉಕ್ರೇನ್‌ನ ಸೋವಾ ರಿಜ್ಕೋ ಟೆಟಿಯಾನಾ ವಿರುದ್ಧ 6-4 ಅಂಕಗಳ ಅಂತರದಿಂದ ಜಯಗಳಿಸಿ ಕ್ವಾರ್ಟರ್‌ ಫೈನಲ್‌ಗೆ ಬಂದಿದ್ದರು.

ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಉತ್ತರ ಕೊರಿಯಾದ ಪಾಕ್‌ ಸೋಲ್‌ ಗಮ್‌ ಅವರನ್ನು ಎದುರಿಸಿದ ನಿಶಾ 6 ಅಂಕಗಳ ಮುನ್ನಡೆ ಸಾಧಿಸಿದ್ದರು. 2 ಅಂಕ ಬಿಟ್ಟುಕೊಟ್ಟ ಬಳಿಕ ಮತ್ತೆರಡು ಅಂಕ ಗಳಿಸಿ 8-2 ಅಂತದಿಂದ ಮುನ್ನಡೆ ಗಳಿಸಿಕೊಂಡರು.ನಂತರ ದುರಂತ ಎಂಬಂತೆ ಬಲಗೈನ ತೀವ್ರ ನೋವಿಗೆ ಗುರಿಯಾಗಿ 3 ಬಾರಿ ಚಿಕಿತ್ಸೆ ಪಡೆದುಕೊಂಡರು.

ಛಲ ಬಿಡದೇ ಹೋರಾಡಿದ ನಿಶಾ ಕೊನೆಯ 30 ಸೆಕೆಂಡ್‌ಗಳಲ್ಲಿ ರಿ 8 ಅಂಕಗಳನ್ನು ಬಿಟ್ಟುಕೊಟ್ಟು ಪಂದ್ಯವನ್ನೂ 10-8 ಅಂಕಗಳ ಅಂತರದಿಂದ ಬಿಟ್ಟುಕೊಟ್ಟರು. ನಿಶಾ ಗಾಯದ ಲಾಭದಿಂದಾಗಿ ಪಾಕ್‌ ಸೋಲ್‌ ಗಮ್‌ ಸುಲಭವಾಗಿ ಜಯಗಳಿಸಿ ಸೆಮಿಫೈನಲ್‌ ಪ್ರವೇಶಿಸಿದರು. ನಿಶಾ ಸೆಮಿಫೈನಲ್‌ ಪ್ರವೇಶಿಸಿದ್ದಾರೆ ಒಂದು ಪದಕ ಖಚಿತವಾಗುತ್ತಿತ್ತು.

ಇದನ್ನೂ ಓದಿ: Olympics; ಲಕ್ಷ್ಯ ಸೇನ್ ಕಂಚು ಕಸಿದುಕೊಂಡ ‘ನೋವು’: ಭಾರಿ ನಿರಾಸೆ

1 ಅಂಕದಿಂದ ತಪ್ಪಿದ ಕಂಚು

ಸ್ಕೀಟ್‌ ಮಿಶ್ರ ಡಬಲ್ಸ್‌ನಲ್ಲಿ ಭಾರತದ ಶೂಟರ್‌ಗಳಾದ ಮಹೇಶ್ವರಿ ಚೌಹಾಣ್‌-ಅನಂತ್‌ಜೀತ್‌ ಸಿಂಗ್‌ ನರೂಕಾ 1 ಅಂಕದಿಂದ ಕಂಚಿನ ಪದಕ ತಪ್ಪಿಸಿಕೊಂಡರು. ಚೀನ ವಿರುದ್ಧ 43-44 ಅಂತರದ ಸೋತರು.

ಭಾನುವಾರ ನಡೆದ ಅರ್ಹತಾ ಸುತ್ತಿನಲ್ಲಿ 146 ಅಂಕಗಳನ್ನು ಗಳಿಸಿ 4ನೇ ಸ್ಥಾನ ಪಡೆದುಕೊಂಡಿದ್ದ ಭಾರತ ತಂಡ ಕಂಚಿನ ಪದಕದ
ಹೋರಾಟದಲ್ಲಿ ಆರಂಭದಿಂದಲೂ ಉತ್ತಮ ಪೈಪೋಟಿ ನೀಡಿತು. 4ನೇ ಸುತ್ತಿನಲ್ಲಿ ನರೂಕ 1 ಅಂಕ ಬಿಟ್ಟುಕೊಟ್ಟ ಕಾರಣ ಹಿನ್ನಡೆ ಅನುಭವಿಸಿತು. ಕ ಚೀನಾದ ಶೂಟರ್‌ಗಳಾದ ಯಿಟಿಂಗ್‌ ಜಿಯಾಂಗ್‌-ಜಿಯಾನ್ಲಿನ್‌ ಲ್ಯು ಎಲ್ಲಾ ಅಂಕಗಳನ್ನು ಗಳಿಸಿಕೊಂಡು 44 ಅಂಕ ಸಂಪಾದಿಸಿ ಪದಕ ಗೆದ್ದರು.

ಟಾಪ್ ನ್ಯೂಸ್

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sanjay Sing WFI

Vinesh Phogat ತೀರ್ಪು ನಮ್ಮ ಪರ ಬರುವ ನಿರೀಕ್ಷೆ;ಅದು ವೈಯಕ್ತಿಕ ಪದಕವಲ್ಲ: ಸಂಜಯ್ ಸಿಂಗ್

America

Paris Olympics: ಅಮೆರಿಕಕ್ಕೆ ಬಂತು ಒಲಿಂಪಿಕ್ಸ್‌  ಧ್ವಜ

emanual

Paris: 2036ರ ಒಲಿಂಪಿಕ್ಸ್‌ ಭಾರತ ನಡೆಸ‌ಬಲ್ಲದು: ಫ್ರಾನ್ಸ್‌ ಅಧ್ಯಕ್ಷ

Paris-ind

Paris Olympics 2024ಕ್ಕೆ ವರ್ಣರಂಜಿತ ವಿದಾಯ

IOA shrugs off Vinish Phogat issue; What did PT Usha say?

IOA; ವಿನೀಶ್‌ ಫೋಗಾಟ್‌ ವಿಚಾರದಲ್ಲಿ ತಣ್ಣಗೆ ನುಣುಚಿಕೊಂಡಿತಾ ಐಒಎ?; ಪಿಟಿ ಉಷಾ ಹೇಳಿದ್ದೇನು?

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.