Mangaluru ಪ್ರಯಾಣಿಕನಿಗೆ ಹೃದಯಾಘಾತ; ಆಸ್ಪತ್ರೆಗೆ ಸೇರಿಸಿದರೂ ಜೀವ ಉಳಿಸಲಾಗಲಿಲ್ಲ!


Team Udayavani, Aug 5, 2024, 11:02 PM IST

ಪ್ರಯಾಣಿಕನಿಗೆ ಹೃದಯಾಘಾತ; ಆಸ್ಪತ್ರೆಗೆ ಸೇರಿಸಿದರೂ ಜೀವ ಉಳಿಸಲಾಗಲಿಲ್ಲ!

ಮಂಗಳೂರು: ಪ್ರಯಾಣಿಸುತ್ತಿದ್ದಾಗ ಹೃದಯಾಘಾತಕ್ಕೆ ಒಳಗಾದ ವ್ಯಕ್ತಿಯೊಬ್ಬರ ಜೀವ ಉಳಿಸಲು ಬಸ್ಸನ್ನು ನೇರವಾಗಿ ಆಸ್ಪತ್ರೆಗೆ ಕೊಂಡೊಯ್ದ ಇನ್ನೊಂದು ಘಟನೆ ಸೋಮವಾರ ನಗರದಲ್ಲಿ ನಡೆದಿದೆ. ಆದರೆ ದುರದೃಷ್ಟವಶಾತ್‌ ವ್ಯಕ್ತಿಯು ದಾರಿ ಮಧ್ಯೆಯೇ ಸಾವನ್ನಪ್ಪಿದ್ದಾರೆ.

ಸೋಮವಾರ ಬೆಳಗ್ಗೆ ಸುಮಾರು 8.30ಕ್ಕೆ ಮಂಗಳೂರಿನಿಂದ ಮಣಿಪಾಲಕ್ಕೆ ಸಂಚರಿಸುತ್ತಿದ್ದ ಪಿರೇರಾ ಬಸ್‌ಗೆ ಕೊಟ್ಟಾರಚೌಕಿಯಲ್ಲಿ ಹತ್ತಿದ ವ್ಯಕ್ತಿಯೊಬ್ಬರು ಸುಮಾರು 300 ಮೀ. ದೂರದಲ್ಲೇ (ಕೋಡಿಕಲ್‌ ಕ್ರಾಸ್‌) ಕುಸಿದು ಬಿದ್ದರು. ಮಾತನಾಡಲಾಗದ ಸ್ಥಿತಿಯಲ್ಲಿದ್ದ ಅವರಿಗೆ ಸಹ ಪ್ರಯಾಣಿಕರಾದ ಕಾಪುವಿನ ನರ್ಸಿಂಗ್‌ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಲಿನೆಟ್‌ ಅವರು ಪ್ರಥಮ ಚಿಕಿತ್ಸೆ ನೀಡಿದರು.

ಹೃದಯಾಘಾತವಾಗಿದೆ ಎಂದು ತಿಳಿದ ಕೂಡಲೇ ಬಸ್ಸನ್ನು ಮುಕ್ಕದ ಆಸ್ಪತ್ರೆಗೆ ಕೊಂಡೊಯ್ಯಲಾಯಿತು.

ಫಿಟ್ಸ್‌ ಅಂದುಕೊಂಡಿದ್ದೆ
ಬಸ್‌ ನಿರ್ವಾಹಕ ಅನಿಲ್‌ “ಉದಯವಾಣಿ’ಗೆ ಪ್ರತಿಕ್ರಿಯಿಸಿ, “ಆ ವ್ಯಕ್ತಿಯು ಬಸ್ಸಿಗೆ ಹತ್ತಿದ ಕೂಡಲೇ ಸಹ ಪ್ರಯಾಣಿಕರ ಹೆಗಲ ಮೇಲೆ ಕುಸಿದು ಬಿದ್ದರು. ಫಿಟ್ಸ್‌ ಇರಬಹುದು ಎಂದುಕೊಂಡೆ. ಬಳಿಕ ಹೃದಯಾಘಾತ ಉಂಟಾಗಿರಬಹುದೆಂದು ತತ್‌ಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ನಿರ್ಧರಿಸಿದೆವು. ಆಸ್ಪತ್ರೆಯಲ್ಲಿಯೂ ತತ್‌ಕ್ಷಣ ದಾಖಲಿಸಲು ನೆರವಾಗಿದ್ದಾರೆ’ ಎಂದರು. “ಆ ಪ್ರಯಾಣಿಕ ಕೋವಿಡ್‌ ಅವಧಿಗೂ ಹಿಂದೆ ನಮ್ಮ ಬಸ್ಸಿನಲ್ಲಿ ಬರುತ್ತಿದ್ದರು. ಬಳಿಕ ಅವರನ್ನು ನೋಡಿದ ನೆನಪಿಲ್ಲ’ ಎಂದು ಚಾಲಕ ರವಿ ಹೇಳಿದ್ದಾರೆ.

ಪ್ರಥಮ ಚಿಕಿತ್ಸೆ ನೀಡಿದೆ
ಹೃದಯಾಘಾತದಿಂದ ಕುಸಿದು ಬಿದ್ದ ಕೂಡಲೇ ಅವರಿಗೆ ಸಿಪಿಆರ್‌ ವಿಧಾನದಲ್ಲಿ ಪ್ರಥಮ ಚಿಕಿತ್ಸೆ ನೀಡಿದೆ. ಆದರೂ ಅವರು ಸ್ಪಂದಿಸುವ ಸ್ಥಿತಿಯಲ್ಲಿರಲಿಲ್ಲ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲು ತಿಳಿಸಿದೆ ಎನ್ನುತ್ತಾರೆ ಉಪಚರಿಸಿದ ಲಿನೆಟ್‌.

ಬಸ್‌ನಲ್ಲಿ ವಿದ್ಯಾರ್ಥಿನಿಯೊಬ್ಬರಿಗೆ ಎದೆನೋವು ಉಂಟಾದಾಗ ಬಸ್ಸನ್ನು ನೇರವಾಗಿ ಕಂಕನಾಡಿಯ ಆಸ್ಪತ್ರೆಯೊಂದಕ್ಕೆ ಕೊಂಡೊಯ್ದ ಘಟನೆ ಜು.30ರಂದು ನಗರದಲ್ಲಿ ನಡೆದಿತ್ತು.

ಟಾಪ್ ನ್ಯೂಸ್

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್‌!

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

Mohana Singh: ತೇಜಸ್‌ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್‌ ಆಗಿ ಮೋಹನಾ ಸಿಂಗ್‌ ನೇಮಕ

TTD: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು: ನಾಯ್ಡು ಆರೋಪಕ್ಕೆ YSR ಕಾಂಗ್ರೆಸ್ ತಿರುಗೇಟು

Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.