Bangladesh ದಂಗೆ ಹಿಂದೆ ಪಾಕ್-ಚೀನ ಕುತಂತ್ರ?
ಪ್ರತಿಭಟನೆಗೆ ಐಎಸ್ಐ ಕುಮ್ಮಕ್ಕು?, ಬಾಂಗ್ಲಾ-ಭಾರತ ಸಂಬಂಧ ಬಿರುಕಿಗೆ ಕುತಂತ್ರ
Team Udayavani, Aug 6, 2024, 7:10 AM IST
ಢಾಕಾ: ಬಾಂಗ್ಲಾದಲ್ಲಿ ಸೃಷ್ಟಿಯಾಗಿರುವ ಅರಾಜಕತೆ ಹಿಂದೆ ಪಾಕ್ ಸೇನೆ ಹಾಗೂ ಐಎಸ್ಐ ಕೈವಾಡ ಇದೆ ಎಂಬ ಶಂಕೆ ಮೂಡಿದೆ. ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆಯಲ್ಲಿ ಮಧ್ಯಪ್ರವೇಶಿಸಿ ಅದನ್ನು ರಾಜಕೀಯಗೊಳಿಸುವ ಪ್ರಯತ್ನವನ್ನು ಪಾಕ್ ಸೇನೆ-ಐಎಸ್ಐ ಮಾಡಿದೆ ಎಂದು ಹೇಳಲಾಗುತ್ತಿದೆ.
ಹಿಂಸಾಚಾರ ಹೆಚ್ಚಿಸುವ ಮೂಲಕ ಹಸೀನಾರನ್ನು ಅಧಿಕಾರದಿಂದ ಇಳಿಸಿ, ವಿಪಕ್ಷ ಬಿಎನ್ಪಿಯನ್ನು ಅಧಿಕಾರಕ್ಕೆ ತರಲು ಪಾಕ್ ಕುತಂತ್ರ ನಡೆಸಿದೆ. ಬಾಂಗ್ಲಾ-ಭಾರತ ಸಂಬಂಧದಲ್ಲಿ ಬಿರುಕು ಮೂಡಿಸಬೇಕೆಂದರೆ ಹಸೀನಾ ಅಧಿಕಾರದಿಂದ ಕೆಳಗಿಳಿಯಬೇಕು ಎಂದರಿತ ಪಾಕ್ ಕುತಂತ್ರ ನಡೆಸಿ ದಂಗೆ ಸೃಷ್ಟಿಸಿ ಭಾರತ ವಿರೋಧಿ ಸರಕಾರ ಸ್ಥಾಪಿಸಲು ಪ್ರಯತ್ನಿಸುತ್ತಿದೆ ಎಂದು ವರದಿಯಾಗಿದೆ.
ನಿಷೇಧಿತ ಸಂಘಟನೆ ಜಮಾತ್-ಎ-ಇಸ್ಲಾಮಿಯ ವಿದ್ಯಾರ್ಥಿ ಘಟಕ ಛಾತ್ರ ಶಿಬಿರ್, ಗುಪ್ತಚರ ಸಂಸ್ಥೆ ಐಎಸ್ಐ ಜತೆಗೆ ನಂಟು ಹೊಂದಿದೆ. ಮೊದಲು ಮೀಸ ಲಾತಿ ಪ್ರತಿ ಭಟನೆ ಆರಂಭಿಸಿದ್ದು ಇದೇ ಸಂಘಟನೆ. ಇದಲ್ಲದೇ ಚೀನ ಕೂಡ ಶೇಖ್ ಹಸೀ ನಾರನ್ನು ಆಡಳಿತದಿಂದ ಇಳಿಸಲು ಪಿತೂರಿ ನಡೆಸಿದೆ ಎನ್ನಲಾಗುತ್ತಿದೆ.
ಇತ್ತೀಚೆಗಷ್ಟೇ ಹಸೀನಾ ಅವರು ಚೀನ ಪ್ರವಾಸ ಹೋಗಿದ್ದಾಗ, ಚೀನದಿಂದ ಆರ್ಥಿಕ ಸಹಾಯ ದೊರೆಯದ್ದಕ್ಕೆ ಬೇಸರ ವ್ಯಕ್ತಪಡಿಸಿ, ಪ್ರವಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿ ವಾಪಸಾಗಿದ್ದರು. ಹೀಗಾಗಿ ದಂಗೆಯಲ್ಲಿ ಚೀನದ ಕುಮ್ಮಕ್ಕೂ ಇದೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Explode in Lebanon: ಪೇಜರ್ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು
Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್ ನ ಮೊಸ್ಸಾದ್!
Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್ ಸ್ಟಾರ್ ಬಂಧನ
PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ಪ್ರತೀ ಪೇಜರ್ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್ನ ಮೊಸಾದ್?
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.