DKS vs HDK: ನಿಲ್ಲದ ಕುಮಾರಸ್ವಾಮಿ – ಶಿವಕುಮಾರ್‌ ವಾಕ್ಸಮರ

ನನ್ನ ಆಸ್ತಿಯ ಬಗ್ಗೆ ಚರ್ಚೆಮಾಡಲು ಸದಾ ಸಿದ್ಧವಿದ್ದೇನೆ: ಎಚ್‌.ಡಿ,ಕುಮಾರಸ್ವಾಮಿ

Team Udayavani, Aug 6, 2024, 6:10 AM IST

DK–HDK

ಬೆಂಗಳೂರು: ಪಾದಯಾತ್ರೆ ಮಾಡುತ್ತಿರುವ ಮೈತ್ರಿ ನಾಯಕರು ಹಾಗೂ ಜನಾಂದೋಲನ ಯಾತ್ರೆ ಮಾಡುತ್ತಿರುವ ಕಾಂಗ್ರೆಸ್‌ ನಾಯಕರ ನಡುವಿನ ಮಾತಿನ ಸಮರ ಮುಂದುವರಿದಿದೆ.

ಮದ್ದೂರಿನಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌ ಬಿಜೆಪಿ ಅವಧಿಯಲ್ಲಿನ 13 ಹಗರಣಗಳ ಪಟ್ಟಿ ನೀಡಿ, ಅದರ ಬಗ್ಗೆ ವಿವರಣೆ ನೀಡಿ ಅದರ ಬಗ್ಗೆ ಉತ್ತರಿಸಿ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರಿಗೆ ಸವಾಲೆಸೆದರು. ಅನಂತರ ಪಾದಯಾತ್ರೆ ಮಾಡಿ ಎಂದು ಸವಾಲು ಹಾಕಿದರು.

ಚನ್ನಪಟ್ಟಣದಲ್ಲಿ ನಡೆದ ಪಾದಯಾತ್ರೆ ಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ ವಿರುದ್ಧ ಕಿಡಿಕಾರಿರುವ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, 5 ಮಂದಿ ವಿಧವೆಯರ ಹಣೆಗೆ ಪಿಸ್ತೂಲು ಇಟ್ಟು ಅವರ ನಿವೇಶನಗಳನ್ನು ಬರೆಸಿಕೊಂಡ ಅಣ್ಣ, ತಮ್ಮಂದಿರುವ ಇಲ್ಲಿ ನಿಮ್ಮ ಕ್ಷೇತ್ರ ಉದ್ಧಾರ ಮಾಡುತ್ತಾರಾ ಎಂದು ಪ್ರಶ್ನಿಸಿದರು. ನನ್ನ ಆಸ್ತಿಯ ಬಗ್ಗೆ ಚರ್ಚೆಮಾಡಲು ಸದಾ ಸಿದ್ಧವಿದ್ದೇನೆ. ಅವರು ವಿಧಾನಸೌಧಕ್ಕೆ ಕರೆದಿದ್ದಾರೆ, ಅಲ್ಲಿಯಾದರೂ ಸರಿ. ಅಜ್ಜಯ್ಯನ ಮುಂದೆ ಆಣೆ ಪ್ರಮಾಣಕ್ಕಾದರೂ ಸರಿ, ನಾನು ಸಿದ್ಧವಿದ್ದೇನೆ. ಚರ್ಚೆಗೆ ಅಂಜುವ ಮಾತೇ ಇಲ್ಲ ಎಂದರು.

ಎಚ್‌ಡಿಕೆ ಸೋದರನ ಆಸ್ತಿ ಎಷ್ಟು, ಬಿಎಸ್‌ವೈ ಜೈಲಿಗೆ ಹೋಗಿದ್ಯಾಕೆ: ಡಿಕೆಶಿ

ಬೆಂಗಳೂರು: ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಏಕವಚನದಲ್ಲಿ ವಾಗ್ಧಾಳಿ ನಡೆಸಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ನನ್ನ ಕುಟುಂಬ ಆಸ್ತಿ ಲೆಕ್ಕ ಕೇಳುವ ಮೊದಲು ನಿನ್ನ ಸಹೋದರನ ಆಸ್ತಿಯ ಲೆಕ್ಕ ಕೊಡು ಎಂದು ಕುಮಾರಸ್ವಾಮಿಯನ್ನು ಪ್ರಶ್ನಿಸಿದರೆ, ನಿಮ್ಮಪ್ಪ ಜೈಲಿಗೆ ಹೋಗಿದ್ಯಾಕೆ ಎಂಬುದನ್ನು ಹೇಳು ಎಂದು ವಿಜಯೇಂದ್ರರನ್ನು ಪ್ರಶ್ನಿಸಿದ್ದಾರೆ.

ಸೋಮವಾರ ಜನಾಂದೋಲನ ಸಭೆಗೆ ತೆರಳುವ ಮುನ್ನ ಬೆಂಗಳೂರಿನ ತಮ್ಮ ನಿವಾಸದ ಬಳಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಕುಟುಂಬದ ಆಸ್ತಿ ಲೆಕ್ಕಾಚಾರ ಕೇಳುತ್ತಿದ್ದೀಯಾ? ಎಲ್ಲದಕ್ಕೂ ಲೆಕ್ಕ ಕೊಡುತ್ತೇನೆ. ಇದಕ್ಕೂ ಮೊದಲು ನಿನ್ನ ಸಹೋದರನ ಆಸ್ತಿ ಲೆಕ್ಕ ನೀಡು ಎಂದು ಕುಮಾರಸ್ವಾಮಿಗೆ ಸವಾಲೆಸೆದರು. ನಿನ್ನ ಅಧಿಕಾರಾವಧಿಯಲ್ಲಿ ನಿನ್ನ ಸಹೋದರ ಹೇಗೆ ಅಧಿಕಾರ ದುರುಪಯೋಗ ಮಾಡಿಕೊಂಡ ಎಂಬುದನ್ನು ಮೊದಲು ಲೆಕ್ಕಾಚಾರ ಹಾಕೋಣ. ಆನಂತರ ನನ್ನದು ಕೊಡುತ್ತೇನೆ. ಇದರಲ್ಲಿ ಯಾವುದೇ ಮುಚ್ಚು ಮರೆಯಿಲ್ಲ ಎಂದು ತಿರುಗೇಟು ನೀಡಿದರು.

ಕುಮಾರಸ್ವಾಮಿ ನನ್ನ ಪ್ರಶ್ನೆ ಮಾಡುತ್ತಾನೆ. ಪ್ರಜಾಪ್ರಭುತ್ವದಲ್ಲಿ ಪ್ರಶ್ನಿಸುವ ಹಕ್ಕು ಎಲ್ಲರಿಗೂ ಇದೇ. ಆದರೆ, ಅವರ ಸಹೋದರನ ಆಸ್ತಿ ಬಗ್ಗೆ ಮೊದಲು ಉತ್ತರ ನೀಡಲಿ. ಜೆಡಿಎಸ್‌, ಬಿಜೆಪಿ ಹಗರಣಗಳಿಗೆ ಉತ್ತರ ಕೊಡಿ ಎಂದು ಕೇಳಿದರೂ ಇದುವರೆಗೂ ಉತ್ತರ ಕೊಟ್ಟಿಲ್ಲ ಎಂದರು.

ಮೊದಲು ಯತ್ನಾಳ್‌ಗೆ ಉತ್ತರಿಸಿ
ನಾನು ಭ್ರಷ್ಟಾಚಾರದ ಪಿತಾಮಹ ಎನ್ನುವ ವಿಜಯೇಂದ್ರ, ನಿಮ್ಮ ಅಪ್ಪನನ್ನು ಯಾಕೆ ಜೈಲಿಗೆ ಕಳುಹಿಸಿದೆ? ರಾಜೀನಾಮೆ ಕೊಡಿಸಿದೆ? ಏನಾಯಿತು, ಎಲ್ಲಿ ಬಂತು? ಏಕೆ ಇದೆಲ್ಲ ಆಯಿತು? ಇದರ ಲೆಕ್ಕಾಚಾರವನ್ನು ಮೊದಲು ನೀಡು. ಮೊದಲು ನಿಮ್ಮ ಪಕ್ಷದ ಬಸನಗೌಡ ಪಾಟೀಲ್‌ ಯತ್ನಾಳ್‌, ಗೂಳಿಹಟ್ಟಿ ಶೇಖರ್‌ಗೆ ಉತ್ತರ ಕೊಡಿ. ಆನಂತರ ನನಗೆ ಕೊಡುವಿರಂತೆ ಎಂದು ಕಿಡಿಕಾರಿದರು.

ಕೇಂದ್ರ ಸರಕಾರದಿಂದ ಕರ್ನಾಟಕದ ಪಾಲಿನ ಅನುದಾನ ಬಿಡುಗಡೆ ಮಾಡಿಸಿಲ್ಲ. ಬಿಜೆಪಿ ಆಡಳಿತದಲ್ಲಿದ್ದಾಗ ಮಾಡಿರುವ ಹಗರಣದ ಬಗ್ಗೆ ಉತ್ತರ ಕೇಳಿದ್ದೇವೆ. ಅದ್ಯಾವುದಕ್ಕೂ ಉತ್ತರ ಕೊಟ್ಟಿಲ್ಲ. ಹೀಗಾಗಿ ಬಿಡದಿಯಿಂದ ಮೈಸೂರಿನವರೆಗೆ ಜನಾಂದೋಲನ ಸಭೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಹಣೆಗೆ ಪಿಸ್ತೂಲು ಇಟ್ಟು ಸೈಟು ಬರೆಸಿಕೊಂಡ ಅಣ್ತಮ್ಮ: ಎಚ್‌ಡಿಕೆ

ರಾಮನಗರ: ಐವರು ವಿಧವೆಯರ ಹಣೆಗೆ ಪಿಸ್ತೂಲು ಇಟ್ಟು ಅವರ ನಿವೇಶನಗಳನ್ನು ಬರೆಸಿಕೊಂಡ ಅಣ್ಣ ತಮ್ಮಂದಿರುವ ಇಲ್ಲಿ ನಿಮ್ಮ ಕ್ಷೇತ್ರ ಉದ್ಧಾರ ಮಾಡುತ್ತಾರಾ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಿರುದ್ಧ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ವಾಗ್ಧಾಳಿ ನಡೆಸಿದರು.

ಮೈತ್ರಿ ಪಾದಯಾತ್ರೆ ಚನ್ನಪಟ್ಟಣ ಆಗಮಿಸಿದ ಹಿನ್ನೆಲೆಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಅಲ್ಲಂ ವೀರಭದ್ರಪ್ಪ ಅವರು, ಪೂರ್ಣಪ್ರಜ್ಞಾ ಶಾಲೆಯ ಪಕ್ಕ 2005ರಲ್ಲಿ 5 ಮಂದಿ ವಿಧವಾ ತಾಯಂದಿರ ನಿವೇಶನವನ್ನು ಸೇಲ್‌ ಅಗ್ರಿಮೆಂಟ್‌ ಮಾಡಿಸಿಕೊಂಡಿದ್ದರು. ಬಳಿಕ ಆ ತಾಯಂದಿರನ್ನು ತಡರಾತ್ರಿಯಲ್ಲಿ ಕರೆಸಿ ಹೇಗೆ ಜಮೀನು ಬರೆಸಿಕೊಂಡರು ಎಂಬುದು ಎಲ್ಲರಿಗೂ ತಿಳಿದಿದೆ ಎಂದು ಆರೋಪಿಸಿದರು.

ನಾನು ಕಾಲೇಜಿನಲ್ಲಿ ಓದುತ್ತಿರುವಾಗಲೇ 3 ವಾರ್ಡ್‌ಗಳ ಕಸ ಹೊಡೆಯುವ ಲಾರಿ ಇಟ್ಟುಕೊಂಡು ದುಡಿಮೆ ಮಾಡಿದ್ದೇನೆ. ಸಿನೆಮಾ ಡಬ್ಬ ಮಾರಾಟ ಮಾಡಿ ಬಂದ ಹಣದಲ್ಲಿ ಕೇತುಗಾನಹಳ್ಳಿ ಬಳಿಯ 45 ಎಕರೆ ಜಮೀನು ಖರೀದಿ ಮಾಡಿದ್ದೇನೆ. ಅವರಂತೆ ನಾನು ಬಂಡೆ ಒಡೆದವನಲ್ಲ, ಮತ್ತಿಕೆರೆ ಬಳಿ ಇರುವ ಬಂಡೆಗಳು ಇವರ ಸಾಧನೆ ಹೇಳುತ್ತಿವೆ ಎಂದು ಕುಮಾರಸ್ವಾಮಿ ವಾಗ್ಧಾಳಿ ನಡೆಸಿದರು.

ನನ್ನ ಆಸ್ತಿಯ ಬಗ್ಗೆ ಚರ್ಚೆಮಾಡಲು ಸದಾ ಸಿದ್ಧವಿದ್ದೇನೆ. ಅವರು ವಿಧಾನಸೌಧಕ್ಕೆ ಕರೆದಿದ್ದಾರೆ, ಅಲ್ಲಿಯಾದರೂ ಸರಿ. ಅಜ್ಜಯ್ಯನ ಮುಂದೆ ಆಣೆ ಪ್ರಮಾಣಕ್ಕಾದರೂ ಸರಿ, ನಾನು ಸಿದ್ಧವಿದ್ದೇನೆ. ಚರ್ಚೆಗೆ ಅಂಜುವ ಮಾತೇ ಇಲ್ಲ. ನನ್ನ ಸಹೋದರನ ಬಗ್ಗೆ ಹೇಳುತ್ತಾರೆ. ನಾನು ಅಧಿಕಾರದಲ್ಲಿದ್ದಾಗ ಅವರ ಕುಟುಂಬದ ವಿರುದ್ಧ ಕೇಸ್‌ ಹಾಕಿಸಿದ್ದನ್ನು ಸಾಬೀತು ಮಾಡಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.