Health Department: ಅಂಗಾಂಗ ಸಾಗಾಟಕ್ಕೆ ಸ್ತುತ್ಯರ್ಹ ಮಾರ್ಗಸೂಚಿ


Team Udayavani, Aug 6, 2024, 6:05 AM IST

Human-Organ

ಮಾನವ ಅಂಗಾಂಗಗಳ ಸಾಗಣೆಗೆ ಸಂಬಂಧಿಸಿದಂತೆ ಕೇಂದ್ರ ಸರಕಾರದ ಆರೋಗ್ಯ ಇಲಾಖೆ ಇದೇ ಮೊದಲ ಬಾರಿಗೆ ಮಾರ್ಗಸೂಚಿಯೊಂದನ್ನು ಪ್ರಕಟಿಸಿದೆ. ಹಲವಾರು ತುರ್ತು ಸಂದರ್ಭಗಳಲ್ಲಿ ಮಾನವ ಅಂಗಾಂಗಗಳ ಸಾಗಣೆ ಬಲು ತ್ರಾಸದಾಯಕವಾಗಿ ಅಂಗಾಂಗ ದಾನದ ನೈಜ ಉದ್ದೇಶವೇ ನಿಷ#ಲ ವಾಗುತ್ತಿರುವ ಬಗೆಗೆ ವ್ಯಾಪಕ ದೂರುಗಳು ಕೇಳಿ ಬಂದ ಬಳಿಕ ಕೇಂದ್ರ ಸರಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.

ಇತ್ತೀಚಿನ ಕೆಲವು ವರ್ಷಗಳಿಂದೀಚೆಗೆ ಅಂಗಾಂಗ ದಾನದ ಮಹತ್ವದ ಬಗೆಗೆ ಸಾರ್ವಜನಿಕವಾಗಿ ವ್ಯಾಪಕ ಅರಿವು ಮೂಡಿಸಲಾಗುತ್ತಿರುವುದರಿಂದ ಜನರು ಅಂಗಾಂಗ ದಾನದತ್ತ ಆಸಕ್ತಿ ತೋರಲಾರಂಭಿಸಿದ್ದಾರೆ. ಅದರಲ್ಲೂ ಮುಖ್ಯವಾಗಿ ಮೃತರು/ಮೆದುಳು ನಿಷ್ಕ್ರಿಯಗೊಂಡ ದಾನಿಗಳಿಂದ ಅಂಗಾಂಗ ದಾನ ಈಗಷ್ಟೇ ಹೆಚ್ಚು ಪ್ರಚಲಿತಗೊಳ್ಳುತ್ತಿದೆ. ಅಗತ್ಯವುಳ್ಳವರ ಪ್ರಾಣ ಉಳಿಸುವುದಕ್ಕಾಗಿ ಅಂಗಾಂಗ ದಾನ ಹೆಚ್ಚು ಹೆಚ್ಚು ನಡೆಯಬೇಕು. ಈ ಹಿನ್ನೆಲೆಯಲ್ಲಿ ಮಾರ್ಗದರ್ಶಿ ಸೂತ್ರ ರೂಪಿಸಿರುವುದು ಒಳ್ಳೆಯ ಹೆಜ್ಜೆ.

ಮಾನವ ದೇಹದ ಕೆಲವು ಅಂಗಾಂಗಗಳನ್ನು ಜೀವಂತವಾಗಿರುವಾಗ ಮತ್ತು ಇನ್ನು ಕೆಲವು ಅಂಗಾಂಗಗಳನ್ನು ಮೃತಪಟ್ಟ ಬಳಿಕ ಸುರಕ್ಷಿತವಾಗಿ ತೆಗೆದು ಈ ಅಂಗಾಂಗ ಗಳನ್ನು ಅಗತ್ಯವಿರುವವರಿಗೆ ಕ್ಲಪ್ತ ಸಮಯದಲ್ಲಿ ಜೋಡಣೆ ಮಾಡಿ ಅವರ ಪ್ರಾಣ ರಕ್ಷಿಸಲು ಸಾಧ್ಯವಿದೆ. ಆದರೆ ಕೆಲವು ಸಂದರ್ಭಗಳಲ್ಲಿ ಅಗತ್ಯವಿರುವ ಅಂಗಾಂಗಗಳ ಲಭ್ಯತೆ ಇರುವುದಿಲ್ಲ.

ಇಂತಹ ಪರಿಸ್ಥಿತಿಯಲ್ಲಿ ಇತರೆಡೆಗಳಲ್ಲಿ ಈ ಅಂಗಾಂಗಗಳು ಲಭ್ಯವಿದ್ದಲ್ಲಿ ಅವುಗಳನ್ನು ಕ್ಷಿಪ್ರವಾಗಿ ಮತ್ತು ಎಲ್ಲ ವೈದ್ಯಕೀಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಸಾಗಾಟ ಮಾಡಿ, ಅಗತ್ಯ ಫ‌ಲಾನುಭವಿಗೆ ಜೋಡಣೆ ಮಾಡಿದ್ದೇ ಆದಲ್ಲಿ ಅವರ ಜೀವರಕ್ಷಣೆಯ ಜತೆಯಲ್ಲಿ ಅಂಗಾಂಗ ದಾನ ಮಾಡಿದ ವ್ಯಕ್ತಿ ಮತ್ತವರ ಕುಟುಂಬದ ಮಹತ್ಕಾರ್ಯಕ್ಕೆ ಸೂಕ್ತ ಪ್ರತಿಫ‌ಲ ಲಭಿಸಲು ಸಾಧ್ಯ.

ಯಾವುದೇ ವ್ಯಕ್ತಿಯ ಮೆದುಳು ನಿಷ್ಕ್ರಿಯಗೊಂಡ ಸಂದರ್ಭದಲ್ಲಿ ಆತನ ಅಂಗಾಂಗಗಳಿಗೆ ಹೆಚ್ಚಿನ ಮಹತ್ವ ಲಭಿಸುತ್ತದೆ. ಸಕಾಲದಲ್ಲಿ ಅಂಗಾಂಗವನ್ನು ಆತನ ದೇಹದಿಂದ ಬೇರ್ಪಡಿಸಿ, ವೈದ್ಯಕೀಯ ಮಾರ್ಗಸೂಚಿಯಂತೆ ಅವುಗಳನ್ನು ಸಂರಕ್ಷಿಸಿ, ಅಗತ್ಯವಿರುವ ವ್ಯಕ್ತಿಗಳಿಗೆ ಈ ಅಂಗಾಂಗಗಳನ್ನು ಜೋಡಣೆ ಮಾಡು ವುದು ಬಲುದೊಡ್ಡ ಸವಾಲಿನ ಕಾರ್ಯ. ಇಂತಹ ತುರ್ತು ಸಂದರ್ಭಗಳಲ್ಲಿ ಈ ಅಂಗಾಂಗಗಳನ್ನು ಸುರಕ್ಷಿತವಾಗಿ ರವಾನಿಸುವುದು ಇನ್ನೂ ದೊಡ್ಡ ಸಾಹಸದ ಕೆಲಸ. ರಸ್ತೆ, ರೈಲು ಅಥವಾ ವಿಮಾನ ಮಾರ್ಗವೇ ಇರಲಿ, ಅಂಗಾಂಗ ಸಾಗಣೆ ವೇಳೆ ಪರ್ಯಾಪ್ತ ಮುಂಜಾಗ್ರತೆ ವಹಿಸುವುದು ಅತೀ ಮುಖ್ಯ.

ಅಂಗಾಂಗ ಸಾಗಾಟ ನಡೆಸಲು ಬಳಸುವ ಸಾಧನ, ಅದಕ್ಕೆ ಅಗತ್ಯವಿರುವ ವೈದ್ಯಕೀಯ ವ್ಯವಸ್ಥೆಗಳು, ಅವುಗಳ ಸಂರಕ್ಷಣೆಗೆ ಕೈಗೊಳ್ಳಬೇಕಿರುವ ಉಪಕ್ರಮಗಳ ಜತೆಯಲ್ಲಿ ಸಾಗಾಟದ ಸಂದರ್ಭದಲ್ಲಿ ಸಂಚಾರ ದಟ್ಟಣೆಯ ಕಾರಣದಿಂದಾಗಿ ಸಮಯ ವಿಳಂಬವಾಗಿ ಇಡೀ ಪ್ರಯತ್ನವೇ ನಿಷ#ಲವಾಗದಂತೆ ಎಚ್ಚರಿಕೆ ವಹಿಸುವ ಅಗತ್ಯವಿದೆ. ಇವೆಲ್ಲವನ್ನು ಪರಿಗಣಿಸಿಯೇ ಆರೋಗ್ಯ ಇಲಾಖೆ ಮಾನವ ಅಂಗಾಂಗಗಳ ಸಾಗಾಟಕ್ಕಾಗಿ ಈಗ ಮಾರ್ಗಸೂಚಿಯನ್ನು ರೂಪಿಸಿದೆ.

ದೂರದ ನಗರಗಳಿಗೆ ಅಂಗಾಂಗ ಸಾಗಾಟಕ್ಕಾಗಿ ವಿಮಾನಗಳನ್ನು ಆದ್ಯತೆಯ ಮೇಲೆ ಬಳಸಿಕೊಳ್ಳಲು ಆರೋಗ್ಯ ಇಲಾಖೆ ಮುಂದಾಗಿದೆ. ಇದಕ್ಕಾಗಿ ಅಂಗಾಂಗ ರವಾನೆಯ ಪ್ರತಿಯೊಂದು ಹಂತದಲ್ಲೂ ಅನುಸರಿಸಬೇಕಾದ ಕ್ರಮಗಳು ಮತ್ತು ಸ್ಥಳೀಯ ಆಡಳಿತ ವ್ಯವಸ್ಥೆ ಮಾಡಬೇಕಿರುವ ವ್ಯವಸ್ಥೆಗಳು ಮತ್ತು ಭದ್ರತೆ ಕುರಿತಂತೆ ಈ ಮಾರ್ಗದರ್ಶಿ ಸೂತ್ರದಲ್ಲಿ ಸವಿವರವಾಗಿ ತಿಳಿಸಲಾಗಿದೆ.

ಈ ಮಾರ್ಗಸೂಚಿ ಅಕ್ಷರಶಃ ಕಾರ್ಯಗತವಾದದ್ದೇ ಆದಲ್ಲಿ ಅಂಗಾಂಗ ಸಾಗಾಟದ ಸಂದರ್ಭದಲ್ಲಿ ಸದ್ಯ ತಲೆದೋರುತ್ತಿರುವ ಅಡೆತಡೆಗಳು ನಿವಾರಣೆ ಯಾಗಿ ಅದೆಷ್ಟೋ ಮಂದಿ ಮರುಜೀವ ಪಡೆದುಕೊಳ್ಳಲು ನೆರವಾಗಲಿದೆ. ಜತೆಯಲ್ಲಿ ಅಂಗಾಂಗ ದಾನದ ಬಗೆಗೆ ಜನರಿಗೆ ಇನ್ನಷ್ಟು ಪ್ರೇರಣೆ ಲಭಿಸಲಿದೆ.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವುಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.